Don't Miss!
- Finance ಎರಡು ದಿನ ಬೆಂಗಳೂರಿನಲ್ಲಿ ಮದ್ಯ ಮಾರಾಟ ನಿಷೇಧ, 144 ಸೆಕ್ಷನ್ ಜಾರಿ, ದಿನಾಂಕ ವಿವರ
- Technology ವಿವೋ T3x 5G ಫೋನಿನ ಫಸ್ಟ್ ಸೇಲ್ ಯಾವಾಗ?..ಆಫರ್ ಬೆಲೆ ಎಷ್ಟು?
- News ₹8 Lakh Gold: ಆಟೋದಲ್ಲೇ ಬಿಟ್ಟಿದ್ದ 8 ಲಕ್ಷ ರೂ. ಚಿನ್ನಾಭರಣವಿದ್ದ ಬ್ಯಾಗ್ ಮರಳಿ ಸಿಕ್ಕಿದ್ದೆ ರೋಚಕ
- Lifestyle ಮೊದಲ ಯತ್ನದಲ್ಲೇ ಯುಪಿಎಸ್ಸಿ ಪಾಸ್..! ಸ್ಫೂರ್ತಿಯಾಗಿದ್ದು ವಿರಾಟ್..!
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Automobiles ವಂದೇ ಭಾರತ್ ಸ್ಲೀಪರ್, ಸೂಪರ್ ಆಪ್.. ರೈಲ್ವೆಯಿಂದ ಬಿಗ್ ಪ್ಲ್ಯಾನ್: ನೀವು ತಿಳಿಯಬೇಕಾದ ವಿಚಾರಗಳಿವು!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆಂಧ್ರ ಸಿಎಂ ಜಗನ್ ಬೆಂಬಲಿಗರ ವಿರುದ್ಧ ನಟಿ ಮಾಧವಿ ಬೆಂಕಿ
ಆಂಧ್ರಪ್ರದೇಶ ಸಿಎಂ ಜಗನ್ಮೋಹನ್ ರೆಡ್ಡಿ ಬೆಂಬಲಿಗರ ವಿರುದ್ಧ ಕೆರಳಿ ಕೆಂಡವಾಗಿದ್ದಾರೆ ನಟಿ ಮಾಧವಿ ಲತಾ.
ತೆಲುಗು ಚಿತ್ರರಂಗದ ನಟಿ, ಬಿಜೆಪಿ ಕಾರ್ಯಕರ್ತೆಯೂ ಆಗಿರುವ ನಟಿ ಮಾಧವಿ ಲತಾಗೆ ಕೆಲವರು ಸಾಮಾಜಿಕ ಜಾಲತಾಣದಲ್ಲಿ ಅವಾಚ್ಯವಾಗಿ ನಿಂದಿಸಿ ಬೆದರಿಕೆ ಹಾಕಿದ್ದರು. ಇದರ ವಿರುದ್ಧ ಸೈಬರಾಬಾದ್ ಪೊಲೀಸ್ ಠಾಣೆಯಲ್ಲಿ ಕಮೀಷನರ್ ವಿಸಿ ಸಜ್ಜನರ್ಗೆ ಲಿಖಿತ ದೂರು ನೀಡಿದ್ದಾರೆ ನಟಿ.
ನಟಿ ಮಾಧವಿ, ಆಂಧ್ರಪ್ರದೇಶ ಸಿಎಂ ಜಗನ್ ಮೋಹನ್ ವಿರುದ್ಧ ಕೆಲವು ಪೋಸ್ಟ್ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದರು. 'ಜಗನ್ ಮೋಹನ್ ಸರ್ಕಾರವು ಹಿಂದುಗಳ ಮಂದಿರಗಳನ್ನು ಒಡೆಯುತ್ತಿದೆ' ಎಂಬರ್ಥದ ಕೆಲವು ಪೋಸ್ಟ್ಗಳನ್ನು ಹಂಚಿಕೊಂಡಿದ್ದರು.
ಇದರ ನಂತರ ಮಾಧವಿ ಲತಾ ಗೆ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆಗಳು ಹೆಚ್ಚಾದವು. ಮಾಧ್ಯಮಗಳೊಂದಿಗೆ ಮಾತನಾಡಿರುವ ಮಾಧವಿ ಲತಾ, 'ನನ್ನ ರಾಜಕೀಯ ಎದುರಾಳಿಗಳು ಬೇಕೆಂದೇ ನನ್ನ ಗುರಿ ಮಾಡಿ ಸಾಮಾಜಿಕ ಜಾಲತಾಣದಲ್ಲಿ ದಾಳಿ ಮಾಡುತ್ತಿದ್ದಾರೆ. ನನ್ನ ಚಾರಿತ್ರ್ಯ ವಧೆಗೆ ಪ್ರಯತ್ನಗಳು ನಡೆಯುತ್ತಿವೆ' ಎಂದಿದ್ದಾರೆ ಮಾಧವಿ.
'ಈ ವಿಷಯವನ್ನು ಇಷ್ಟಕ್ಕೇ ಬಿಡುವುದಿಲ್ಲ. ನನ್ನನ್ನು ಮಾನಸಿಕವಾಗಿ ಕೊಲ್ಲುವ ಪ್ರಯತ್ನ ಮಾಡುತ್ತಿರುವ ಗುಂಪಿಗೆ ಕಾನೂನು ರೀತಿ ಶಿಕ್ಷೆ ಆಗುವವರೆಗೂ ಬಿಡುವುದಿಲ್ಲ' ಎಂದಿದ್ದಾರೆ ನಟಿ ಮಾಧವಿ ಲತಾ.
Recommended Video
2018 ರಲ್ಲಿ ಶ್ರೀ ರೆಡ್ಡಿ ವಿವಾದವಾದಾಗ ನಟಿ ಮಾಧವಿ ಲತಾ ಫಿಲಂ ಚೇಂಬರ್ ಎದುರು ಶ್ರೀರೆಡ್ಡಿ ವಿರುದ್ಧ ಪ್ರತಿಭಟನೆ ಮಾಡಿದ್ದರು. ಪವನ್ ಕಲ್ಯಾಣ್ ಹಾಗೂ ಇತರರ ವಿರುದ್ಧ ಹೇಳಿಕೆ ನೀಡಿದ್ದ ಶ್ರೀರೆಡ್ಡಿಯನ್ನು ಬಂಧಿಸಬೇಕು ಎಂದು ಒತ್ತಾಯಿಸಿದ್ದರು. ಆಗ ನಟಿ ಮಾಧವಿ ಅವರನ್ನು ಬಂಧಿಸಿದ್ದ ಪೊಲೀಸರು ನಂತರ ಬಿಡುಗಡೆ ಮಾಡಿದ್ದರು.