Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನೌಕರನಿಗೆ ಸರ್ಪ್ರೈಸ್ ಪಾರ್ಟಿ ಕೊಟ್ಟ ನಟ ಅಲ್ಲು ಅರ್ಜುನ್
ನಟ ಅಲ್ಲು ಅರ್ಜುನ್ ಒಳ್ಳೆಯ ನಟಮಾತ್ರವಲ್ಲ, ಹೃದಯವುಳ್ಳ ವ್ಯಕ್ತಿ. ಇದನ್ನು ಅವರ ಕಾರ್ಯಗಳು ಆಗಾಗ್ಗೆ ಸಾಬೀತು ಮಾಡುತ್ತಲೇ ಇರುತ್ತವೆ.
ಇತ್ತೀಚೆಗಷ್ಟೆ ಮಳೆಯಿಂದ ಹಾನಿಗೊಳಗಾದವರಿಗೆಂದು ಆರ್ಥಿಕ ಸಹಾಯ ಮಾಡಿದ್ದ ಅಲ್ಲು ಅರ್ಜು, ಅದಕ್ಕೂ ಮುನ್ನಾ, ಫ್ಲೆಕ್ಸ್ ಕಟ್ಟುವಾಗ ಮೃತಪಟ್ಟ ಮೂರು ಮಂದಿ ಪವನ್ ಕಲ್ಯಾಣ್ ಅಭಿಮಾನಿಗಳ ಕುಟುಂಬಕ್ಕೆ ಆರ್ಥಿಕ ನೆರವು ನೀಡಿದ್ದರು. ಇಂಥಹಾ ಹಲವು ಕಾರ್ಯಗಳನ್ನು ಅವರು ಮಾಡಿದ್ದಾರೆ.
200 ಕಿ.ಮೀ ನಡೆದು, ಕೊನೆಗೂ ಅಲ್ಲು ಅರ್ಜುನ್ ಭೇಟಿಯಾಗಿ ಸಂತಸಪಟ್ಟ ಅಭಿಮಾನಿ
ಸಾಮಾಜಿಕ ಕಾರ್ಯ ಮಾಡುವುದು ಮಾತ್ರವಲ್ಲ, ತಮ್ಮ ಸುತ್ತಲಿದ್ದವರನ್ನೂ ಸಹ ಅಲ್ಲು ಅರ್ಜುನ್ ಎಷ್ಟು ಪ್ರೀತಿಯಿಂದ ನೋಡಿಕೊಳ್ಳುತ್ತಾರೆ ಎಂಬುದಕ್ಕೆ ಇತ್ತೀಚಿನ ಘಟನೆಯೊಂದು ಸಾಕ್ಷಿಯಾಗಿದೆ.
ಅಲ್ಲು ಸ್ಟುಡಿಯೋ ಉದ್ಘಾಟಿಸಿದ ಅಲ್ಲು ಅರ್ಜುನ್ ಕುಟುಂಬ
ಸಿಬ್ಬಂದಿಯಲ್ಲಿ ಒಬ್ಬರಿಗೆ ಸರ್ಪ್ರೈಸ್ ಪಾರ್ಟಿ
ಸ್ಟಾರ್ ನಟ ಅಲ್ಲು ಅರ್ಜುನ್ ಅವರ ಬಳಿ ಹಲವು ಕೆಲಗಾರರಿದ್ದಾರೆ. ತಮ್ಮ ಖಾಸಗಿ ಸಿಬ್ಬಂದಿಯವರನ್ನು ಪ್ರೀತಿಯಿಂದಲೇ ಕಾಣುತ್ತಾರೆ ಅಲ್ಲು ಅರ್ಜುನ್. ತಮ್ಮ ಸಿಬ್ಬಂದಿಯಲ್ಲಿ ಒಬ್ಬರಿಗೆ ಇತ್ತೀಚೆಗಷ್ಟೆ ಸರ್ಪ್ರೈಸ್ ಪಾರ್ಟಿ ಕೊಟ್ಟಿದ್ದಾರೆ ಅಲ್ಲು ಅರ್ಜುನ್.
ಖಾಸಗಿ ನೌಕರ ಅಭಿನವ್ ಗೆ ಪಾರ್ಟಿ ಕೊಟ್ಟ ಅಲ್ಲು
ಹೌದು, ಅಲ್ಲು ಅರ್ಜುನ್ ಖಾಸಗಿ ಸಿಬ್ಬಂದಿಗಳಲ್ಲಿ ಒಬ್ಬ ವ್ಯಕ್ತಿ ಅಭಿನವ್ ನಟಾ ಗೆ ಮದುವೆ ನಿಗದಿಯಾಗಿದೆ. ಹಾಗಾಗಿ ಅಲ್ಲು ಅರ್ಜುನ್ ಆತನಿಗೆ, ಉಳಿದ ಸಿಬ್ಬಂದಿಗೆ ಹಾಗೂ ಆತನ ಕೆಲವು ಗೆಳೆಯರಿಗಾಗಿ ಬ್ಯಾಚುಲರ್ ಪಾರ್ಟಿ ಅರೇಂಜ್ ಮಾಡಿಸಿದ್ದಾರೆ.
ಸಿಬ್ಬಂದಿಯೊಂದಿಗೆ ಬೆರೆತು ಪಾರ್ಟಿ ಮಾಡಿದ್ದಾರೆ
ಸಿಬ್ಬಂದಿ ಹಾಗೂ ಅವರ ಗೆಳೆಯರೊಂದಿಗೆ ಅಲ್ಲು ಅರ್ಜುನ್ ಸಹ ಪಾರ್ಟಿಯಲ್ಲಿ ಭಾಗವಹಿಸಿ ಎಂಜಾಯ್ ಮಾಡಿದ್ದಾರೆ. ಅಲ್ಲು ಅರ್ಜುನ್ ಪಾರ್ಟಿ ನೀಡಿ ಸಿಬ್ಬಂದಿಯೊಂದಿಗೆ ತೆಗೆಸಿಕೊಂಡಿರುವ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅಲ್ಲು ಅರ್ಜುನ್ ಅವರ ಈ ಕಾರ್ಯವನ್ನು ನೆಟ್ಟಿಗರು ಹೊಗಳಿದ್ದಾರೆ.
ಪುಷ್ಪಾ ಸಿನಿಮಾದಲ್ಲಿ ಅಲ್ಲು ಅರ್ಜುನ್ ನಟನೆ
ಸಿನಿಮಾ ವಿಷಯಕ್ಕೆ ಮರಳುವುದಾದರೆ, ಅಲ್ಲು ಅರ್ಜುನ್ ಪುಷ್ಪಾ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಾಯಕಿ. ರಕ್ತ ಚಂದನ ಮರದ ಕಳ್ಳ ನಾಗಾಣೆದಾರನ ಪಾತ್ರದಲ್ಲಿ ಅಲ್ಲು ಅರ್ಜುನ್ ಕಾಣಿಸಿಕೊಳ್ಳಲಿದ್ದಾರೆ.