Don't Miss!
- News Lok Sabha Election 2024 Phase 1 Polling LIVE: ಲೋಕಸಭಾ ಚುನಾವಣೆ 2024ರ ಮೊದಲ ಹಂತದ ಮತದಾನ!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೊಲೆ ಮಾಡಲು ಯತ್ನ: 'ಅರ್ಜುನ್ ರೆಡ್ಡಿ' ನಟಿಯಿಂದ ದೂರು ದಾಖಲು
ತೆಲುಗಿನ ಸೂಪರ್ ಹಿಟ್ 'ಅರ್ಜುನ್ ರೆಡ್ಡಿ' ಸಿನಿಮಾದಲ್ಲಿ ನಟಿಸಿದ್ದ ನಟಿಗೆ ಅಪಘಾತವಾಗಿದೆ. ಆದರೆ ಇದು ಅಪಘಾತವಲ್ಲ ನನ್ನನ್ನು ಕೊಲ್ಲಲು ಮಾಡಿದ ಯತ್ನ ಎಂದು ಆಕೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.
'ಅರ್ಜುನ್ ರೆಡ್ಡಿ' ಸಿನಿಮಾದ ಆರಂಭದ ದೃಶ್ಯದಲ್ಲಿ ನಟ ವಿಜಯ್ ದೇವರಕೊಂಡ ಒಬ್ಬ ಯುವತಿಯ ಮನೆಗೆ ಹೋಗಿ ಆಕೆಗೆ ಕತ್ತಿ ತೋರಿಸಿ ಬೆದರಿಸಿ ನಂತರ ಯುವತಿಯ ಬಾಯ್ಫ್ರೆಂಡ್ ಬಂದನೆಂದು ಬರಿಮೈಯಲ್ಲಿ ಹೊರಗೆ ಬರುವ ದೃಶ್ಯವೊಂದಿದೆ. ಆ ದೃಶ್ಯದಲ್ಲಿ ನಟಿಸಿರುವ ಯುವತಿ ಸಾಯಿ ಸುಧಾ ರೆಡ್ಡಿ ಕಾರು ವಿಜಯವಾಡದಲ್ಲಿ ಅಪಘಾತಕ್ಕೆ ಈಡಾಗಿದೆ.
ಸಾಯಿ ಸುಧಾ ರೆಡ್ಡಿ ಕಾರು ವಿಜಯವಾಡದ ಫ್ಲೈಓವರ್ ಬಳಿ ಅಪಘಾತಕ್ಕೆ ಈಡಾಗಿದ್ದು, ನಟಿಗೆ ಯಾವುದೇ ತೊಂದರೆ ಆಗಿಲ್ಲ. ಆದರೆ ಈ ಘಟನೆ ಅಪಘಾತವಲ್ಲ, ನನ್ನನ್ನು ಕೊಲ್ಲಲು ಮಾಡಿರುವ ಯತ್ನ ಎಂದು ಆ ನಟಿಯು ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.
'ನಟಿ ಸಾಯಿ ಸುಧಾ ರೆಡ್ಡಿ ಹಾಗೂ ಕ್ಯಾಮೆರಾಮನ್ ಶ್ಯಾಮ್ ಕೆ ನಾಯ್ಡು ನಡುವೆ ಕೆಲವು ವರ್ಷಗಳಿಂದ ವಿವಾದ ನಡೆಯುತ್ತಲೇ ಇದೆ. ಶ್ಯಾಮ್ ಕೆ ನಾಯ್ಡು, ನನ್ನನ್ನು ಮದುವೆ ಆಗುತ್ತೀನೆಂದು ಹೇಳಿ ಮೋಸ ಮಾಡಿದ್ದಾನೆ ಎಂದು ನಟಿ ಸುಧಾ ರೆಡ್ಡಿ ದೂರು ದಾಖಲಿಸಿದ್ದರು. ಈಗ ಅದೇ ಶ್ಯಾಮ್ ನಾಯ್ಡು, ನನ್ನನ್ನು ಕೊಲ್ಲಲು ಯತ್ನಿಸಿದ್ದಾನೆ' ಎಂದು ಆರೋಪಿಸಿದ್ದಾರೆ ಸುಧಾ ರೆಡ್ಡಿ. ಪೊಲೀಸರು ತನಿಖೆ ಆರಂಭಿಸಿದ್ದಾರೆ.
Recommended Video
2014 ರಿಂದಲೂ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಸುಧಾ ರೆಡ್ಡಿಗೆ ಈ ವರೆಗೆ ಸೂಕ್ತ ಹಿಟ್ ದೊರೆತಿಲ್ಲ. ಸಾಕಷ್ಟು ಕಿರು ಚಿತ್ರ, ಜಾಹೀರಾತುಗಳಲ್ಲಿ ಕಾಣಿಸಿಕೊಂಡಿರುವ ಸುಧಾ ರೆಡ್ಡಿ, ಅರ್ಜುನ್ ರೆಡ್ಡಿ, ಅಆ, ಸೇರಿದಂತೆ ಹಲವು ಸಿನಿಮಾಗಳಲ್ಲಿ ಪೋಷಕ ಪಾತ್ರದಲ್ಲಿ ನಟಿಸಿದ್ದಾರೆ.