Don't Miss!
- News Bank Holidays in April: ಏಪ್ರಿಲ್ನಲ್ಲಿ 14 ದಿನಗಳ ಕಾಲ ಬ್ಯಾಂಕ್ ರಜೆ, ಪಟ್ಟಿ ಇಲ್ಲಿದೆ
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Automobiles ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಹೊಸ ಸ್ಕೋಡಾ ಸೂಪರ್ಬ್ ಕಾರು
- Sports IPL 2024: ಆರ್ಸಿಬಿ vs ಕೆಕೆಆರ್ ಪಂದ್ಯಕ್ಕೂ ಮುನ್ನ ಗಂಭೀರ್ನತ್ತ ಐಸ್-ಕೋಲ್ಡ್ ಲುಕ್ ನೀಡಿದ ಕೊಹ್ಲಿ
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶ್ರೀರಾಮನ ಕುರಿತ 'ಆದಿಪುರುಷ್' ಸಿನಿಮಾಕ್ಕೆ ಎ.ಆರ್.ರೆಹಮಾನ್ ಸಂಗೀತ
ಪ್ರಭಾಸ್ ನಟಸಲಿರುವ ಭಾರಿ ಬಜೆಟ್ ನ, ಶ್ರೀರಾಮನ ಕುರಿತಾದ ಸಿನಿಮಾ 'ಆದಿಪುರುಷ್' ಗೆ ಸಂಗೀತ ನಿರ್ದೇಶನವನ್ನು ಆಸ್ಕರ್ ವಿಜೇತ ಎ.ಆರ್.ರೆಹಮಾನ್ ಮಾಡಲಿದ್ದಾರೆ ಎನ್ನಲಾಗಿದೆ.
'ಆದಿಪುರುಷ್' ಸಿನಿಮಾ ಶ್ರೀರಾಮನ ಕುರಿತಾದ ಸಿನಿಮಾ ಆಗಿದ್ದು, ಭಾರಿ ದೊಡ್ಡ ಬಜೆಟ್ನ ಸಿನಿಮಾ ಇದಾಗಿರಲಿದೆ. ಸಿನಿಮಾವನ್ನು ಬಾಲಿವುಡ್ನ ಓಮ್ ರಾವತ್ ನಿರ್ದೇಶಿಸಲಿದ್ದಾರೆ.
'ಆದಿಪುರುಷ' ಸಿನಿಮಾಗೆ ಪ್ರಭಾಸ್ ಆಯ್ಕೆಯ ಹಿಂದಿನ ರಹಸ್ಯ ಬಹಿರಂಗ ಪಡಿಸಿದ ನಿರ್ದೇಶಕ
400 ಕೋಟಿಗೂ ಹೆಚ್ಚಿನ ಬಜೆಟ್ ನ ಈ ಸಿನಿಮಾವನ್ನು ಭೂಷಣ್ ಕುಮಾರ್ ನಿರ್ಮಿಸಲಿದ್ದಾರೆ. ಸಿನಿಮಾದಲ್ಲಿ ವಿಲನ್ ಆಗಿ ಸೈಫ್ ಅಲಿ ಖಾನ್ ನಟಿಸಲಿದ್ದಾರೆ. ಸೀತಾ ಪಾತ್ರಕ್ಕೆ ನಾಯಕಿಯ ಆಯ್ಕೆ ಚಾಲ್ತಿಯಲ್ಲಿದೆ. ಇನ್ನೂ ಅಂತಿಮವಾಗಿಲ್ಲ.
ರೆಹಮಾನ್ ಆಯ್ಕೆ ಅಂತಿಮವಾಗಿಲ್ಲ
ಆಸ್ಕರ್ ವಿಜೇತ ಎ.ಆರ್.ರೆಹಮಾನ್ ಅವರು ಸಿನಿಮಾಕ್ಕೆ ಸಂಗೀತ ನೀಡಲಿದ್ದಾರೆ ಎನ್ನಲಾಗುತ್ತಿದೆ. ಆದರೆ ಎ.ಆರ್.ರೆಹಮಾನ್ ಆಯ್ಕೆ ಇನ್ನೂ ಅಂತಿಮವಾಗಿಲ್ಲ. ಇನ್ನೊಬ್ಬ ಪ್ರತಿಭಾವಂತ ಸಂಗೀತ ನಿರ್ದೇಶಕರು ರೆಹಮಾನ್ಗೆ ಸ್ಪರ್ಧೆ ಒಡ್ಡುತ್ತಿದ್ದಾರೆ.
ಎಂ.ಎಂ.ಕೀರವಾಣಿ ಸಂಗೀತ ನಿರ್ದೇಶನ?
ದಕ್ಷಿಣದ ಖ್ಯಾತ ಸಂಗೀತ ನಿರ್ದೇಶಕ ಎಂ.ಎಂ.ಕೀರವಾಣಿ ಯಿಂದ ಹಿನ್ನೆಲೆ ಸಂಗೀತ ಕೊಡಿಸಬೇಕು ಎಂಬ ಅಭಿಲಾಷೆಯನ್ನು ಚಿತ್ರತಂಡದ ಕೆಲವು ಪ್ರಮುಖರು ವ್ಯಕ್ತಪಡಿಸಿದ್ದಾರೆ. ಕೀರವಾಣಿ ಈಗಾಗಲೇ ಐತಿಹಾಸಿಕ, ಪೌರಾಣಿಕ ಸಿನಿಮಾಗಳಿಗೆ ಸಂಗೀತ ನೀಡಿ ಅನುಭವವುಳ್ಳವರು. ಹಾಗಾಗಿ ಇವರ ಆಯ್ಕೆಯ ಬಗ್ಗೆ ಚರ್ಚಿಸಲಾಗುತ್ತಿದೆ.
'ಆದಿಪುರುಷ' ಚಿತ್ರದಲ್ಲಿ ಸೀತೆ ಯಾರು? ಕೀರ್ತಿ, ಕಿಯಾರಾ ಬಳಿಕ ಮತ್ತೊಂದು ಹೆಸರು
ಸಿನಿಮಾದಲ್ಲಿ ಲಂಕೇಶನಾಗಿ ಸೈಫ್ ಅಲಿ ಖಾನ್
ಸಿನಿಮಾದಲ್ಲಿ ಲಂಕೇಶನಾಗಿ ಸೈಫ್ ಅಲಿ ಖಾನ್ ಅನ್ನು ಈಗಾಗಲೇ ಆಯ್ಕೆ ಮಾಡಲಾಗಿದೆ. ಆದರೆ ಅಭಿಮಾನಿಗಳು ಸೈಫ್ ಅಲಿ ಖಾನ್ ಅನ್ನು ಬದಲಾಯಿಸುವಂತೆ ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡಿದ್ದಾರೆ. ಒಂದು ವೇಳೆ ಎ.ಆರ್.ರೆಹಮಾನ್ ಆಯ್ಕೆ ಆದರೂ ಇದೇ ಬೇಡಿಕೆ ಬರುವ ಸಾಧ್ಯತೆ ಇದೆ.
ನಾಯಕಿ ಆಯ್ಕೆ ಕಠಿಣವಾಗುತ್ತಿದೆ
ಸೀತಾ ಮಾತೆ ಪಾತ್ರಕ್ಕೆ ನಾಯಕಿಯ ಆಯ್ಕೆ ಚಿತ್ರತಂಡಕ್ಕೆ ಬಹುಕಠಿಣವಾಗಿದ್ದು, ದಕ್ಷಿಣದ ಕೀರ್ತಿ ಸುರೇಶ್ ಹಾಗೂ ಕಿಯಾರಾ ಅಡ್ವಾಣಿ ಮಧ್ಯೆ ಸ್ಪರ್ಧೆ ಇದೆ. ಅನುಷ್ಕಾ ಶರ್ಮಾ ಅನ್ನು ಸಹ ಪರಿಗಣಿಸಲಾಗಿತ್ತಾದರೂ ಆಕೆ ಈಗ ತಾಯಿಯಾಗುತ್ತಿರುವ ಕಾರಣ ಆಕೆಯನ್ನು ಪಟ್ಟಿಯಿಂದ ಕೈಬಿಡಲಾಗಿದೆ.