Don't Miss!
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪವನ್ ಕಲ್ಯಾಣ್ ಹುಟ್ಟುಹಬ್ಬದಂದು ಫ್ಯಾನ್ಸ್ ಸಾವು: ಕುಟುಂಬದ ನೆರವಿಗೆ ನಿಂತ ಮೆಗಾ ನಟರು
ತೆಲುಗು ಪವರ್ ಸ್ಟಾರ್ ಪವನ್ ಕಲ್ಯಾಣ್ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನೆಚ್ಚಿನ ನಟನ ಬರ್ತಡೇ ಪ್ರಯುಕ್ತ ಪವನ್ ಕಲ್ಯಾಣ್ ಬ್ಯಾನರ್ಗಳನ್ನು ಹಾಕುವ ವೇಳೆ ವಿದ್ಯುತ್ ಸ್ಪರ್ಶದಿಂದ ಮೂವರು ಅಭಿಮಾನಿಗಳು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಕುಪ್ಪುಂನಲ್ಲಿ ನಡೆದಿದೆ.
Recommended Video
ಪವರ್ ಸ್ಟಾರ್ ಜನುಮದಿನದ ಹಿನ್ನೆಲೆ ಕಳೆದ ರಾತ್ರಿ ಫ್ಲೆಕ್ಸ್ ಹಾಕಲು ಅಭಿಮಾನಿಗಳು ಮುಂದಾಗಿದ್ದರು. ಅದರ ಪಕ್ಕದಲ್ಲಿ ಕರೆಂಟ್ ವೈರ್ ಇದ್ದ ಕಾರಣ ವಿದ್ಯುತ್ ಸ್ಪರ್ಶವಾಗಿದೆ. ಸ್ಥಳದಲ್ಲೇ ಮೂವರು ಅಭಿಮಾನಿಗಳು ಮೃತಪಟ್ಟಿದ್ದಾರೆ. ಇದೀಗ, ಅಭಿಮಾನಿಗಳ ಕುಟುಂಬದ ಪರ ನಿಂತಿರುವ ಅಲ್ಲು ಅರ್ಜುನ್, ರಾಮ್ ಚರಣ್ ತೇಜ ಸೇರಿದಂತೆ ಕೆಲವು ನಿರ್ಮಾಣ ಸಂಸ್ಥೆಗಳು ಸಹ ನೆರವು ಘೋಷಿಸಿದೆ. ಮುಂದೆ ಓದಿ...
2 ಲಕ್ಷ ಪರಿಹಾರ ಘೋಷಿಸಿದ ಅಲ್ಲು ಅರ್ಜುನ್
ಪವನ್ ಕಲ್ಯಾಣ್ ಅಭಿಮಾನಿಗಳ ಸಾವಿಗೆ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಸಂತಾಪ ಸೂಚಿಸಿದ್ದಾರೆ. ''ಇಂತಹ ಸಂದರ್ಭದಲ್ಲಿ ಅವರ ಕುಟುಂಬದ ಜೊತೆ ನಿಲ್ಲಬೇಕಾಗಿರುವುದು ನಮ್ಮ ಕರ್ತವ್ಯ'' ಎಂದಿರುವ ಅಲ್ಲು ಮೃತ ಅಭಿಮಾನಿ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ ಘೋಷಿಸಿದ್ದಾರೆ.
ಪವನ್ ಕಲ್ಯಾಣ್ ಹುಟ್ಟುಹಬ್ಬಕ್ಕೆ ಬ್ಯಾನರ್ ಹಾಕಲು ಹೋಗಿ ಮೂವರು ಅಭಿಮಾನಿಗಳ ಸಾವು
ರಾಮ್ ಚರಣ್ ತೇಜ ಪರಿಹಾರ
ಮೆಗಾಸ್ಟಾರ್ ಪುತ್ರ ರಾಮ್ ಚರಣ್ ತೇಜ ಸಹ ಪವನ್ ಕಲ್ಯಾಣ್ ಅಭಿಮಾನಿಗಳ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಅಷ್ಟೇ ಅಲ್ಲದೇ 2.5 ಲಕ್ಷ ಪರಿಹಾರ ಘೋಷಿಸಿದ್ದಾರೆ.
ಪವನ್ ಕಲ್ಯಾಣ್ ನೆರವು
ಇನ್ನು ಪವನ್ ಕಲ್ಯಾಣ್ ಸಹ ಅಭಿಮಾನಿಗಳ ಸಾವಿಗೆ ಮರುಗಿದ್ದು, ಕುಟುಂಬಗಳ ನೆರವಿಗೆ ಧಾವಿಸಿದ್ದಾರೆ. ಮೂರು ಕುಟುಂಬಕ್ಕೂ ತಲಾ 2 ಲಕ್ಷ ಪರಿಹಾರ ನೀಡಿದ್ದಾರೆ.
ಮಹೇಶ್ ಬಾಬು ಅಭಿಮಾನಿಗಳ ದಾಖಲೆ ಬೆನ್ನತ್ತಿದೆ ಪವನ್ ಕಲ್ಯಾಣ್ ಫ್ಯಾನ್ಸ್!
ನಿರ್ಮಾಣ ಸಂಸ್ಥೆಗಳು ಪರಿಹಾರ
ಮೆಗಾಫ್ಯಾಮಿಲಿಯ ನಟರು ಮಾತ್ರವಲ್ಲ ಕೆಲವು ನಿರ್ಮಾಣ ಸಂಸ್ಥೆಗಳು ಸಹ ಮೃತ ಅಭಿಮಾನಿಗಳ ಕುಟುಂಬಕ್ಕೆ ನೆರವು ನೀಡಿದ್ದಾರೆ. ಪವನ್ ಕಲ್ಯಾಣ್ ನಟಿಸುತ್ತಿರುವ 'ವಕೀಲ್ ಸಾಬ್' ಚಿತ್ರ ನಿರ್ಮಿಸುತ್ತಿರುವ ಶ್ರೀವೆಂಕಟೇಶ್ವರ್ ಕ್ರಿಯೇಷನ್ಸ್ 2 ಲಕ್ಷ ಪರಿಹಾರ ಘೋಷಿಸಿದೆ. ಪವನ್ ಅವರು 27ನೇ ಚಿತ್ರ ನಿರ್ಮಿಸುತ್ತಿರುವ ಮೆಗಾ ಸೂರ್ಯ ಪ್ರೊಡಕ್ಷನ್ ಸಹ 2 ಲಕ್ಷ ಪರಿಹಾರ ಘೋಷಿಸಿದೆ. ಪವನ್ ಕಲ್ಯಾಣ್ 28ನೇ ಚಿತ್ರ ಮಾಡುತ್ತಿರುವ ಮೈತ್ರಿ ಮೂವಿ ಮೇಕರ್ಸ್ ಸಹ 2 ಲಕ್ಷ ಪರಿಹಾರ ನೀಡಿದ್ದಾರೆ.