Don't Miss!
- News ಸ್ಟಾರ್ ಪ್ರಚಾರಕರ ಜೊತೆ ವೇದಿಕೆ ಹಂಚಿಕೊಂಡರೆ ವೆಚ್ಚ ಅಭ್ಯರ್ಥಿ ಖಾತೆಗೆ
- Lifestyle ವೋಟರ್ ಐಡಿ ಇಲ್ಲದೆಯೂ ಮತ ಚಲಾಯಿಸಬಹುದು.! ಹೇಗೆ ಗೊತ್ತಾ?
- Technology SmartGlass: ಮೆಟಾ ರೇ-ಬ್ಯಾನ್ ಸ್ಮಾರ್ಟ್ ಗ್ಲಾಸ್ ಬಳಕೆದಾರರು ಇನ್ಮುಂದೆ ವಿಡಿಯೋ ಕಾಲ್ ಮಾಡಬಹುದು!
- Automobiles ಕ್ರ್ಯಾಶ್ ಟೆಸ್ಟ್ನಲ್ಲಿ ಕಳಪೆ ಪ್ರದರ್ಶನ ನೀಡಿ ನಿರಾಸೆ ಮೂಡಿಸಿದ ಮಧ್ಯಮ ವರ್ಗದ ಮೆಚ್ಚಿನ ಸ್ವದೇಶಿ ಕಾರು
- Sports 2025ರ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸಲಿದೆಯೇ?; ಬಿಸಿಸಿಐ ಹೇಳಿದ್ದೇನು?
- Finance ಬೆಂಗಳೂರಿನಲ್ಲಿ ಈ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧ, ದಿನಾಂಕ, ಸಮಯ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಏರ್ಪೋರ್ಟ್ನಲ್ಲಿ ಕಾಣಿಸಿಕೊಂಡ ಅನುಷ್ಕಾ, 'ಇದು ಪ್ರಭಾಸ್ ಕುರ್ತಾ' ಎಂದ ನೆಟ್ಟಿಗರು
ಲಾಕ್ಡೌನ್ ಆದ್ಮೇಲೆ ಮೊದಲ ಬಾರಿಗೆ ನಟಿ ಅನುಷ್ಕಾ ಶೆಟ್ಟಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಬಾಹುಬಲಿ ನಟಿ ಅನುಷ್ಕಾ ಇತ್ತೀಚಿಗಷ್ಟೆ ಹೈದರಾಬಾದ್ ಏರ್ಪೋರ್ಟ್ನಲ್ಲಿ ಕಾಣಿಸಿಕೊಂಡಿದ್ದಾರೆ.
ಅನುಷ್ಕಾ ಶೆಟ್ಟಿ ಮತ್ತು ಆರ್ ಮಾಧವನ್ ನಟನೆಯ ನಿಶ್ಯಬ್ದಂ ಸಿನಿಮಾ ಒಟಿಟಿಯಲ್ಲಿ ಬಿಡುಗಡೆಯಾಗಿತ್ತು. ಆ ಸಂದರ್ಭದಲ್ಲಿ ಅನುಷ್ಕಾ ಹೆಸರು ಚರ್ಚೆಯಲ್ಲಿತ್ತು. ಅದಾದ ಕೆಲವು ದಿನಗಳ ಬಳಿಕ ಮತ್ತೆ ಅನುಷ್ಕಾ ಎಲ್ಲಿಯೂ ಕಾಣಿಸಿಕೊಂಡಿಲ್ಲ. ಸರ್ಪ್ರೈಸ್ ಎಂಬಂತೆ ಇಂದು ಹೈದರಾಬಾದ್ ಏರ್ಪೋರ್ಟ್ನಲ್ಲಿ ಅನುಷ್ಕಾ ಪ್ರತ್ಯಕ್ಷರಾಗಿದ್ದಾರೆ.
ಮಹಾನಂದೀಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ನಟಿ ಅನುಷ್ಕಾ ಶೆಟ್ಟಿ
ಕಪ್ಪು ಬಣ್ಣದ ಕುರ್ತಾ ಮತ್ತು ಜೀನ್ಸ್ ಧರಿಸಿರುವ ಅನುಷ್ಕಾ ಕೈಯಲ್ಲಿ ಯಾವುದೇ ಬುಕ್ಲೆಟ್ ಇಟ್ಟು ಓದಿಕೊಂಡು ಬರುತ್ತಿದ್ದಾರೆ. ಅನುಷ್ಕಾ ಅವರ ಈ ಲುಕ್ ನೆಟ್ಟಿಗರ ಗಮನ ಸೆಳೆದಿದೆ. ವಿಶೇಷವಾಗಿ ಅನುಷ್ಕಾ ಧರಿಸಿರುವ ಕುರ್ತಾ ಈಗ ಚರ್ಚೆಗೆ ಕಾರಣವಾಗಿದೆ.
ಇತ್ತೀಚಿಗಷ್ಟೆ ಪ್ರಭಾಸ್ ಅವರು ಏರ್ಪೋರ್ಟ್ನಲ್ಲಿ ಕಾಣಿಸಿಕೊಂಡಿದ್ದ ಸಂದರ್ಭದಲ್ಲಿ ಕಪ್ಪು ಬಣ್ಣದ ಕುರ್ತಾ ಧರಿಸಿದ್ದರು. ಆ ಫೋಟೋ ಸಹ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈಗ, ಅನುಷ್ಕಾ ಶೆಟ್ಟಿ ಧರಿಸಿರುವ ಕುರ್ತಾ ಪ್ರಭಾಸ್ ಅವರದ್ದು ಎಂದು ನೆಟ್ಟಿಗರು ಕಾಮೆಂಟ್ ಮಾಡ್ತಿದ್ದಾರೆ.
ಇಬ್ಬರು ನಟಿಯರನ್ನು ಮನಸಾರೆ ಹೊಗಳಿದ ಸಾಯಿ ಪಲ್ಲವಿ
ಪ್ರಭಾಸ್ ಅವರು ಧರಿಸಿದ್ದ ಕುರ್ತಾ ಮತ್ತು ಅನುಷ್ಕಾ ಶೆಟ್ಟಿ ಧರಿಸಿದ್ದ ಕುರ್ತಾ ಒಂದೇ ತರಹ ಇದೆ, ಬಹುಶಃ ಇದು ಪ್ರಭಾಸ್ ಅವರದ್ದೇ ಎಂದು ಚರ್ಚೆಯಾಗ್ತಿದೆ. ಇದು ನಂಬಲು ಅಸಾಧ್ಯವೆನಿಸಿದರೂ ಫ್ಯಾನ್ಸ್ ಮಾತ್ರ ಅನುಷ್ಕಾ ಶೆಟ್ಟಿ ಮತ್ತು ಪ್ರಭಾಸ್ ವಿಚಾರದಲ್ಲಿ ಸಾಧ್ಯವಾದ ಕಡೆಯಲ್ಲೆಲ್ಲ ಸಂಬಂಧ ಕಲ್ಪಿಸುತ್ತಾರೆ.
ಪ್ರಭಾಸ್ ಹಾಗೂ ಅನುಷ್ಕಾ ಶೆಟ್ಟಿ ಮದುವೆ ವಿಚಾರಕ್ಕೆ ಬಹಳ ವರ್ಷದಿಂದಲೂ ಸುದ್ದಿಯಲ್ಲಿದ್ದಾರೆ. ಇಬ್ಬರು ಒಳ್ಳೆಯ ಸ್ನೇಹಿತರು, ಪ್ರೀತಿಯಲ್ಲಿದ್ದಾರೆ, ಮದುವೆಯಾಗಲು ಚಿಂತಿಸುತ್ತಿದ್ದಾರೆ ಎನ್ನುವ ಮಟ್ಟಕ್ಕೆ ಚರ್ಚೆಗಳು ಆಗಿವೆ. ಆದ್ರೆ, ಇಬ್ಬರಿಂದಲೂ ಈ ಬಗ್ಗೆ ಸ್ಪಷ್ಟನೆ ಇರಲಿಲ್ಲ. ನಾವಿಬ್ಬರು ಸ್ನೇಹಿತರು ಮಾತ್ರ ಎಂದಷ್ಟೇ ಹೇಳಿ ಮುಂದಕ್ಕೆ ಸಾಗುತ್ತಿದ್ದರು.
ಡಿಸೆಂಬರ್ ಎರಡನೇ ವಾರದಲ್ಲಿ ನಟಿ ಅನುಷ್ಕಾ ಶೆಟ್ಟಿ ಆಂಧ್ರ ಪ್ರದೇಶದ ಪೋಲವರಂನಲ್ಲಿರುವ ಮಹಾನಂದೀಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದುಕೊಂಡಿದ್ದರು.