Don't Miss!
- Lifestyle ನರಿ ಮತ್ತು ಕೋಳಿಗೂ ಮೂರ್ಖರ ದಿನಕ್ಕೂ ಇದೆ ನಂಟು..! ಏನದು.?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Automobiles ಶಿಯೋಮಿಯ ಈ ಎಲೆಕ್ಟ್ರಿಕ್ ಕಾರು ಸ್ಮಾರ್ಟ್ಫೋನ್ಗಳಂತೆ ಅಗ್ಗದ ಬೆಲೆ: ರೇಂಜ್ ಕೇಳಿದ್ರೆ ತಲೆ ತಿರುಗುತ್ತೆ!
- Technology ಈ Amoled ಡಿಸ್ಪ್ಲೇ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!..ಈ ಆಫರ್ಗೆ ನೀವು ಫಿದಾ ಆಗ್ತೀರಾ!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಲ್ಲು ಅರ್ಜುನ್ ಅಭಿಮಾನಿಗಳಿಗೆ ಕಹಿ ಸುದ್ದಿ: 'ಪುಷ್ಪಾ' ಬಿಡುಗಡೆ ಮುಂದೂಡಿಕೆ?
ಅಲ್ಲು ಅರ್ಜುನ್ ಅಭಿಮಾನಿಗಳಿಗೊಂದು ಕಹಿ ಸುದ್ದಿ. ಬಹು ನಿರೀಕ್ಷಿತ ಸಿನಿಮಾ 'ಪುಷ್ಪಾ' ಬಿಡುಗಡೆ ನಿಗದಿತ ದಿನಾಂಕಕ್ಕಿಂತಲೂ ತಡವಾಗುವ ಸಾಧ್ಯತೆ ದಟ್ಟವಾಗಿದೆ.
'ಪುಷ್ಪ' ಸಿನಿಮಾದ ಬಿಡುಗಡೆಯನ್ನು ಆಗಸ್ಟ್ 13 ಕ್ಕೆ ನಿಗದಿಪಡಿಸಲಾಗಿತ್ತು. ಆದರೆ ಈಗ ಸಿನಿಮಾದ ಬಿಡುಗಡೆ ಮುಂದಕ್ಕೆ ಹೋಗುವ ಬಗ್ಗೆ ಸುದ್ದಿ ಹಬ್ಬಿದೆ.
ಆಂಧ್ರ-ತೆಲಂಗಾಣ ರಾಜ್ಯಗಳ ಹೊರಗೆ ಚಿತ್ರೀಕರಣ ಮಾಡುವ ಯೋಜನೆಯನ್ನು ನಿರ್ದೇಶಕ ಸುಕುಮಾರ್ ಹಾಕಿಕೊಂಡಿದ್ದರು. ಆದರೆ ಕೊರೊನಾ ಎರಡನೇ ಅಲೆ ತೀವ್ರತೆಯಿಂದಾಗಿ ಹೊರ ರಾಜ್ಯಗಳಲ್ಲಿ ಮಾಡಲಿಚ್ಛಿಸಿದ್ದ ಚಿತ್ರೀಕರಣವನ್ನು ರದ್ದು ಮಾಡುವ ಆಲೋಚನೆಯಲ್ಲಿದೆ ಚಿತ್ರತಂಡ.
ಹೊರ ರಾಜ್ಯಗಳಲ್ಲಿ ಚಿತ್ರೀಕರಣ ಮಾಡುವ ಬದಲಿಗೆ ಸೆಟ್ಗಳನ್ನು ಹಾಕಿ ಚಿತ್ರೀಕರಣ ಮಾಡುವ ಯೋಚನೆ ಇರುವ ಕಾರಣ ಹಾಗೂ ಇದಕ್ಕೆ ಯೋಜಿತ ಅವಧಿಗಿಂತಲೂ ಹೆಚ್ಚಿನ ಸಮಯ ಬೇಕಾಗಿರುವ ಕಾರಣ ಚಿತ್ರೀಕರಣ ತಡವಾಗುವ ಸಾಧ್ಯತೆ ಇದೆ. ಹೀಗಾಗಿ ಸಿನಿಮಾದ ಬಿಡುಗಡೆ ದಿನಾಂಕವೂ ಮುಂದಕ್ಕೆ ಹೋಗುವ ಸಾಧ್ಯತೆ ದಟ್ಟವಾಗಿದೆ ಎಂದು ತೆಲುಗು ಮಾಧ್ಯಮಗಳು ವರದಿ ಮಾಡಿವೆ.
ಸಿನಿಮಾದ ಪೂರ್ಣ ಚಿತ್ರೀಕರಣ ಮುಗಿದು ಪೋಸ್ಟ್ ಪ್ರೊಡಕ್ಷನ್ ಹಂತ ಬರುವ ವೇಳೆಗೆ ಹೊಸ ಬಿಡುಗಡೆ ದಿನಾಂಕವನ್ನು ಸಿನಿಮಾ ತಂಡ ಘೋಷಿಸಲಿದೆ.
'ಪುಷ್ಪ' ಸಿನಿಮಾವು ರಕ್ತಚಂದನ ಕಳ್ಳಸಾಗಣೆದಾರನ ಕತೆಯನ್ನು ಹೊಂದಿದ್ದು, ಅಲ್ಲು ಅರ್ಜುನ್ ಜೊತೆಗೆ ಕನ್ನಡತಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸುತ್ತಿದ್ದಾರೆ. ಸಿನಿಮಾದಲ್ಲಿ ವಿಲನ್ ಆಗಿ ಮಲಯಾಳಂನ ಖ್ಯಾತ ನಟಿ ಫಹಾದ್ ಫಾಸಿಲ್ ನಟಿಸಲಿದ್ದಾರೆ. ಸಿನಿಮಾವನ್ನು ಹಿಟ್ ನಿರ್ದೇಶಕ ಸುಕುಮಾರ್ ನಿರ್ದೇಶಿಸುತ್ತಿದ್ದಾರೆ.
Recommended Video