Don't Miss!
- Lifestyle ಪ್ರತಿ ಲೀ ಕತ್ತೆ ಹಾಲಿಗೆ ₹5,000..! 20 ಕತ್ತೆಗಳ ಮೂಲಕ ₹2.5 ಕೋಟಿ ವ್ಯವಹಾರ..!
- News Snake Video: ವಿಮಾನದಲ್ಲಿ ಹಾವು ಬಿಟ್ಟ ವ್ಯಕ್ತಿ: ಬೆಂಗಳೂರಿನಲ್ಲಿ ಬಂಧನ- ಶಿವಪುರಿಯಲ್ಲಿ ಅಪರೂಪದ ಹಾವು ಪತ್ತೆ!
- Sports T20 World Cup 2024: ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಆರಂಭಿಕರನ್ನು ಸೂಚಿಸಿದ ಸೌರವ್ ಗಂಗೂಲಿ
- Automobiles ಫೋಕ್ಸ್ವ್ಯಾಗನ್ ವರ್ಟಸ್ ಕಾರಿಗೆ ಮನಸೋತ ಗ್ರಾಹಕರು: ಭಾರೀ ಬೇಡಿಕೆ
- Technology Airtel: ಏರ್ಟೆಲ್ನಿಂದ ಹೊಸ ಅಂತಾರಾಷ್ಟ್ರೀಯ ರೋಮಿಂಗ್ ಪ್ಲ್ಯಾನ್ಗಳು! ಇವು ಹೇಗೆಲ್ಲಾ ಅನುಕೂಲ?
- Finance Bengaluru Karaga: ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್, ಬದಲಿ ಮಾರ್ಗ ವಿವರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪಶು ವೈದ್ಯೆ ಅತ್ಯಾಚಾರ: ದುಷ್ಟರಿಗೆ ಕಠಿಣ ಶಿಕ್ಷೆ ಆಗಬೇಕು ಎಂದ ಚಿರಂಜೀವಿ
ನವೆಂಬರ್ 29 ರಂದು ಹೈದರಾಬಾದ್ ನಲ್ಲಿ ನಡೆದ ಅತ್ಯಾಚಾರ ಘಟನೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ತೆಲಂಗಾಣ ಪಶು ವೈದ್ಯೆ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ಬಗ್ಗೆ ತೆಲುಗು ಚಿತ್ರರಂಗದ ಅನೇಕ ಸ್ಟಾರ್ ಗಳು ಮಾತನಾಡಿದ್ದಾರೆ.
ನಟ ಚಿರಂಜೀವಿ ಈ ಬಗ್ಗೆ ಮಾತನಾಡಿದ್ದು, ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ತಿಳಿಸಿದ್ದಾರೆ. ಒಬ್ಬ ಅಣ್ಣನಾಗಿ ಒಬ್ಬ ತಂದೆಯಾಗಿ ಹೇಳುತ್ತಿದ್ದೇನೆ ಇಂತಹ ಘಟನೆಗಳು ಆಗದೆ ಇರುವ ಹಾಗೆ ಭಯ ಹುಟ್ಟಿಸಬೇಕು ಎಂದಿದ್ದಾರೆ. ಕಷ್ಟದ ಸಂದರ್ಭದಲ್ಲಿ ಯುವತಿಯರು ತಂತ್ರಜ್ಙಾನದ ಮೂಲಕ ಪೊಲೀಸರನ್ನು ಹೇಗೆ ಸಂಪರ್ಕ ಮಾಡಬಹುದು ಎಂದು ತಿಳಿಸಿದ್ದಾರೆ.
ಪ್ರಿಯಾಂಕಾ ರೆಡ್ಡಿ ಅತ್ಯಾಚಾರ, ಹತ್ಯೆ: ಆ ಕರಾಳ ರಾತ್ರಿ ನಡೆದಿದ್ದೇನು?
ನಟ ಚಿರಂಜೀವಿ ಮಾತ್ರದಲ್ಲದೆ ನಿರ್ದೇಶಕ ರಾಮ್ ಗೋಪಾಲ್ ವರ್ಮ, ಸುಕುಮಾರ್, ಪ್ರಿನ್ಸ್ ಮಹೇಶ್ ಬಾಬು, ಅನುಷ್ಕಾ ಶೆಟ್ಟಿ, ಕೀರ್ತಿ ಸುರೇಶ್, ರಶ್ಮಿಕಾ ಮಂದಣ್ಣ, ಡೈಸಿ ಶಾ, ಹನ್ಸಿಕಾ, ಜಗ್ಗೇಶ್, ಅನಿರುದ್ಧ, ಸೋನು ಸೂದ್, ಸೇರಿದಂತೆ ಅನೇಕರು ಧ್ವನಿ ಎತ್ತಿ ನ್ಯಾಯ ಬೇಕು ಎಂದು ಕೇಳಿದ್ದಾರೆ.
ಪ್ರಿಯಾಂಕಾ ಹತ್ಯೆ: ಮಾನವ ವೇಷ ಧರಿಸಿದ ಕೆಟ್ಟ ಶೈತಾನರನ್ನು ಸುಮ್ಮನೆ ಬಿಡಬಾರದು ಎಂದ ಸಲ್ಮಾನ್ ಖಾನ್
26 ವರ್ಷದ ಯುವತಿ ಗುರುವಾರ ರಾತ್ರಿ ಕೆಲಸ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದ ಸಮಯದಲ್ಲಿ ಕಾಮುಕರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ವೆಸಗಿ, ಜೀವಂತವಾಗಿ ಸುಟ್ಟು ಹಾಕಿದ್ದಾರೆ. ಯುವತಿಯ ಹತ್ಯೆಗೆ ಕಾರಣರಾದ ನಾಲ್ಕು ಜನ ಆರೋಪಿಗಳನ್ನು ಪೊಲೀಸರು ಬಂದಿಸಿದ್ದಾರೆ. ಅತ್ಯಾಚಾರಿಗಳನ್ನು ಗಲ್ಲಿಗೇರಿಸಬೇಕೆಂದು ಒತ್ತಾಯಿಸಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ಮಾಡುತ್ತಿದ್ದಾರೆ.