Don't Miss!
- Technology iPhones: ಬೇಕಿತ್ತಾ ಇದೆಲ್ಲ? ನಕಲಿ ಐಫೋನ್ ಮೂಲಕ ಆಪಲ್ಗೆ ಪಂಗನಾಮ ಹಾಕಿದವನಿಗೆ ಜೈಲೂಟ
- News ಎನ್ಕೌಂಟರ್ ಮಾಡುವುದಾಗಿ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ!
- Lifestyle ಮದ್ಯದ ಅಮಲಲ್ಲಿ ತೇಲಾಡುತ್ತಿದ್ದ ಶಿಕ್ಷಕನಿಗೆ ಮಕ್ಕಳಿಂದಲೇ ಚಪ್ಪಲಿ ಏಟು..!
- Finance 2.3 ಲಕ್ಷ ರೂಪಾಯಿಗೆ 9 ನಿಂಬೆಹಣ್ಣು ಹರಾಜು, ಏನಿದರ ವಿಶೇಷತೆ ತಿಳಿಯಿರಿ
- Sports RR vs DC: ಐಪಿಎಲ್ನಲ್ಲಿ ಇತಿಹಾಸ ನಿರ್ಮಿಸಲು ಸಜ್ಜಾದ ರಿಷಭ್ ಪಂತ್
- Automobiles ಬುಕ್ ಮಾಡಿದ ರೈಲಿನ ಸೀಟಿನಲ್ಲಿ ಬೇರೆಯವರು ಕೂತಿದ್ರೆ ಏನ್ ಮಾಡಬೇಕು ಗೊತ್ತಾ? ಸಿಂಪಲ್ ಪರಿಹಾರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮುಂಬೈನಿಂದ ಹೈದರಾಬಾದ್ಗೆ ಬಂದ ಆಲಿಯಾ ಭಟ್-ರಶ್ಮಿಕಾ ಮಂದಣ್ಣ
ಕೊರೊನಾ ಎರಡನೇ ಅಲೆ ಲಾಕ್ಡೌನ್ ತೆರವುಗೊಳುತ್ತಿದ್ದಂತೆ ಚಿತ್ರೀಕರಣ ಶುರುವಾಗುತ್ತಿದೆ. ಎಲ್ಲಾ ಭಾಷೆಯ ಚಿತ್ರಗಳು ಶೂಟಿಂಗ್ಗೆ ಮರು ಚಾಲನೆ ಕೊಡ್ತಿವೆ. ಕಳೆದ ಕೆಲವು ತಿಂಗಳು ಶೂಟಿಂಗ್ ಇಲ್ಲದೇ ಮನೆಯಲ್ಲಿ ಟೈಂ ಪಾಸ್ ಮಾಡಿದ್ದ ಕಲಾವಿದರು ಈಗ ಮತ್ತೆ ಕೆಲಸಕ್ಕೆ ಹಾಜರ್ ಆಗುತ್ತಿದ್ದಾರೆ.
ಮುಂಬೈನಲ್ಲಿ 'ಗುಡ್ ಬೈ' ಸಿನಿಮಾದ ಚಿತ್ರೀಕರಣ ಮಾಡ್ತಿದ್ದ ನಟಿ ರಶ್ಮಿಕಾ ಮಂದಣ್ಣ ಈಗ ಹೈದರಾಬಾದ್ ಕಡೆ ಹೆಜ್ಜೆ ಹಾಕಿದ್ದಾರೆ. ಇನ್ನು ಲಾಕ್ಡೌನ್ನಿಂದ ಬ್ರೇಕ್ನಲ್ಲಿದ್ದ ಆಲಿಯಾ ಭಟ್ ಸಹ ಹೈದರಾಬಾದ್ ವಿಮಾನ ಹತ್ತಿದ್ದಾರೆ ಎಂಬ ಮಾಹಿತಿ ಇದೆ. ಸದ್ಯ ಭಾರತೀಯ ಸಿನಿಮಾರಂಗಕ್ಕೆ ಹೈದರಾಬಾದ್ ಕೇಂದ್ರಭಾಗವಾಗಿದ್ದು ಸ್ಟಾರ್ ನಟ-ನಟಿಯರು ತೆಲುಗು ನಗರದ ಕಡೆ ಮುಖ ಮಾಡುತ್ತಿದ್ದಾರೆ. ಮುಂದೆ ಓದಿ....
ಸಮಂತಾ, ವಿಜಯ್ ದೇವರಕೊಂಡ ಹಿಂದಿಕ್ಕಿದ ರಶ್ಮಿಕಾ ಮಂದಣ್ಣ
ಆರ್ಆರ್ಆರ್ ಚಿತ್ರೀಕರಣಕ್ಕೆ ಆಲಿಯಾ ಭಟ್
ರಾಜಮೌಳಿ ನಿರ್ದೇಶನದಲ್ಲಿ ತಯಾರಾಗುತ್ತಿರುವ ಆರ್ಆರ್ಆರ್ ಸಿನಿಮಾದಲ್ಲಿ ಆಲಿಯಾ ಭಟ್ ನಟಿಸುತ್ತಿರುವ ವಿಷಯ ತಿಳಿದಿದೆ. ಈ ಸಿನಿಮಾದ ಬಾಕಿ ಉಳಿದಿರುವ ದೃಶ್ಯಗಳನ್ನು ಮುಗಿಸಲು ಈಗ ಆಲಿಯಾ ಭಟ್ ಹೈದರಾಬಾದ್ ತೆರಳಿದ್ದಾರೆ.
ತೆಲುಗಿನಲ್ಲಿ ಚೊಚ್ಚಲ ಸಿನಿಮಾ
ರಾಮ್ ಚರಣ್ ತೇಜ, ಜೂನಿಯರ್ ಎನ್ಟಿಆರ್ ಮುಖ್ಯ ಪಾತ್ರದಲ್ಲಿ ನಟಿಸುತ್ತಿರುವ ಆರ್ಆರ್ಆರ್ ಸಿನಿಮಾದಲ್ಲಿ ಆಲಿಯಾ ಭಟ್ ನಾಯಕಿ. ಈಗಾಗಲೇ ಸ್ಟಾರ್ ನಟರು ಚಿತ್ರೀಕರಣ ಪೂರ್ಣಗೊಳಿಸಿದ್ದಾರೆ. ಈಗ ಆಲಿಯಾ ಭಟ್ ಬಾಕಿ ಉಳಿದಿರುವ ಚಿತ್ರೀಕರಣ ಮುಂದುವರಿಸಲಿದ್ದಾರೆ. ಅದಾಗಲೇ ಹೈದರಾಬಾದ್ಗೆ ಬಂದಿಳಿದಿದ್ದು, ಮೇಕಪ್ ಹಾಕಿಕೊಳ್ಳುತ್ತಿರುವ ಫೋಟೋ ಸಹ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
ಮಾಫಿಯಾ ರಾಣಿ ಗಂಗೂಭಾಯಿ ಕಾತ್ಯಾವಾಡ: ಈಕೆಗಿದೆ ಭಯಾನಕ ಇತಿಹಾಸ
ಶರ್ವಾನಂದ್ ಜೊತೆ ರಶ್ಮಿಕಾ
ಮುಂಬೈನಲ್ಲಿ 'ಗುಡ್ ಬೈ' ಸಿನಿಮಾ ಚಿತ್ರೀಕರಣ ಮುಗಿಸಿದ ರಶ್ಮಿಕಾ ಮಂದಣ್ಣ ಈಗ ಹೈದರಾಬಾದ್ನಲ್ಲಿ ಹೊಸ ಸಿನಿಮಾ ಆರಂಭಿಸಿದ್ದಾರೆ. ತೆಲುಗಿನ ಯುವ ನಟ ಶರ್ವಾನಂದ್ ನಟಿಸುತ್ತಿರುವ 'ಆಡವಾಳ್ಳು ಮೀಕು ಜೋಹರ್ಲು' ಚಿತ್ರದ ಶೂಟಿಂಗ್ನಲ್ಲಿ ಭಾಗಿಯಾಗಿದ್ದಾರೆ.
Recommended Video
'ಪುಷ್ಪ' ಚಿತ್ರೀಕರಣ ಮುಗಿಸಿದ ನಟಿ
ಹಿಂದಿಯಲ್ಲಿ ಎರಡು ಸಿನಿಮಾ ಮಾಡ್ತಿದ್ದು ಇಷ್ಟು ದಿನ ಮುಂಬೈನಲ್ಲಿದ್ದರು. ಈಗ ಹೈದರಾಬಾದ್ಗೆ ಬಂದ ರಶ್ಮಿಕಾ ತೆಲುಗು ಸಿನಿಮಾಗಳಲ್ಲಿ ತೊಡಗಿಕೊಂಡಿದ್ದಾರೆ. ಅಲ್ಲು ಅರ್ಜುನ್ ಜೊತೆಗಿನ 'ಪುಷ್ಪ' ಸಿನಿಮಾದ ಕೊನೆಯ ಹಂತದ ಶೂಟಿಂಗ್ ಇತ್ತೀಚಿಗಷ್ಟೆ ಮುಗಿಸಿಕೊಟ್ಟಿದ್ದಾರೆ ಎಂಬ ಮಾಹಿತಿ ಇದೆ. ಈಗ ಶರ್ವಾನಂದ್ ಸಿನಿಮಾ ಕೈಗೆತ್ತಿಕೊಂಡಿದ್ದಾರೆ.