Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಜಯ್ ದೇವರಕೊಂಡ ಸಿನಿಮಾಕ್ಕೆ ಅಲ್ಲು ಅರ್ಜುನ್ ಆರ್ಥಿಕ ಸಹಾಯ!?
ನಟ ವಿಜಯ್ ದೇವರಕೊಂಡ ದೊಡ್ಡ ಸುದ್ದಿಯೊಂದನ್ನು ಕೆಲವು ದಿನದ ಹಿಂದೆಯಷ್ಟೆ ಹೊರಗೆಡವಿದ್ದಾರೆ. ವಿಜಯ್ ದೇವರಕೊಂಡ ಹಿಟ್ ನಿರ್ದೇಶಕ ಸುಕುಮಾರ್ ಜೊತೆಗೆ ಸಿನಿಮಾ ಮಾಡಲಿದ್ದಾರೆ.
ಆದರೆ ಈ ಸಿನಿಮಾದ ಹಿಂದೆ ಖ್ಯಾತ ನಟ ಅಲ್ಲು ಅರ್ಜುನ್ ಇದ್ದಾರೆ. ನಿಜ, ವಿಜಯ್ ದೇವರಕೊಂಡ ಹಾಗೂ ಸುಕುಮಾರ್ ಸಿನಿಮಾಕ್ಕೆ ಆರ್ಥಿಕ ಸಹಾಯ ನೀಡಿರುವುದು ಅಲ್ಲು ಅರ್ಜುನ್ ಎಂಬ ಸುದ್ದಿಯೊಂದು ಈಗಷ್ಟೆ ಹೊರಬಿದ್ದಿದೆ.
ಸುಕುಮಾರ್ ಹಾಗೂ ವಿಜಯ್ ದೇವರಕೊಂಡ ಸಿನಿಮಾ ಈಗಷ್ಟೆ ಘೋಷಣೆ ಮಾಡಿದ್ದಾರೆ. ಸಿನಿಮಾದ ನಿರ್ಮಾಣದ ಜವಾಬ್ದಾರಿಯನ್ನು ಕೇದಾರ್ ಸೆಲಗಮಶೆಟ್ಟಿ ವಹಿಸಿಕೊಂಡಿದ್ದಾರೆ.
ಆದರೆ ಆ ಸಿನಿಮಾಕ್ಕೆ ಅಲ್ಲು ಅರ್ಜುನ್ ಸಹ ನಿರ್ಮಾಪಕರಾಗಿದ್ದಾರೆ ಎನ್ನಲಾಗುತ್ತಿದೆ. ಪ್ರಸ್ತುತ ಸುಕುಮಾರ್ ನಿರ್ದೇಶನದ ಪುಷ್ಪಾ ಸಿನಿಮಾದಲ್ಲಿ ನಟಿಸುತ್ತಿರುವ ಅಲ್ಲು ಅರ್ಜುನ್, ಸುಕುಮಾರ್-ವಿಜಯ್ ದೇವರಕೊಂಡಸ ಸಿನಿಮಾಕ್ಕೆ ಆರ್ಥಿಕ ಬೆಂಬಲ ನೀಡುತ್ತಿದ್ದಾರೆ.
Recommended Video
ನಿರ್ದೇಶಕ ಸುಕುಮಾರ್, ಅಲ್ಲು ಅರ್ಜುನ್ ಅವರ ಬಹುಕಾಲದ ಗೆಳೆಯ, ಸುಕುಮಾರ್ ನಿರ್ದೇಶನದ ಆರ್ಯಾ ಸಿನಿಮಾ ಅಲ್ಲು ಅರ್ಜುನ್ ಗೆ ಸಿನಿಮಾ ರಂಗದಲ್ಲಿ ನೆಲೆಗೊಳ್ಳಲು ಮುಖ್ಯ ಕಾರಣ. ಹಾಗಾಗಿ ಸುಕುಮಾರ್ ಸಿನಿಮಾಕ್ಕೆ ಅಲ್ಲು ಅರ್ಜುನ್ ಬೆಂಬಲ ನೀಡುತ್ತಿದ್ದಾರೆ ಎನ್ನಲಾಗಿದೆ.