Don't Miss!
- Technology Lenovo: ಲೆನೊವೊದಿಂದ ಎಐ ಚಾಲಿತ ಲೀಜನ್ ಗೇಮಿಂಗ್ ಲ್ಯಾಪ್ಟಾಪ್ಗಳು ಲಾಂಚ್; ಬೆಲೆ ಎಷ್ಟು?
- News ಆರಂಭದಲ್ಲೇ ಬಿಜೆಪಿ- ಜೆಡಿಎಸ್ ದೋಸ್ತಿಯಲ್ಲಿ ಬಿರುಕು: ವಿಜಯೇಂದ್ರ ಏನಂದ್ರು?
- Lifestyle ಕೊನೆಗೂ ಬೆಂಗಳೂರಿಗೆ ಮಳೆ ಭಾಗ್ಯ..! ಹವಾಮಾನ ಇಲಾಖೆ ಸೂಚಿಸಿದ ದಿನಾಂಕವಿದು..!
- Automobiles Self-Driving Car: ಭಾರತೀಯರು ಅಸಮಾನ್ಯರು... ಬೊಲೆರೋದಲ್ಲಿ ಭವಿಷ್ಯ ಬದಲಿಸುವ ತಂತ್ರಜ್ಞಾನ!
- Sports Viral look: IPL 2024 ಆರಂಭಕ್ಕೂ ಮುನ್ನ ಸಾಮಾಜಿಕ ತಾಣದಲ್ಲಿ ಸಂಚಲನ ಮೂಡಿಸಿರುವ ವಿರಾಟ್ ಕೊಹ್ಲಿ Trendy look
- Finance ಬೆಂಗಳೂರಿನ ಮೇಘನಾ ಫುಡ್ಸ್ ಹೋಟೆಲ್ ಮಳಿಗೆಗಳ ಮೇಲೆ ಐಟಿ ದಾಳಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹುತಾತ್ಮ ಯೋಧ ಸಂದೀಪ್ ಉನ್ನಿಕೃಷ್ಣನ್ ಸ್ಮರಿಸಿದ 'ಮೇಜರ್' ಚಿತ್ರತಂಡ
ಭಾರತದ ರಿಯಲ್ ಹೀರೋ ದಿವಂಗತ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಅವರ ಜೀವನ ಆಧರಿಸಿ ಸಿನಿಮಾ ತಯಾರಾಗುತ್ತಿದೆ. ನವೆಂಬರ್ 28ಕ್ಕೆ ಮೇಜರ್ ಹುತಾತ್ಮರಾದ ದಿನ. ಈ ದಿನದ ವಿಶೇಷವಾಗಿ ಮೇಜರ್ ಚಿತ್ರತಂಡ ಹುತಾತ್ಮ ಯೋಧನನ್ನು ಸ್ಮರಿಸಿಕೊಂಡಿದೆ.
ಸಂದೀಪ್ ಉನ್ನಿಕೃಷ್ಣನ್ ಪಾತ್ರದಲ್ಲಿ ನಟಿಸುತ್ತಿರುವ ಅದ್ವಿ ಶೇಶಾ ಅವರ ಲುಕ್ ಟೆಸ್ಟ್ ವಿಡಿಯೋ ಮತ್ತು ಫೋಟೋವನ್ನು ಬಿಡುಗಡೆ ಮಾಡಿದ ಚಿತ್ರತಂಡ. ತೆಲುಗು ನಟ ಮಹೇಶ್ ಬಾಬು ಈ ವಿಡಿಯೋ ರಿಲೀಸ್ ಮಾಡಿದ್ದಾರೆ. ಈ ಮೂಲಕ ಹುತಾತ್ಮ ಯೋಧನಿಗೆ ಗೌರವ ಸಲ್ಲಿಸಲಾಗಿದೆ.
'ಸೂರರೈ ಪೊಟ್ರು' ಚಿತ್ರವನ್ನು ಹಾಡಿ ಹೊಗಳಿದ ಮಹೇಶ್ ಬಾಬು: ಸೂರ್ಯ ನಟನೆಗೆ ಫಿದಾ ಆದ ಪ್ರಿನ್ಸ್
2008ರಲ್ಲಿ ನಡೆದ ಮುಂಬೈ ದಾಳಿಯಲ್ಲಿ ಎನ್ ಎಸ್ ಜಿ ಕಮಾಂಡೋ ಆಗಿದ್ದ ಸಂದೀಪ್ ಉನ್ನಿಕೃಷ್ಣನ್ ಹುತಾತ್ಮರಾಗಿದ್ದರು. ವೀರ ಯೋಧ ಸಂದೀಪ್ ಅವರು ದೇಶಕ್ಕಾಗಿ ಪ್ರಾಣತ್ಯಾಗ ಮಾಡಿ ಹನ್ನೆರಡು ವರ್ಷ ಆಗಿವೆ.
ಕಳೆದ ವರ್ಷ ತೆಲುಗು ಮತ್ತು ಹಿಂದಿಯಲ್ಲಿ ಸಂದೀಪ್ ಉನ್ನಿಕೃಷ್ಣನ್ ಕುರಿತು, ಅವರ ಜೀವನವನ್ನ ಸ್ಫೂರ್ತಿಯಾಗಿಸಿಕೊಂಡು 'ಮೇಜರ್' ಎಂಬ ಸಿನಿಮಾ ಪ್ರಕಟಣೆ ಆಗಿತ್ತು.
ಮಹೇಶ್ ಬಾಬು ಸಿನಿಮಾದಲ್ಲಿ ಅನುಷ್ಕಾ ಶೆಟ್ಟಿ: ವೈರಲ್ ಆದ ಟ್ವೀಟ್ನಲ್ಲಿ ಏನಿದೆ?
'ಕ್ಷಣಂ' ಮತ್ತು 'ಗೂಢಚಾರಿ' ಚಿತ್ರಗಳನ್ನ ನಿರ್ದೇಶನ ಮಾಡಿದ್ದ ಅದ್ವಿ ಶೇಶಾ ಈ ಸಿನಿಮಾ ಮಾಡ್ತಿದ್ದು, ಇಂದು ಲುಕ್ ಪರೀಕ್ಷೆಯ ಫೋಟೋ ಮತ್ತು ವಿಡಿಯೋ ಅನಾವರಣ ಮಾಡಿದ್ದಾರೆ.
ತೆಲುಗು ಮತ್ತು ಹಿಂದಿಯಲ್ಲಿ ಈ ಚಿತ್ರ ಬರ್ತಿದ್ದು, ಸೋನಿ ಪಿಕ್ಚರ್ಸ್ ಈ ಚಿತ್ರಕ್ಕೆ ಬಂಡವಾಳ ಹಾಕುತ್ತಿದ್ದಾರೆ. ಜೊತೆಗೆ ತೆಲುಗು ನಟ ಮಹೇಶ್ ಬಾಬು ಸಹ ನಿರ್ಮಾಪಕರಾಗಿ ಹಣ ಹೂಡುತ್ತಿದ್ದಾರೆ.
Recommended Video
ಕೋಲ್ಕತ್ತಾದಲ್ಲಿ 1977 ಮಾರ್ಚ್ 15 ರಂದು ಜನಿಸಿದ ಸಂದೀಪ್ ಬೆಂಗಳೂರಿನ ಹೆಬ್ಬಾಳ ಸೇನಾ ಕೇಂದ್ರದಲ್ಲಿ ತರಬೇತಿ ಪಡೆದಿದ್ದರು. 31ನೇ ವಯಸ್ಸಿನಲ್ಲಿ ಪ್ರಾಣ ತ್ಯಾಗ ಮಾಡಿದ ಸಂದೀಪ್ 9 ವರ್ಷಗಳ ಕಾಲ ಭಾರತದ ಸೇನೆಯ ಭಾಗವಾಗಿ ದುಡಿದಿದ್ದರು. ಅವರ ಸೇವೆಗೆ ಅಶೋಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.