Don't Miss!
- News Neha Murder Case: ವೈಯಕ್ತಿಕ ಕಾರಣಕ್ಕೆ ವಿದ್ಯಾರ್ಥಿನಿ ನೇಹಾ ಕೊಲೆ ಎಂದ ಸಿಎಂ ಸಿದ್ದರಾಮಯ್ಯ
- Automobiles ರಾಜ್ಯದ ಕೈಜಾರಿ ತಮಿಳುನಾಡು ಸೇರಿದ 9000 ಕೋಟಿಯ ಪ್ರಾಜೆಕ್ಟ್: JLR ಇವಿ ಹಬ್ಗೆ ಸಿದ್ದವಾದ ನೆರೆ-ರಾಜ್ಯ!
- Finance ಇಳಿಕೆ ಕಂಡ ನೆಸ್ಲೆ ಇಂಡಿಯಾ ಷೇರು: ಸೆರೆಲಾಕ್ನಲ್ಲಿ ಸಕ್ಕರೆ ಬಗ್ಗೆ ಸಂಸ್ಥೆಯ ಸ್ಪಷ್ಟನೆ ಏನು?
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- Sports IPL 2024: ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದರೂ ಹಾರ್ದಿಕ್ ಪಾಂಡ್ಯಗೆ ಭಾರೀ ಮೊತ್ತದ ದಂಡ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪವನ್ ಕಲ್ಯಾಣ್ ಅಭಿಮಾನಿ, ನಿರ್ಮಾಪಕ ಬಂಡ್ಲಾ ಗಣೇಶ್ ಐಸಿಯುಗೆ ದಾಖಲು
ತೆಲುಗು ನಿರ್ಮಾಪಕ, ನಟ ಬಂಡ್ಲಾ ಗಣೇಶ್ ಅವರಿಗೆ ಎರಡನೇ ಬಾರಿ ಕೊರೊನಾ ಸೋಂಕು ತಗುಲಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಹೈದರಾಬಾದ್ನ ಜ್ಯೂಬ್ಲಿ ಹಿಲ್ಸ್ನ ಅಪೋಲೋ ಆಸ್ಪತ್ರೆಗೆ ಬಂಡ್ಲಾ ಗಣೇಶ್ ದಾಖಲಾಗಿದ್ದಾರೆ.
ಕಳೆದ ಜೂನ್ ತಿಂಗಳಲ್ಲಿ ಬಂಡ್ಲಾ ಗಣೇಶ್ ಅವರಿಗೆ ಮೊದಲ ಕೋವಿಡ್ ಸೋಂಕು ತಗುಲಿತ್ತು. ನಂತರ ಚೇತರಿಸಿಕೊಂಡಿದ್ದರು. ಇದೀಗ, ಮತ್ತೆ ಕೊರೊನಾ ಎರಡನೇ ಅಲೆ ಪರಿಣಾಮ ಬಂಡ್ಲಾ ಗಣೇಶ್ ಅವರು ಮತ್ತೆ ಸೋಂಕಿಗೆ ತುತ್ತಾಗಿದ್ದಾರೆ.
'ವಕೀಲ್ ಸಾಬ್'ಗೆ ಸಮಸ್ಯೆ: ಸಿಎಂ ಜಗನ್ ವಿರುದ್ಧ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಗರಂ
ಇತ್ತೀಚಿಗಷ್ಟೆ ಬಂಡ್ಲಾ ಗಣೇಶ್ ಕೋವಿಡ್ ಲಸಿಕೆ ಪಡೆದುಕೊಂಡಿದ್ದರು. ಲಸಿಕೆ ಪಡೆದ ನಂತರ ಕೊರೊನಾ ಪಾಸಿಟಿವ್ ಬಂದಿದೆ ಎಂದು ವರದಿಯಾಗಿದೆ. ದೇಶದಲ್ಲಿ ಕೋವಿಡ್ ಲಸಿಕೆ ಪಡೆದ ನಂತರ ಹಲವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ನಂತರ ಚೇತರಿಸಿಕೊಂಡಿದ್ದಾರೆ.
ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಂಡ್ಲಾ ಗಣೇಶ್ ಅವರ ಆರೋಗ್ಯದ ಮೇಲೆ ತಜ್ಞರು ನಿಗಾ ವಹಿಸಿದ್ದಾರೆ. ಬಂಡ್ಲಾ ಅವರಿಗೆ ಎರಡನೇ ಸಲ ಕೋವಿಡ್ ಬಂದುದರಿಂದ ಸಹಜವಾಗಿ ಕುಟುಂಬದವರು ಆತಂಕಕ್ಕೀಡಾಗಿದ್ದಾರೆ.
ಪವನ್ ಕಲ್ಯಾಣ್ ಅವರ ಅಪ್ಪಟ ಅಭಿಮಾನಿಯಾಗಿರುವ ಬಂಡ್ಲಾ ಗಣೇಶ್ ಇತ್ತೀಚಿಗೆ 'ವಕೀಲ್ ಸಾಬ್' ಚಿತ್ರದ ಪ್ರಿ-ರಿಲೀಸ್ ಕಾರ್ಯಕ್ರಮದಲ್ಲಿ ಅದ್ಭುತವಾದ ಭಾಷಣದ ಮೂಲಕ ಗಮನ ಸೆಳೆದಿದ್ದರು.
Recommended Video
ಇನ್ನು ಬಂಡ್ಲಾ ಗಣೇಶ್ ಅವರ ಬಗ್ಗೆ ಹೇಳುವುದಾದರೇ, ಆಂಜನೇಯಲು, ತೀನ್ಮಾರ್, ಗಬ್ಬರ್ ಸಿಂಗ್, ಬಾದ್ಶಾ, ಇದ್ದರಮ್ಮಾಯಿಲತೋ, ಟೆಂಪರ್ ಸೇರಿದಂತೆ ಹಲವು ಹಿಟ್ ಚಿತ್ರಗಳನ್ನು ನಿರ್ಮಿಸಿದ್ದಾರೆ.