Don't Miss!
- Technology OnePlus: ಒನ್ಪ್ಲಸ್ 13 ಸ್ಮಾರ್ಟ್ಫೋನ್ ಡಿಸ್ಪ್ಲೇ, ವಿನ್ಯಾಸ ಲೀಕ್!..ಯಾವಾಗ ಲಾಂಚ್?
- News ಬಿಜೆಪಿ ತೊರೆದ ಕಾಂಗ್ರೆಸ್ ಸೇರ್ಪಡೆಯಾದ ಬಿಎಸ್ ಯಡಿಯೂರಪ್ಪ ಆಪ್ತ
- Automobiles ಭೂಮಿಯ ಸ್ವರ್ಗ: 1.50 ಕೋಟಿಯ ಟೊಯೊಟಾ ವೆಲ್ಫೈರ್ಗೆ ಮನಸೋತ ಖ್ಯಾತ ನಟ.. ಈ ಕಾರಿನಲ್ಲಿ ಏನಿದೆ?
- Sports RCB: ಯುಜ್ವೇಂದ್ರ ಚಹಾಲ್ ಮರಳಿ ಬರುವಂತೆ ಬೇಡಿಕೊಳ್ಳಿ; ಆರ್ಸಿಬಿಗೆ ಸಲಹೆ ನೀಡಿದ ರಾಬಿನ್ ಉತ್ತಪ್ಪ
- Lifestyle ಗರಿ ಗರಿಯಾದ ಕೋಡುಬಳೆ ಮನೆಯಲ್ಲೇ ಮಾಡಿ.! 4 ವಸ್ತು ಇದ್ದರೆ ಸಾಕು
- Finance ಝಿಲಿಂಗೋನ ಸಹ-ಸಂಸ್ಥಾಪಕ ಹಾಗೂ ಮಾಜಿ ಸಿಒಒ ವಿರುದ್ಧ ಲೈಂಗಿಕ ಕಿರುಕುಳ ಕೇಸ್ ದಾಖಲಿಸಿದ ಅಂಕಿತಿ ಬೋಸ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸೌಂದರ್ಯ ನಟಿಸಿದ್ದ ಕೊನೆಯ ಸಿನಿಮಾದ ಟ್ರೈಲರ್ ರಿಲೀಸ್: ಚಿತ್ರ ಬಿಡುಗಡೆ ಯಾವಾಗ?
ಕನ್ನಡದ ಜನಪ್ರಿಯ ನಟಿ ಸೌಂದರ್ಯ ದುರಂತ ಅಂತ್ಯ ಕಂಡು ವರ್ಷಗಳೇ ಕಳೆದಿವೆ. ಆದರೀಗ ಸೌಂದರ್ಯ ಅಭಿನಯಿಸಿದ್ದ ಕೊನೆಯ ಸಿನಿಮಾ ರಿಲೀಸ್ ಗೆ ಸಿದ್ಧವಾಗಿದೆ. ನಟಿ ಸೌಂದರ್ಯ ಕನ್ನಡದ ಜೊತೆಗೆ, ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಚಿತ್ರರಂಗದಲ್ಲೂ ಖ್ಯಾತಿಗಳಿಸಿದ್ದರು. ಅದರಲ್ಲೂ ಸೌಂದರ್ಯ ತೆಲುಗಿನಲ್ಲಿ ಅತೀ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ.
ಸೌಂದರ್ಯ ಕನ್ನಡದಲ್ಲಿ ಕೊನೆಯದಾಗಿ ಆಪ್ತಮಿತ್ರ ಸಿನಿಮಾದಲ್ಲಿ ನಟಿಸಿದ್ದಾರೆ. ಇದೇ ಸೌಂದರ್ಯ ಅವರ ಕೊನೆಯ ಸಿನಿಮಾ ಎಂದು ಹೇಳಲಾಗುತ್ತೆ. ಆದರೆ ಸೌಂದರ್ಯ ಅಭಿನಯದ ಕೊನೆಯ ತೆಲುಗು ಸಿನಿಮಾ ಇನ್ನು ರಿಲೀಸ್ ಆಗಿಲ್ಲ. ಸೌಂದರ್ಯ ಸಾವಿನಿಂದ ಅರ್ಧಕ್ಕೆ ನಿಂತುಹೋಗಿದ್ದ ಸಿನಿಮಾವನ್ನು ಈಗ ರಿಲೀಸ್ ಮಾಡಲು ಸಿನಿಮಾತಂಡ ನಿರ್ಧರಿಸಿದೆ. ಹೌದು, ಸೌಂದರ್ಯ ಕೊನೆಯದಾಗಿ ತೆಲುಗಿನ 'ನರ್ತನಶಾಲಾ' ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾದಲ್ಲಿ ದ್ರೌಪದಿ ಪಾತ್ರದಲ್ಲಿ ಸೌಂದರ್ಯ ಮಿಂಚಿದ್ದಾರೆ.
ಸೌಂದರ್ಯ ಬಯೋಪಿಕ್ ನಲ್ಲಿ ನಟಿಸಲಿದ್ದಾರೆ ದಕ್ಷಿಣ ಭಾರತದ ಖ್ಯಾತ ನಟಿ
ನಂದಮೂರಿ ಬಾಲಕೃಷ್ಣ ಸಿನಿಮಾದಲ್ಲಿ ಅರ್ಜುನ ಮತ್ತು ಕೀಚಕನ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ವಿಶೇಷ ಎಂದರೆ ಈ ಸಿನಿಮಾಗೆ ಬಾಲಯ್ಯ ನಿರ್ದೇಶನ ಮಾಡಿದ್ದಾರೆ. ದೊಡ್ಡ ತಾರಾಬಳಗವೇ ಈ ಸಿನಿಮಾದಲ್ಲಿದೆ. ಸದ್ಯ ಈ ಚಿತ್ರದ ಟ್ರೈಲರ್ ಅನ್ನು ರಿಲೀಸ್ ಮಾಡಲಾಗಿದೆ.
2004ರಲ್ಲಿ ಮಾರ್ಚ್ ನಲ್ಲಿ ಈ ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಿದೆ. ಸಿನಿಮಾ ಪ್ರಾರಂಭವಾಗಿ ಒಂದೇ ತಿಂಗಳಲ್ಲೇ ಸೌಂದರ್ಯ ವಿಮಾನ ಅಪಘಾತದಲ್ಲಿ ನಿಧನ ಹೊಂದಿದರು. ಸಿನಿಮಾ ಸಹ ಅಲ್ಲಿಗೆ ನಿಂತುಹೋಗಿದೆ. ಸೌಂದರ್ಯ ಇಲ್ಲದೆ ಈ ಸಿನಿಮಾ ಮಾಡುವುದಿಲ್ಲ ಎಂದು ಬಾಲಯ್ಯ ಈ ಸಿನಿಮಾವನ್ನು ಮುಂದುವರೆಸಲಿಲ್ಲ. ಅಂದ್ಹಾಗೆ ಈ ಸಿನಿಮಾ ಕೇವಲ 17 ನಿಮಿಷ ಮಾತ್ರವಿದೆ.
17 ನಿಮಿಷಗಳ ಫೂಟೇಜ್ ಅನ್ನು ಆನ್ ಲೈನ್ ನಲ್ಲಿ ರಿಲೀಸ್ ಮಾಡಲಾಗುತ್ತಿದೆ. ದಸರಾ ಹಬ್ಬದ ಪ್ರಯುಕ್ತ ಅಕ್ಟೋಬರ್ 24ರಂದು ಸಿನಿಮಾವನ್ನು ಬಿಡುಗಡೆ ಮಾಡಲಾಗುತ್ತಿದೆ. ಈ ಸಿನಿಮಾದಿಂದ ಬರುವ ಹಣವನ್ನು ಚಾರಿಟಿಗೆ ನೀಡಲು ಬಾಲಯ್ಯ ನಿರ್ಧರಿಸಿದ್ದಾರೆ. ಇಂದು ಸೌಂದರ್ಯ ನಮ್ಮೊಂದಿಗೆ ಇಲ್ಲ ಆದರೆ ಅವರ ನಟನೆಯ ಕೊನೆಯ ಸಿನಿಮಾವನ್ನು ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ.