Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟಿ ಸಮಂತಾ ಚಿತ್ರದಲ್ಲಿ ಅಲ್ಲು ಅರ್ಜುನ್ ಮಗಳು ಎಂಟ್ರಿ
ತೆಲುಗು ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಗುರುವಾರ ತಮ್ಮ ಮಗಳು ಚಿತ್ರರಂಗ ಪ್ರವೇಶಿಸುತ್ತಿರುವ ಬಗ್ಗೆ ಖಚಿತಪಡಿಸಿದ್ದಾರೆ. ನಟಿ ಸಮಂತಾ ನಟಿಸಲಿರುವ ಹೊಸ ಚಿತ್ರದಲ್ಲಿ ಅಲ್ಲು ಅರ್ಜುನ್ ಮಗಳು ಆರ್ಹಾ ಕಾಣಿಸಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.
ಸಮಂತಾ ಅಕ್ಕಿನೇನಿ ನಟಿಸುತ್ತಿರುವ 'ಶಾಕುಂತಲ' ಚಿತ್ರದಲ್ಲಿ ಅಲ್ಲು ಅರ್ಜುನ್ ಮಗಳು ರಾಜಕುಮಾರ ಭರತನ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎಂದು ಅಲ್ಲು ಅರ್ಜುನ್ ಇನ್ಸ್ಟಾಗ್ರಾಂನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
Jr.NTR ಅಥವಾ ಅಲ್ಲು ಅರ್ಜುನ್ ಪುತ್ರ; ಸಮಂತಾ ಮಗನ ಪಾತ್ರಕ್ಕೆ ಸ್ಟಾರ್ ಮಕ್ಕಳ ಪೈಪೋಟಿ
'ರುದ್ರಮದೇವಿ' ಸಿನಿಮಾ ಖ್ಯಾತಿಯ ಗುಣಶೇಖರ್ ನಿರ್ದೇಶನದಲ್ಲಿ ತಯಾರಾಗಲಿರುವ ಪೌರಾಣಿಕ ಸಿನಿಮಾ 'ಶಾಕುಂತಲ' ಚಿತ್ರದ ಸಮಂತಾ ಶಾಕುಂತಲ ಪಾತ್ರದಲ್ಲಿ ನಟಿಸುತ್ತಿದ್ದಾರೆ. 'ಶಾಕುಂತಲ' ಮಗ ಭರತನ ಪಾತ್ರಕ್ಕೆ ಅಲ್ಲು ಅರ್ಜುನ್ ಮಗಳು ಎಂಟ್ರಿಯಾಗಿದ್ದಾರೆ. ನೀಲಿಮಾ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.
ಅಂದ್ಹಾಗೆ, ಅಲ್ಲು ಅರ್ಹಾ ಎಂಟ್ರಿ ಮೂಲಕ ಅಲ್ಲು ಕುಟುಂಬದಿಂದ ನಾಲ್ಕನೇ ಪೀಳಿಗೆ ಸಿನಿಮಾ ಜಗತ್ತಿಗೆ ಪರಿಚಯ ಆಗಿದೆ. ತೆಲುಗು ಇಂಡಸ್ಟ್ರಿಯ ಖ್ಯಾತ ನಟ ಅಲ್ಲು ರಾಮಲಿಂಗಯ್ಯ, ಅವರ ಮಗ ಅಲ್ಲು ಅರವಿಂದ್ (ನಿರ್ಮಾಪಕ), ಅರವಿಂದ್ ಮಗ ಅಲ್ಲು ಅರ್ಜುನ್ ಈಗ ಅಲ್ಲು ಅರ್ಜುನ್ ಮಗಳು ಅಲ್ಲು ಅರ್ಹಾ ಬಣ್ಣದ ಲೋಕಕ್ಕೆ ಬಂದಿದ್ದಾರೆ.
ಅಲ್ಲು ಅರ್ಹಾ ನಾಲ್ಕು ವರ್ಷದ ಮಗು. ಅಲ್ಲು ಅರ್ಜುನ್ ಮತ್ತು ಅಲ್ಲು ಸ್ನೇಹ ರೆಡ್ಡಿ ದಂಪತಿಯ ಮುದ್ದಿನ ಮಗಳು ಅದಾಗಲೇ ಸೋಶಿಯಲ್ ಮೀಡಿಯಾದಲ್ಲಿ ಸ್ಟಾರ್. ಮುದ್ದಾದ ಫೋಟೋ ಮತ್ತು ವಿಡಿಯೋಗಳ ಮೂಲಕ ಆಕರ್ಷಣೆಯಾಗಿದ್ದಾರೆ.
Recommended Video
'ಫ್ಯಾಮಿಲಿ ಮ್ಯಾನ್-2' ವೆಬ್ ಸಿರೀಸ್ ಸಕ್ಸಸ್ ಬಳಿಕ ಸಮಂತಾ ತಮ್ಮ ಕನಸಿನ ಪ್ರಾಜೆಕ್ಟ್ಗೆ ಚಾಲನೆ ಕೊಡಲಿದ್ದಾರೆ. ರಾಜ ದುಶ್ಯಂತ ಮತ್ತು ಶಾಕುಂತಲಾ ಪ್ರೇಮಕಥೆಯನ್ನಾಧರಿಸಿ ಈ ಸಿನಿಮಾ ತಯಾರಾಗುತ್ತಿದ್ದು, ಮಲಯಾಳಂ ನಟ ದೇವ್ ಮೋಹನ್ ದುಶ್ಯಂತ ರಾಜನಾಗಿ ನಟಿಸುತ್ತಿದ್ದಾರೆ. ಇನ್ನುಳಿದ ಕಲಾವಿದರ ಬಗ್ಗೆ ವಿವರ ಸಿಗಬೇಕಿದೆ.