Don't Miss!
- News ಸಿನಿಮಾದಲ್ಲಿ ರೀಲ್ ಬಿಟ್ಟಂತೆ ರಾಜಕೀಯದಲ್ಲೂ ರೀಲ್ ಬಿಟ್ಟರೆ ಜನ ಒಪ್ಪಲ್ಲ: ಡಿ ಕೆ ಸುರೇಶ್ ಹೀಗೆ ಹೇಳಿದ್ದು ಯಾರಿಗೆ?
- Automobiles ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಿಶ್ಚಿತಾರ್ಥ ಸಂಭ್ರಮದಲ್ಲಿ ಚಿರಂಜೀವಿ ಸಹೋದರನ ಪುತ್ರಿ ನಿಹಾರಿಕಾ
ಮೆಗಾಸ್ಟಾರ್ ಚಿರಂಜೀವಿ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಕುಟುಂಬದ ಏಕೈಕ ಹೆಣ್ಣು ಮಗಳು ನಟಿ ನಿಹಾರಿಕಾ ಕೊನಿಡೆಲಾ ಅವರ ನಿಶ್ಚಿತಾರ್ಥ ಸಮಾರಂಭ ನಡೆಯುತ್ತಿದೆ. ಚಿರಂಜೀವಿ ಸಹೋದರ ನಾಗಬಾಬು ಪುತ್ರಿ ನಿಹಾರಿಕಾ ಕೊನಿಡೆಲಾ ಉದ್ಯಮಿ ಚೈತನ್ಯ ಜೊನ್ನಲಗೆಡ್ಡ ಅವರ ಜೊತೆ ಎಂಗೇಜ್ ಮೆಂಟ್ ಮಾಡಿಕೊಳ್ಳುತ್ತಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ.
Recommended Video
ಗೌಪ್ಯವಾಗಿ ನಡೆಯುತ್ತಿರುವ ನಿಶ್ಚಿತಾರ್ಥ ಸಮಾರಂಭದಲ್ಲಿ ಕುಟುಂಬದವರು ಮತ್ತು ತೀರ ಆಪ್ತರು ಮಾತ್ರ ಭಾಗಿಯಾಗಿದ್ದಾರೆ ಎಂದು ವರದಿಯಾಗಿದೆ. ನಿಹಾರಿಕಾ ನಿಶ್ಚಿತಾರ್ಥದ ಸುದ್ದಿ ಕಳೆದ ಕೆಲವು ತಿಂಗಳ ಹಿಂದೆಯೇ ವೈರಲ್ ಆಗಿತ್ತು. ರಹಸ್ಯವಾಗಿ ನಿಹಾರಿಕಾ ಎಂಜೇಗ್ ಮೆಂಟ್ ಮಾಡಿಕೊಂಡಿದ್ದಾರೆ ಎನ್ನುವ ಸುದ್ದಿ ಹರಿದಾಡಿತ್ತು. ಆದರೆ ಭಾವಿ ಪತಿಯನ್ನು ಪರಿಚಯಿಸಿ ಎಂಗೇಜ್ ಮೆಂಟ್ ಇನ್ನೂ ನಡೆದಿಲ್ಲ ಎಂದು ಹೇಳಿದ್ದರು. ಮುಂದೆ ಓದಿ..
ತಲಾ ಅಜಿತ್ ಅಭಿನಯದ ಈ ಸೂಪರ್ ಹಿಟ್ ಸಿನಿಮಾದ ತೆಲುಗು ರಿಮೇಕ್ ನಲ್ಲಿ ಮೆಗಾಸ್ಟಾರ್
ನಿಹಾರಿಕಾ ನಿಶ್ಚಿತಾರ್ಥ ಸಮಾರಂಭದಲ್ಲಿ ಮೆಗಾಸ್ಟಾರ್ ಕುಟುಂಬ
ಹೈದರಾಬಾದ್ ನಲ್ಲಿ ನಡೆಯುತ್ತಿರುವ ನಿಶ್ಚಿತಾರ್ಥ ಸಮಾರಂಭದಲ್ಲಿ ಕೇವಲ ಕುಟುಂಬದವರು ಮಾತ್ರ ಭಾಗಿಯಾಗಿದ್ದಾರೆ. ಚಿರಂಜೀವಿ, ರಾಮ್ ಚರಣ್ ಪವನ್ ಕಲ್ಯಾಣ್, ಅಲ್ಲು ಅರ್ಜುನ್ ಸೇರಿದ್ದಂತೆ ಇಡೀ ಕುಟುಂಬ ನಿಹಾರಿಕಾ ನಿಶ್ಚಿತಾರ್ಥ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ.
ತಿಂಗಳ ಹಿಂದೆ ಭಾವಿ ಪತಿಯನ್ನು ಪರಿಚಯಿಸಿದ್ದ ನಿಹಾರಿಕಾ
ಕಳೆದ ತಿಂಗಳು ನಿಶ್ಚಿತಾರ್ಥದ ಸುದ್ದಿ ವೈರಲ್ ಆಗುತ್ತಿದ್ದಂತೆ ನಿಹಾರಿಕಾ ಭಾವಿ ಪತಿಯನ್ನು ಪರಿಚಯಿಸಿದ್ದರು. ಭಾವಿ ಜೊತೆ ಫೋಟೋ ಹಂಚಿಕೊಂಡಿದ್ದ ನಿಹಾರಿಕಾ ಅಧಿಕೃತವಾಗಿ ಎಂಗೇಜ್ ಮೆಂಟ್ ನಡೆದಿಲ್ಲ. ಆದರೆ ಎಂಗೇಜ್ ಆಗಿರುವ ವಿಚಾರವನ್ನು ಅನೌನ್ಸ್ ಮಾಡುತ್ತಿರುವುದಾಗಿ ಹೇಳಿದ್ದರು. ಆದರೆ ಇವತ್ತು ನಿಶ್ಚಿತಾರ್ಥ ಸಮಾರಂಭ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ.
ಚಿರಂಜೀವಿ 'ಆಚಾರ್ಯ' ಸಿನಿಮಾದಲ್ಲಿ ನಟ ರಾಮ್ ಚರಣ್ ಪಾತ್ರಕ್ಕೆ ಕತ್ತರಿ
ನಿಹಾರಿಕಾ ಮದುವೆ ಆಗುತ್ತಿರುವ ಹುಡುಗ ಯಾರು?
ನಿಹಾರಿಕಾ ಮದುವೆ ಆಗುತ್ತಿರುವ ಹುಡುಗ ಚೈತನ್ಯ ಜೊನ್ನಲಗೆಡ್ಡ ಉದ್ಯಮಿ. ಹೈದರಾಬಾದ್ ನ ಖ್ಯಾತ ಎಂ ಎನ್ ಸಿ ಕಂಪನಿಯನ್ನು ನಡೆಸುತ್ತಿದ್ದಾರೆ. ಚೈತನ್ಯ ಗುಂಟೂರ್ ನ ಇನ್ಸ್ ಪೆಕ್ಟರ್ ಜನರೆಲ್ ಆಫ್ ಪೊಲೀಸ್ ಪ್ರಭಾಕರ್ ರಾವ್ ಅವರ ಪುತ್ರ. ಹೈದರಾಬಾದ್ ನಲ್ಲಿಯೆ ಹುಟ್ಟಿ ಬೆಳೆದ ಚೈತನ್ಯ ವಿದ್ಯಾಭ್ಯಾಸ ಸಹ ಹೈದರಾಬಾದ್ ನಲ್ಲಿಯೇ ಮುಗಿಸಿದ್ದಾರೆ.
ವರ್ಷದ ಕೊನೆಯಲ್ಲಿ ಮದುವೆ
ಚೈತನ್ಯ, ಮೆಗಾಸ್ಟಾರ್ ಕುಟುಂಬದವರು ಹುಡುಕಿದ ಹುಡುಕ. ಕುಟುಂಬದವರು ಹುಡುಕಿದ ಹುಡುಗನನ್ನೆ ಇಷ್ಟಪಟ್ಟು ಅರೆಂಜ್ ಮ್ಯಾರೇಜ್ ಆಗುತ್ತಿದ್ದಾರೆ. ಸದ್ಯ ನಿಶ್ಚಿತಾರ್ಥ ಮಾಡಿಕೊಳ್ಳುತ್ತಿರುವ ನಿಹಾರಿಕಾ ಮದುವೆ ಈ ವರ್ಷದ ಕೊನೆಯಲ್ಲಿ ಅತವಾ ಮುಂದಿನ ವರ್ಷ ಫೆಬ್ರವರಿಯಲ್ಲಿ ಹಸೆಮಣೆ ಏರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.