Don't Miss!
- Sports CSK vs LSG IPL 2024: ಐಪಿಎಲ್ನಲ್ಲಿ ಈ ದಾಖಲೆ ಮಾಡಿದ ಮೊದಲ ಸಿಎಸ್ಕೆ ನಾಯಕ ರುತುರಾಜ್ ಗಾಯಕ್ವಾಡ್
- News India weather: ಮಳೆಗಾಗಿ ಕಾಯುತ್ತಿದ್ದವರಿಗೆ ಶಾಕ್ ಕೊಟ್ಟ ಹವಾಮಾನ ಇಲಾಖೆ
- Finance ಅಯೋಧ್ಯೆಯಲ್ಲಿ ಓಲಾ ಕ್ಯಾಬ್ ಸೇವೆ ಆರಂಭ
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದರ್ಶನ್ ದೊಡ್ಡತನದ ಬಗ್ಗೆ ಉದಾಹರಣೆ ಕೊಟ್ಟ ನಟ ಜಗಪತಿ ಬಾಬು
ತೆಲುಗು ನಟ ಜಗಪತಿ ಬಾಬು ನಾಯಕನ ಪಟ್ಟ ಕಳಚಿ ವಿಲನ್ ಪಟ್ಟ ತೊಟ್ಟ ನಂತರ ಹೆಚ್ಚು ಖ್ಯಾತಿ, ಹಣ ಗಳಿಸಿದ್ದಾರೆ. ತೆಲುಗು ಗೆ ಮಾತ್ರವೇ ಸೀನಿಮತವಾಗಿದ್ದ ನಟ ಜಗಪತಿ ಬಾಬು ವಿಲನ್ ಪಾತ್ರಗಳು ಒಪ್ಪಿಕೊಳ್ಳಲು ಆರಂಭಿಸಿದ ನಂತರ ಬಹುಭಾಷಾ ನಟನರಾಗಿದ್ದಾರೆ.
ಕನ್ನಡದಲ್ಲಿಯೂ ಕೆಲವು ಸಿನಿಮಾಗಳಲ್ಲಿ ನಟಿಸಿರುವ ಜಗಪತಿ ಬಾಬು, ಇದೀಗ ರಾಬರ್ಟ್ ಸಿನಿಮಾದಲ್ಲಿಯೂ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಹೆಚ್ಚಾಗಿ ಸಿನಿಮಾ ಕಾರ್ಯಕ್ರಮಗಳಲ್ಲಿ ಭಾಗವಹಿಸದ ಜಗಪತಿ ಬಾಬು ನಿನ್ನೆ ರಾಬರ್ಟ್ ಪ್ರೀ ರಿಲೀಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ದರ್ಶನ್ ಬಗ್ಗೆ ಜಗಪತಿ ಬಾಬು ಆಡಿದ ಮಾತುಗಳು ದರ್ಶನ್ ಅವರ ಅಭಿಮಾನಿಗಳು ಏಕೆ ದರ್ಶನ್ ಅನ್ನು ಅಷ್ಟಾಗಿ ಆರಾಧಿಸುತ್ತಾರೆ ಎಂಬುದಕ್ಕೆ ಸಾಕ್ಷಿಯಾಗಿತ್ತು. ದರ್ಶನ್ ಅವರ ದೊಡ್ಡತನಗಳ ಬಗ್ಗೆ ಉದಾಹರಣೆ ನೀಡಿ ವಿವರಿಸಿದರು ಜಗಪತಿ ಬಾಬು.
ದರ್ಶನ್ ನಿಜಜೀವನದಲ್ಲೂ ಹೀರೋ: ಜಗಪತಿ ಬಾಬು
'ದರ್ಶನ್ ಕಾಲ ಮಾತ್ರ ನೆಲದಲ್ಲಿರುತ್ತದೆ ಎಂದಲ್ಲ ಅವರ ತಲೆ ಕೂಡ ನೆಲದ ಮೇಲೆಯೇ ಇರುತ್ತದೆ ಆದರೆ ಆತನ ವ್ಯಕ್ತಿತ್ವ ಮಾತ್ರ ಆಕಾಶದಲ್ಲಿರುತ್ತದೆ. ಆದ ಸ್ಟಾರ್, ಆತನೊಬ್ಬ ರಿಯಲ್ ಸ್ಟಾರ್. ನಟರು ಸಾಕಷ್ಟು ಮಂದಿ ಇರುತ್ತಾರೆ. ನಟನಾಗುವುದು ದೊಡ್ಡದಲ್ಲ, ಆದರೆ ಜೀವನದಲ್ಲಿ ಒಬ್ಬ ಹೀರೋ ದೊಡ್ಡದು' ಎಂದರು ಜಗಪತಿ ಬಾಬು.
ಯಾರೇ ಸಹಾಯ ಕೇಳಿದರೂ ಮಾಡುತ್ತಾರೆ ದರ್ಶನ್: ಜಗಪತಿ ಬಾಬು
'ಯಾರಿಗೆ ಏನು ಬೇಕೆಂದರೆ ಹಾಗೆ ಕೊಟ್ಟುಬಿಡುತ್ತಾರೆ. ಏನು ಸಹಾಯ ಕೇಳಿದರು ಮಾಡಿಬಿಡುತ್ತಾರೆ. ಕೊಟಿಗಳಾದರು ಪರ್ವಾಗಿಲ್ಲ ಹಾಗೆ ಕೊಟ್ಟುಬಿಡುತ್ತಾರೆ. ಅದು ಆತನ ದೊಡ್ಡ ಗುಣ ಅದನ್ನು ನಾನೇ ಕಣ್ಣಾರೆ ನೋಡಿದ್ದೇನೆ' ಎಂದರು ಜಗಪತಿ ಬಾಬು.
ನಾನು ಸುಳ್ಳು ಹೇಳುವವನಲ್ಲ: ಜಗಪತಿ ಬಾಬು
'ನಾನು ಬೇರೊಂದು ಸಿನಿಮಾದ ಚಿತ್ರೀಕರಣಕ್ಕೆ ಮೈಸೂರಿಗೆ ಹೋಗಿದ್ದೆ. ನನ್ನನ್ನು ಹುಡುಕಿಕೊಂಡು ಮೈಸೂರಿಗೆ ಬಂದ ದರ್ಶನ್ ನನ್ನನ್ನು ಸ್ವಾಗತಿಸಲೆಂದು ವಿಶೇಷವಾಗಿ ಎಲ್ಲರನ್ನೂ ಕರೆಸಿ ಒಂದು ಕಾರ್ಯಕ್ರಮವನ್ನೇ ಮಾಡಿದರು. ಆ ಘಟನೆಯೇ ನಿಮಗೆ ದರ್ಶನ್ನ ವ್ಯಕ್ತಿತ್ವವನ್ನು ಪರಿಚಯಿಸುತ್ತದೆ. ನಾನು ಸುಳ್ಳು ಹೇಳುವವನಲ್ಲ' ಎಂದರು ಜಗಪತಿ ಬಾಬು.
Recommended Video
'ನಮ್ಮ ಮನೆಗೆ ಅವರು ಬಂದಿದ್ದಾರೆ, ಅವರನ್ನು ಸ್ವಾಗತಿಸಬೇಕಿದೆ'
'ಇದೀಗ ದರ್ಶನ್ ಹಾಗು ರಾಬರ್ಟ್ ತಂಡ ನಮ್ಮ ಊರಿಗೆ ಬಂದಿದೆ. ನಮ್ಮ ಹೊಸಲು ತುಳಿದು ಅವರು ಇಲ್ಲಿಗೆ ಬಂದಿದ್ದಾರೆ, ಅವರನ್ನು ನಾವು ಎದೆಯಲ್ಲಿಟ್ಟುಕೊಂಡು ನೋಡಿಕೊಳ್ಳಬೇಕು. ಈ ಸಿನಿಮಾ ಹಿಟ್ ಆಗಿಯೇ ಆಗುತ್ತದೆ, ಆದರೆ ನಾವುಗಳು ಸಿನಿಮಾವನ್ನು ನಮ್ಮದೇ ಸಿನಿಮಾ ಎಂದು ನೋಡಬೇಕಿದೆ' ಎಂದರು ಜಗಪತಿ ಬಾಬು.