Don't Miss!
- Finance ಜಗತ್ತಿಗೆ ಭಾರತವೇ ಬಾಸ್, ಅಂತಾರಾಷ್ಟ್ರೀಯ ಹಣಕಾಸು ನಿಧಿ ಹೇಳಿದ್ದು ಏನು?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- News Realme: ಅಗ್ಗದ 5G ಸ್ಮಾರ್ಟ್ಫೋನ್ ಬಿಡುಗಡೆ ರೆಡಿ; ಇದರ ಬೆಲೆ ಎಷ್ಟು ಗೊತ್ತಾ?
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಬೆಂಗಳೂರು ನಾಗರತ್ನಮ್ಮ' ಬಯೋಪಿಕ್: ಅನುಷ್ಕಾ ಬದಲು ಸಮಂತಾ ನಟನೆ
ಕರ್ನಾಟಕ ಸಂಗೀತದ ಮೇರು ಗಾಯಕಿ ಬೆಂಗಳೂರು ನಾಗರತ್ನಮ್ಮ ಅವರ ಜೀವನ ತೆರೆಯ ಮೇಲೆ ಬರಲು ಸಿದ್ಧವಾಗುತ್ತಿದೆ. ಕರ್ನಾಟಕ ಸಂಗೀತಕ್ಕೆ ಅಪಾರ ಕೊಡುಗೆ ನೀಡಿರುವ ನಾಗರತ್ನಮ್ಮ ಅವರ ಜೀವನವನ್ನು ಸಿನಿಮಾ ರೂಪಕ್ಕೆ ತರುತ್ತಿದ್ದಾರೆ ಖ್ಯಾತ ನಿರ್ದೇಶಕ ಸಿಂಗೀತಂ ಶ್ರೀನಿವಾಸ್ ರಾವ್. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಸಿನಿಮಾ ವಿಜಯದಶಮಿ ದಿನ ಸೆಟ್ಟೇರಬೇಕಿತ್ತು. ಆದರೀಗ ಸಿನಿಮಾ ತಾತ್ಕಾಲಿಕ ಸ್ಥಗಿತವಾಗಿದೆ ಎನ್ನುವ ಸುದ್ದಿ ಕೇಳಿಬರುತ್ತಿದೆ.
Recommended Video
ಭಾರಿ ಕುತೂಹಲ ಮೂಡಿಸಿರುವ ನಾಗರತ್ನಮ್ಮ ಬಯೋಪಿಕ್ ನಲ್ಲಿ ಯಾರು ಕಾಣಿಸಿಕೊಳ್ಳಲಿದ್ದಾರೆ ಎನ್ನುವುದು ಸಿನಿಪ್ರಿಯರ ಪ್ರಶ್ನೆಯಾಗಿತ್ತು. ಈ ಕುತೂಹಲಕ್ಕೀಗ ತೆರೆಬಿದ್ದಿದೆ. ನಟಿ ಅನುಷ್ಕಾ ಶೆಟ್ಟಿ ಮತ್ತು ಸಮಂತಾ ಇಬ್ಬರಲ್ಲಿ ಒಬ್ಬರು ನಾಗರತ್ನಮ್ಮ ಆಗಿ ಬಣ್ಣ ಹಚ್ಚಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿತ್ತು. ಇದೀಗ ನಾಗರತ್ನಮ್ಮ ಪಾತ್ರ ಸಮಂತಾ ಪಾಲಾಗಿದೆ ಎನ್ನಲಾಗುತ್ತಿದೆ. ಮುಂದೆ ಓದಿ...
ವರ್ಷದ ಹಿಂದೆ ಮಾಡಿದ ತಪ್ಪಿಗೆ ನಿರ್ದೇಶಕಿಯ ಕ್ಷಮೆ ಕೋರಿದ ಸಮಂತಾ
ನಾಗರತ್ನಮ್ಮ ಬಯೋಪಿಕ್ ಮುಂದೂಡಿಕೆ
88 ವರ್ಷದ ಖ್ಯಾತ ನಿರ್ದೇಶಕ ಸಿಂಗೀತಂ ಶ್ರೀನಿವಾಸ್ ರಾವ್ ನಾಗರತ್ನಮ್ಮ ಜೀವನವನ್ನು ಸಿನಿಮಾ ರೂಪಕ್ಕೆ ತರುತ್ತಿದ್ದಾರೆ. ಇಳಿ ವಯಸ್ಸಿನಲ್ಲಿಯೂ ನಿರ್ದೇಶನದ ಜವಾಬ್ದಾರಿ ವಹಿಸಿಕೊಂಡು ಯುವ ಪೀಳಿಗೆಗೆ ಸವಾಲು ಎಸೆದಿರುವ ಶ್ರೀನಿವಾಸ್ ರಾವ್ ಅವರಿಗೆ ಕೊರೊನಾ ಅಡ್ಡಿಯಾಗಿದೆ. ಕೋವಿಡ್ ಪ್ರಕರಣ ಹೆಚ್ಚಾಗುತ್ತಿರುವ ಕಾರಣ 88 ವರ್ಷದ ಸಿಂಗೀತಂ ಶ್ರೀನಿವಾಸ್ ರಾವ್ ಮನೆಯಿಂದ ಹೊರಬರದಿರಲು ನಿರ್ಧರಿಸಿದ್ದಾರಂತೆ. ಹಾಗಾಗಿ ಸಿನಿಮಾವನ್ನು ತಡವಾಗಿ ಪ್ರಾರಂಭಿಸಲು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಅನುಷ್ಕಾ ಶೆಟ್ಟಿ ಹೆಸರು ಕೇಳಿಬರುತ್ತಿತ್ತು
ಬೆಂಗಳೂರು ನಾಗರತ್ನಮ್ಮ ಸಿನಿಮಾ ಅನೌನ್ಸ್ ಮಾಡುತ್ತಿದ್ದಂತೆ, ಯಾರು ನಟಿಸಲಿದ್ದಾರೆ ಎನ್ನುವ ಕುತೂಹಲ ಸಿನಿಪ್ರಿಯರಲ್ಲಿತ್ತು. ಈ ಚಿತ್ರಕ್ಕಾಗಿ ನಟಿ ಅನುಷ್ಕಾ ಶೆಟ್ಟಿ ಮತ್ತು ಸಮಂತಾ ನಡುವೆ ಪೈಪೋಟಿ ಏರ್ಪಟ್ಟಿತ್ತು. ಅನುಷ್ಕಾ ಶೆಟ್ಟಿ ನಟಿಸುವುದು ಬಹುತೇಕ ಖಚಿತವಾಗಿತ್ತು. ಆದರೆ ಅನುಷ್ಕಾ ಕಡೆಯಿಂದ ಗ್ರೀನ್ ಸಿಗ್ನಲ್ ಸಿಗದ ಕಾರಣ, ಈ ಸಿನಿಮಾ ಈಗ ಸಮಂತಾ ಪಾಲಾಗಿದೆ.
ನಟಿ ಸಮಂತಾ ಹಾಕಿದ ಸವಾಲು ಸ್ವೀಕರಿಸಿದ ಕಿರಿಕ್ ಸುಂದರಿ ರಶ್ಮಿಕಾ ಮಂದಣ್ಣ
ನಾಗರತ್ನಮ್ಮ ಆಗಿ ನಟಿಸುತ್ತಿದ್ದಾರೆ ಸಮಂತಾ
ಬೆಂಗಳೂರು ನಾಗರತ್ನಮ್ಮ ಆಗಿ ನಟಿಸಲು ಸಮಂತಾ ಕೂಡ ಉತ್ಸುಕರಾಗಿದ್ದಾರೆ. 'ಜಾನು' ಸಿನಿಮಾದ ಬಳಿಕ ಸಮಂತಾ ಅಧಿಕೃತವಾಗಿ ಯಾವುದೇ ಸಿನಿಮಾ ಅನೌನ್ಸ್ ಮಾಡಿಲ್ಲ. 'ದಿ ಫ್ಯಾಮಿಲಿ ಮ್ಯಾನ್' ವೆಬ್ ಸಿರೀಸ್ ನಲ್ಲಿ ನಟಿಸುತ್ತಿರುವ ಸಮಂತಾ ಬಳಿಕ 'ಬೆಂಗಳೂರು ನಾಗರತ್ನಮ್ಮ' ಪಾತ್ರಕ್ಕೆ ಬಣ್ಣ ಹಚ್ಚಲಿದ್ದಾರೆ ಎಂದು ಹೇಳಲಾಗುತ್ತಿದೆ.
ಪ್ಯಾನ್ ಇಂಡಿಯಾ ಸಿನಿಮಾ 'ಬೆಂಗಳೂರು ನಾಗರತ್ನಮ್ಮ'
ನಾಗರತ್ನಮ್ಮ ಪ್ಯಾನ್ ಇಂಡಿಯಾ ಕಾನ್ಸೆಪ್ಟ್ ನಲ್ಲಿ ನಿರ್ಮಾಣವಾಗಲಿದೆಯಂತೆ. ದಕ್ಷಿಣ ಭಾರತದ ಭಾಷೆಯ ಜೊತೆಗೆ ಹಿಂದಿಯಲ್ಲೂ ಸಿನಿಮಾ ರಿಲೀಸ್ ಮಾಡುವ ಪ್ಲಾನ್ ಮಾಡಿದೆ ಚಿತ್ರತಂಡ. ಅಂದ್ಹಾಗೆ ಪೀಪಲ್ ಮೀಡಿಯಾ ಫ್ಯಾಕ್ಟರಿ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ.
ಸಮಂತಾ ಅಂದ್ರೆ ಇಷ್ಟ ಎಂದ ಅರ್ಜುನ್ ಕಪೂರ್ ಗೆ ನಾಗಚೈತನ್ಯ ಪತ್ನಿ ಹೇಳಿದ್ದೇನು?
ನಾಗರತ್ನಮ್ಮ ಬಗ್ಗೆ...
ನಂಜನಗೂಡು ಮೂಲದ ನಾಗರತ್ನಮ್ಮ, 5 ವರ್ಷದವರಾಗಿದ್ದಾಗಲೇ ದೇವದಾಸಿಯಾದವರು. 15ನೇ ವಯಸ್ಸಿನಲ್ಲಿ ಪಿಟೀಲು ವಾದಕಿಯಾಗಿ ಹಾಗೂ ನರ್ತಕಿಯಾಗಿ ಗುರುತಿಸಿಕೊಂಡರು. ಅಮೋಘ ಕಂಠಸಿರಿಯ ಮೂಲಕ ನಾಡಿನಾದ್ಯಂತ ಜನಪ್ರಿಯರಾಗಿದ್ದರು. ಹಾಡುಗಾರಿಕೆಯಿಂದಲೇ ಪ್ರಸಿದ್ಧಿ ಪಡೆದಿದ್ದ ಅವರನ್ನು ಮೈಸೂರು ಮಹಾರಾಜರು ಗೌರವಿಸಿದ್ದರು. ತ್ಯಾಗರಾಜ ಆರಾಧನೆ ವೈಭವದಿಂದ ನಡೆಯುವಂತೆ ಮಾಡಿದ ಕೀರ್ತಿ ನಾಗರತ್ನಮ್ಮ ಅವರದ್ದು. ನಾಗರತ್ನಮ್ಮ ಕೊನೆಯ ದಿನಗಳನ್ನು ಮದ್ರಾಸಿನಲ್ಲಿ ಕಳೆದರು. 1952ರಲ್ಲಿ 74ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದರು.