Don't Miss!
- Finance Lok Sabha Election 2024: ಮತದಾನ ಮಾಡಿ ಹೋಟೆಲ್ಗಳಲ್ಲಿ ಫ್ರೀಯಾಗಿ, ರಿಯಾಯಿತಿಯಲ್ಲಿ ಟಿಫನ್ ತಿನ್ನಿ!
- News BREAKING: ಬೆಂಗಳೂರಿನಲ್ಲಿ ರೈಲಿಗೆ ಸಿಲುಕಿ ಮೂವರು ಸಾವು
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Automobiles ಭರ್ಜರಿ ಸಿಹಿಸುದ್ದಿ: ಸ್ಕೋಡಾ ಕೊಡಿಯಾಕ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- Lifestyle ಖುಲಾಯಿಸಿತು ಅದೃಷ್ಟ: ಫ್ಯಾಂಟಸಿ ಗೇಮ್ನಲ್ಲಿ ₹1.5 ಕೋಟಿ ಗೆದ್ದ ಮೆಕ್ಯಾನಿಕ್..!
- Sports IPL 2024: ಸಿಕ್ಸ್ ಹೊಡೆದು ತಪ್ಪಾಯ್ತು ಎಂದಿದ್ದೇಕೆ ರಿಷಬ್ ಪಂತ್ ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಅರ್ಜುನ್ ರೆಡ್ಡಿ' ನಟಿ ಶಾಲಿನಿ ಪಾಂಡೆ ವಿರುದ್ಧ ಕ್ರಿಮಿನಲ್ ಕೇಸ್
ವಿಜಯ್ ದೇವರಕೊಂಡ ಅಭಿನಯದ 'ಅರ್ಜುನ್ ರೆಡ್ಡಿ' ಸಿನಿಮಾ ಸೌತ್ ಇಂಡಸ್ಟ್ರಿಯಲ್ಲಿ ಹೊಸ ಅಲೆ ಸೃಷ್ಟಿಸಿತ್ತು. ಈ ಸಿನಿಮಾ ಬಳಿಕ ದೇವರಕೊಂಡ ಮತ್ತು ಶಾಲಿನಿ ಪಾಂಡೆ ರಾತ್ರೋರಾತ್ರಿ ಸ್ಟಾರ್ ಪಟ್ಟಕ್ಕೇರಿದರು.
ನಟಿ ಶಾಲಿನಿ ಪಾಂಡೆಗೆ ತಮಿಳು, ತೆಲುಗು ಹಾಗೂ ಹಿಂದಿ ಚಿತ್ರರಂಗದಿಂದಲೂ ಆಫರ್ ಬರಲು ಶುರುವಾಯ್ತು. ಅದೃಷ್ಟ ಎಂಬಂತೆ ರಣ್ವೀರ್ ಸಿಂಗ್ ನಟನೆಯ ಸಿನಿಮಾವೊಂದರಲ್ಲಿ ಶಾಲಿನಿ ನಾಯಕಿಯಾಗಿ ನಟಿಸುವ ಅವಕಾಶ ಗಿಟ್ಟಿಸಿಕೊಂಡರು.
ಬಾಲಿವುಡ್ ಸ್ಟಾರ್ ನಟನ ಚಿತ್ರಕ್ಕೆ ನಾಯಕಿಯಾದ 'ಅರ್ಜುನ್ ರೆಡ್ಡಿ' ನಟಿ ಶಾಲಿನಿ
ಹೀಗೆ, ಸಕ್ಸಸ್ ಹುಡುಕಿ ಹೋದ ನಟಿಯ ವಿರುದ್ಧ ಈಗ ಕ್ರಿಮಿನಲ್ ಕೇಸ್ ದಾಖಲಾಗಿದೆ ಎಂಬ ವಿಚಾರ ಬಹಿರಂಗವಾಗಿದೆ. ಅಷ್ಟಕ್ಕೂ, ಶಾಲಿನಿ ಪಾಂಡೆ ವಿರುದ್ಧ ದಾಖಲಾದ ದೂರು ಯಾವುದು? ಮುಂದೆ ಓದಿ....
ಬಾಲಿವುಡ್ ಚಿತ್ರಕ್ಕಾಗಿ ತಮಿಳು ಚಿತ್ರಕ್ಕೆ ಕೈ ಕೊಟ್ಟ ನಟಿ
ವಿಜಯ್ ಅಂಟೋನಿ ಮತ್ತು ಅರುಣ್ ವಿಜಯ್ ನಾಯಕರಾಗಿ ನಟಿಸುತ್ತಿರುವ ''ಅಗ್ನಿ ಸಿರಗುಗಲ್'' ಚಿತ್ರದಲ್ಲಿ ಶಾಲಿನಿ ನಾಯಕಿಯಾಗಿ ನಟಿಸುತ್ತಿದ್ದಾರೆ. 27 ದಿನಗಳ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದ ನಟಿ ನಂತರ ಶೂಟಿಂಗ್ ಗೆ ಬರ್ತಿಲ್ಲ ಎಂದು ಚಿತ್ರತಂಡ ಆಕ್ರೋಶ ಹೊರಹಾಕಿದೆ.
ಸಂಪರ್ಕಕ್ಕೆ ಸಿಗುತ್ತಿಲ್ಲ
'ಶಾಲಿನಿ ಪಾಂಡೆ ಅವರು 27 ದಿನ ಶೂಟಿಂಗ್ ಮಾಡಿ, ನಂತರ ಚಿತ್ರೀಕರಣ ಬರುತ್ತಿಲ್ಲ. ಅವರನ್ನು ಸಂಪರ್ಕಿಸಿದರೂ ಕೈಗೆ ಸಿಗುತ್ತಿಲ್ಲ' ಎಂದು ಬೇಸರ ವ್ಯಕ್ತಪಡಿಸುತ್ತಿರುವ, ನಿರ್ದೇಶಕ ಹಾಗೂ ನಿರ್ಮಾಪಕ ನಟಿಯ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು ಮಾಡಿದ್ದಾರಂತೆ. ಜೊತೆಗೆ ತಮಿಳು ಮತ್ತು ತೆಲುಗು ನಿರ್ಮಾಪಕರ ಸಂಘದಲ್ಲಿ ಈ ಬಗ್ಗೆ ದೂರು ನೀಡಲು ಮುಂದಾಗಿದ್ದಾರಂತೆ.
ಬಾಲಿವುಡ್ ನಟನಿಗಾಗಿ ಸೌತ್ ಸಿನಿಮಾಗೆ ಕೈಕೊಟ್ರಂತೆ ನಟಿ ಶಾಲಿನಿ ಪಾಂಡೆ!
ಹಿಂದಿ ಚಿತ್ರಕ್ಕೆ ಸೈ, ಸೌತ್ ಚಿತ್ರಕ್ಕೆ ಬಾಯ್
ಇದೆಲ್ಲದಕ್ಕೂ ರಣ್ವೀರ್ ಸಿಂಗ್ ಜೊತೆಯಲ್ಲಿ ನಟಿಸುತ್ತಿರುವ ಚಿತ್ರ ಕಾರಣ ಎಂದು ಹೇಳಲಾಗುತ್ತಿದೆ. ಹಿಂದಿ ಸಿನಿಮಾದಲ್ಲಿ ನಟಿಸುವ ಸಲುವಾಗಿ ಸೌತ್ ಚಿತ್ರಗಳಿಗೆ ಅನ್ಯಾಯ ಮಾಡುತ್ತಿದ್ದಾರೆ. ತೆಲುಗು ಮತ್ತು ತಮಿಳು ಚಿತ್ರಗಳನ್ನು ಕಡೆಗಣಿಸುತ್ತಿದ್ದಾರೆ ಎಂದು ಚಿತ್ರತಂಡ ಆರೋಪಿಸಿದೆ.
ಶಾಲಿನಿ ಬದಲು ಅಕ್ಷರಾ!
ಶಾಲಿನಿ ಪಾಂಡೆ ಕೈಕೊಟ್ಟ ಕಾರಣದಿಂದ ಆ ಜಾಗಕ್ಕೆ ಕಮಲ್ ಹಾಸನ್ ಪುತ್ರಿ ಅಕ್ಷರಾ ಹಾಸನ್ ಅವರನ್ನ ಕರೆತರಲಾಗಿದೆಯಂತೆ. ಈಗಾಗಲೇ ಅಕ್ಷರಾ ಶೂಟಿಂಗ್ ನಲ್ಲೂ ಭಾಗಿಯಾಗಿದ್ದು, ವಿದೇಶದಲ್ಲಿ ಚಿತ್ರೀಕರಣ ಮಾಡಲಾಗುತ್ತಿದೆಯಂತೆ.