Don't Miss!
- News ಲೋಕಸಭಾ ಚುನಾವಣೆ: ಮೈಸೂರು ಜಿಲ್ಲೆಯಲ್ಲಿ ಭದ್ರತೆಗೆ 5 ಸಾವಿರ ಪೊಲೀಸರ ನಿಯೋಜನೆ
- Sports IPL 2024: ಆರ್ಸಿಬಿಗೆ ವಿರಾಟ್, ಪಾಟಿದಾರ್ ಆಸರೆ: ಹೈದರಾಬಾದ್ಗೆ ಸವಾಲಿನ ಟಾರ್ಗೆಟ್
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಮ್ ಗೋಪಾಲ್ ವರ್ಮಾ ವಿರುದ್ಧ ಯುವತಿಯ ಕಾನೂನು ಹೋರಾಟ
ಬೇರೆಯವರ ಜೀವನದ ಬಗ್ಗೆ ಸಿನಿಮಾ ಮಾಡಿ, ವಿವಾದ ಎಬ್ಬಿಸಿ ಹಣ ದೋಚುವ ರಾಮ್ ಗೋಪಾಲ್ ವರ್ಮಾ ಅನ್ನು ತೆಲುಗು ಮಾಧ್ಯಮಗಳು 'ವಿಲಕ್ಷಣ ನಿರ್ದೇಶಕ' ಎಂದು ಕರೆಯುತ್ತಾರೆ.
Recommended Video
ತಿಂಗಳಿಗೊಂದರಂತೆ ಸಿನಿಮಾಗಳನ್ನು ನಿರ್ಮಿಸಿ ಆನ್ಲೈನ್ ನಲ್ಲಿ ಬಿಡುಗಡೆ ಮಾಡುತ್ತಿದ್ದ ರಾಮ್ ಗೋಪಾಲ್ ವರ್ಮಾ ಗೆ ಯುವತಿಯೊಬ್ಬಾಕೆ ಬ್ರೇಕ್ ಹಾಕಿದ್ದಾಳೆ.
ಪವನ್ ಕಲ್ಯಾಣ್ ಬಳಿಕ ಅಲ್ಲು ಅರ್ಜುನ್ ಕುಟುಂಬದ ಬುಡಕ್ಕೆ ಕೈ ಹಾಕಿದ ರಾಮ್ ಗೋಪಾಲ್ ವರ್ಮಾ
ದೇಶವೇ ಬೆಚ್ಚಿಬೀಳುವಂತೆ ಮಾಡಿದ್ದ ಆಂಧ್ರಪ್ರದೇಶದ ಮರ್ಯಾದೆ ಹತ್ಯೆಯ ಬಗ್ಗೆ ರಾಮ್ ಗೋಪಾಲ್ ವರ್ಮಾ 'ಮರ್ಡರ್' ಎಂಬ ಸಿನಿಮಾ ಮಾಡುವುದಾಗಿ ಘೋಷಿಸಿ ಇದಾಗಲೇ ಚಿತ್ರೀಕರಣ ಪ್ರಾರಂಭಿಸಿದ್ದರು. ಆದರೆ ಆ ಸಿನಿಮಾ ಬಿಡುಗಡೆಗೆ ತಡೆ ಬೀಳುವ ಎಲ್ಲಾ ಸಾಧ್ಯತೆ ಇದೆ.
ಮರ್ಯಾದೆ ಹತ್ಯೆ ಮಾಡಿಸಿದ್ದ ಮಾರುತಿ ರಾವ್
ಪ್ರೇಮ ವಿವಾಹವಾಗಿದ್ದ ಅಮೃತಾ ಹಾಗೂ ಪ್ರಣಯ್ ಚೆನ್ನಾಗಿಯೇ ಜೀವನ ಸಾಗಿಸುತ್ತಿದ್ದರು. ಆದರೆ ಅಮೃತಾಳ ತಂದೆ ಪ್ರಣಯ್ ಅನ್ನು ಹಾಡು ಹಗಲೆ ಕೊಲ್ಲಿಸಿಬಿಟ್ಟ. ಗರ್ಭಿಣಿಯಾಗಿದ್ದ ಅಮೃತಾಳ ಎದುರೇ ಗಂಡ ಪ್ರಣಯ್ ಕೊಲೆಯಾದ ಘಟನೆ ದೇಶದವೇ ಬೆಚ್ಚಿ ಬೀಳುವಂತೆ ಮಾಡಿತ್ತು.
ಮರ್ಡರ್ ಸಿನಿಮಾ ಘೋಷಿಸಿದ್ದ ವರ್ಮಾ
ಇದೇ ಘಟನೆಯನ್ನು ಇಟ್ಟುಕೊಂಡು ಮರ್ಡರ್ ಸಿನಿಮಾವನ್ನು ಘೋಷಿಸಿದ್ದರು ರಾಮ್ ಗೋಪಾಲ್ ವರ್ಮಾ, ಸಿನಿಮಾದ ಪೋಸ್ಟರ್ಗಳು ಸಹ ಬಿಡುಗಡೆ ಆಗಿದ್ದವು. ಕೆಲವೇ ದಿನಗಳಲ್ಲಿ ಸಿನಿಮಾವನ್ನು ಆನ್ಲೈನ್ ನಲ್ಲಿ ಬಿಡುಗಡೆ ಮಾಡುವುದಾಗಿ ವರ್ಮಾ ಹೇಳಿದ್ದರು.
ರಾಮ್ಗೋಪಾಲ್ ವರ್ಮಾ-ಪವನ್ ಕಲ್ಯಾಣ್ ವಿವಾದ: ಪ್ರಕಾಶ್ ರೈ ಪ್ರತಿಕ್ರಿಯೆ
ಸಿನಿಮಾದಲ್ಲಿ ಕೆಲವು ಸತ್ಯಗಳನ್ನು ಮರೆಮಾಚಲಾಗಿದೆ: ಅಮೃತಾ
ಆದರೆ ಅಮೃತಾ ಪ್ರಣಯ್, ರಾಮ್ ಗೋಪಾಲ್ ವರ್ಮಾ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ್ದು, ಸಿನಿಮಾಕ್ಕೆ ತಡೆ ಒಡ್ಡಬೇಕೆಂದು ನ್ಯಾಯಾಲಯವನ್ನು ಮನವಿ ಮಾಡಿದ್ದಾರೆ. ಸಿನಿಮಾದಲ್ಲಿ ಕೆಲವೊಂದು ಸತ್ಯಗಳನ್ನು ಮರೆಮಾಚಲಾಚಿರುವ ಸಂಭವ ಇದೆ ಎಂದು ಅವರು ದೂರಿನಲ್ಲಿ ಹೇಳಿದ್ದಾರೆ.
ಕಹಿ ಘಟನೆಯನ್ನು ರೋಚಕವಾಗಿ ತೋರಿಸುತ್ತಾರೆ: ಅಮೃತಾ
ನಾನು ಇದಾಗಲೇ ಪತಿ ಪ್ರಣಯ್ ಹಾಗೂ ತಂದೆ ಮಾರುತಿ ರಾವ್ ಅನ್ನು ಕಳೆದುಕೊಂಡು ದುಖದಲ್ಲಿದ್ದೇನೆ. ಇಂಥಹಾ ಸಮಯದಲ್ಲಿ ನನ್ನ ಜೀವನದ ಬಗ್ಗೆ ಸಿನಿಮಾ ಮಾಡುವುದು ಸಮಂಜಸವಲ್ಲ. ಅಲ್ಲದೆ ವರ್ಮಾ ನನ್ನ ಜೀವನದ ಕಹಿ ಘಟನೆಯನ್ನು ರೋಚಕವಾಗಿ ತೋರಿಸಿ ಹಣ ಮಾಡುವ ಉಮೇದು ಹೊಂದಿದ್ದಾರೆ ಎಂದು ಅಮೃತಾ ದೂರಿನಲ್ಲಿ ಹೇಳಿದ್ದಾರೆ.
ಆಗಸ್ಟ್ 6 ರಂದು ಹಾಜರಾಗಲು ಸೂಚನೆ
ನಲಗೊಂಡ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣವನ್ನು ಎಸ್ಸಿ/ಎಸ್ಟಿ ಪ್ರಕರಣ ಎಂದು ಪರಿಗಣಿಸಿ, ವರ್ಮಾಗೆ ನೊಟೀಸ್ ಜಾರಿ ಮಾಡಲಾಗಿದೆ. ರಾಮ್ ಗೋಪಾಲ್ ವರ್ಮಾ ಆಗಸ್ಟ್ 6 ರಂದು ನ್ಯಾಯಾಲಯಕ್ಕೆ ಹಾಜರಾಗಬೇಕಿದೆ.