Don't Miss!
- News Government Employees; ಸರ್ಕಾರಿ ನೌಕರರ ಜೀವ ವಿಮೆ ಪಾಲಿಸಿ ಅವಧಿ ಏರಿಕೆ
- Lifestyle ಬಾಯಿ ರುಚಿಗೆ ಗರಿ ಗರಿ ನಿಪ್ಪಟ್ಟು..! ಮನೆಯಲ್ಲೇ ಮಾಡಿ ಟೆಸ್ಟಿ ತಿಂಡಿ
- Automobiles Kia: ಬ್ರೇಕ್ ಇಲ್ಲದ ಟ್ರಕ್ನಂತೆ ಮುನ್ನುಗ್ಗುತ್ತಿದೆ ಕಿಯಾ: ಈಗ ಸಣ್ಣ ಪಟ್ಟಣಗಳಲ್ಲೂ ಸಿಗಲಿದೆ!
- Sports RCB vs KKR: ಯಶ್ ಮೇಲೆ 'ದಯೆ' ತೋರುತ್ತಾರಾ ರಿಂಕು ಸಿಂಗ್?; ಜಿದ್ದು ತೀರಿಸಿಕೊಳ್ತಾರಾ ಆರ್ಸಿಬಿ ವೇಗಿ?
- Technology ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಡೀಪ್ಫೇಕ್ ದೊಡ್ಡ ಕಳವಳಕಾರಿ ಎಂದ ಮೋದಿ
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಗಳ ಯಶಸ್ಸಿಗಾಗಿ ಅರ್ಜುನ್ ಸರ್ಜಾ ಪಣ: ತೆಲುಗಿನಲ್ಲಿ ನಿರ್ದೇಶನಕ್ಕಿಳಿದ ನಟ!
ನಟ ಅರ್ಜುನ್ ಸರ್ಜಾ ಕನ್ನಡದ ಮೂಲಕದ ನಟ. ಆ್ಯಕ್ಷನ್ ಕಿಂಗ್ ಅಂತಲೇ ಕರೆಸಿಕೊಳ್ಳುವ ನಟ ಅರ್ಜುನ್ ಸರ್ಜಾ ಕನ್ನಡದಲ್ಲಿ ಸಾಕಷ್ಟು ಹಿಟ್ಗಳನ್ನು ಕೊಟ್ಟಿದ್ದಾರೆ. ಬಳಿಕ ತಮಿಳಿನಲ್ಲಿ ಹೆಚ್ಚು ಸಿನಿಮಾ ಮಾಡಿದ್ದಾರೆ.
ಅರ್ಜುನ್ ಸರ್ಜಾಗೆ ಇಬ್ಬರು ಹೆಣ್ಣು ಮಕ್ಕಳು. ಮೊದಲ ಮಗಳು ಐಶ್ವರ್ಯಾ ಅರ್ಜುನ್ ಸಿನಿಮಾ ರಂಗಕ್ಕೆ ಹಲವು ವರ್ಷಗಳ ಹಿಂದೆಯೇ ಪದಾರ್ಪಣೆ ಮಾಡದ್ದಾರೆ. ಐಶ್ವರ್ಯಾ ಅರ್ಜುನ್ ತಮಿಳು ಮತ್ತು ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ.
ಚಿರು ಸರ್ಜಾಗೆ ಬೆಲ್ಟ್ನಲ್ಲಿ ಹೊಡೆದಿದ್ದ ಘಟನೆ ನೆನಪಿಸಿಕೊಂಡ ಅರ್ಜುನ್ ಸರ್ಜಾ
ಆದರೆ ಅದ್ಯಾಕೋ ಐಶ್ವರ್ಯಾ ಅದೃಷ್ಟ ಸರಿ ಇಲ್ಲ ಎನಿಸುತ್ತೆ. ತಮಿಳು ಕನ್ನಡದಲ್ಲಿ ಹೆಚ್ಚು ಸಿನಿಮಾಗಳನ್ನು ಮಾಡಲು ಸಾಧ್ಯವಾಗಿಲ್ಲ. ಹಾಗಾಗಿ ಈಗ ತೆಲುಗು ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ಹೌದು ನಟಿ ಐಶ್ವರ್ಯಾ ಅರ್ಜುನ್ ಸದ್ಯ ತೆಲುಗು ಸಿನಿಮಾದಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ತೆಲುಗಿನಲ್ಲಿ ಮೊದಲ ಸಿನಿಮಾ ಮಾಡುತ್ತಿದ್ದಾರೆ.
ಅಪ್ಪಂದಿರ ದಿನವಾದ ಇಂದು (ಜೂನ್ 19) ಚಿತ್ರದ ಮೊದಲ ಪೋಸ್ಟರ್ ಜೊತೆಗೆ ಸಿನಿಮಾವನ್ನು ಅನೌನ್ಸ್ ಮಾಡಲಾಗಿದೆ. ಆದರೆ, ಚಿತ್ರದ ಟೈಟಲ್ ರಿವೀಲ್ ಮಾಡಿಲ್ಲ. ಚಿತ್ರ ತಂಡದ ಹೆಸರಿನೊಂದಿದೆ ಆದಷ್ಟು ಬೇಗ ಸಿನಿಮಾ ಶುರುವಾಗಲಿದೆ ಎಂದು ಮಾತ್ರ ಬರೆಯಲಾಗಿದೆ. ಇನ್ನು ಈ ಚಿತ್ರವನ್ನು ಅರ್ಜುನ್ ಸರ್ಜಾ ನಿರ್ದೇಶನ ಮಾಡುವುದರ ಜೊತೆಗೆ ನಿರ್ಮಾಣದ ಜವಾಬ್ದಾರಿಯನ್ನು ಕೂಡ ಹೊತ್ತುಕೊಂಡಿದ್ದಾರೆ.
ರಾಜೇಶ್ ಅಂತಿಮ ದರ್ಶನ, ಅಂತಿಮ ಸಂಸ್ಕಾರ ಇತರೆ ಮಾಹಿತಿ
ಅರ್ಜುನ್ ಸರ್ಜಾ ನಟನಾಗಿ ಮಾತ್ರವಲ್ಲದೆ. ನಿರ್ದೇಶಕನಾಗಿಯೂ ಉತ್ತಮ ಸಿನಿಮಾಗಳನ್ನು ಕೊಟ್ಟಿದ್ದಾರೆ. ಈಗ ಮಗಳಿಗಾಗಿ ಮತ್ತೊಂದು ಸಿನಿಮಾ ಮಾಡಲು ಮುಂದಾಗಾಗಿದ್ದಾರೆ. ಹಾಗಂತಾ ಮಗಳಿಗೆ ಅರ್ಜುನ್ ಸರ್ಜಾ ನಿರ್ದೇಶನ ಮಾಡುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಕನ್ನಡದಲ್ಲಿ ಬಂದ 'ಪ್ರೇಮ ಬರಹ' ಸಿನಿಮಾವನ್ನು ಅವರೇ ನಿರ್ದೇಶನ ಮಾಡಿದ್ದರು.
ಕನ್ನಡದಲ್ಲಿ ಐಶ್ವರ್ಯಾ ಅಭಿನಯದ ಮೊದಲ ಸಿನಿಮಾ ''ಪ್ರೇಮ ಬರಹ'. ಆದರೆ ಈ ಚಿತ್ರಕ್ಕೂ ಮುನ್ನ ತಮಿಳಿನಲ್ಲಿ 'ಪಟ್ಟತ್ತು ಯಾನೈ' ಚಿತ್ರದಲ್ಲಿ ನಟಿಸಿದ್ದಾರೆ. ಈ ಬಾರಿ ಐಶ್ವರ್ಯಾ ತೆಲುಗಿನಲ್ಲಿ ಲಾಂಚ್ ಆಗುತ್ತಿದ್ದಾರೆ. ತಮಿಳು ಮತ್ತು ಕನ್ನಡದಲ್ಲಿ ಐಶ್ವರ್ಯಾಗೆ ಅಂತಹ ದೊಡ್ಡ ಯಶಸ್ಸು ಸಿಕ್ಕಿಲ್ಲ. ಹಾಗಾಗಿ ತೆಲುಗಿನತ್ತ ಮುಖ ಮಾಡಿದಂತಿದೆ.
Kannada Actor Rajesh Death : ಹಿರಿಯ ನಟ ಕಲಾ ತಪಸ್ವಿ 'ರಾಜೇಶ್' ನಿಧನ!
ಕನ್ನಡ ಮತ್ತು ತಮಿಳಿನಲ್ಲು ಐಶ್ವರ್ಯ ಕೇವಲ ಒಂದೊಂದು ಸಿನಿಮಾಗಳನ್ನು ಮಾತ್ರ ಮಾಡಿದ್ದಾರೆ. ಬಳಿಕ ಯಾವುದೇ ಚಿತ್ರಗಳಲ್ಲೂ ಕಾಣಿಸಿಕೊಂಡಿಲ್ಲ. ಈಗ ತೆಲುಗಿನಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಸದ್ಯದಲ್ಲೇ ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ನೀಡಲಿದೆ ಚಿತ್ರತಂಡ.