twitter
    For Quick Alerts
    ALLOW NOTIFICATIONS  
    For Daily Alerts

    ಸಾಯಿ ಪಲ್ಲವಿಯನ್ನು ಬಂಧಿಸಿ: ಬಿಜೆಪಿ ಶಾಸಕ ರಾಜಾ ಸಿಂಗ್ ಒತ್ತಾಯ

    |

    ನಟಿ ಸಾಯಿ ಪಲ್ಲವಿ ತಾವು ನೀಡಿದ ಹೇಳಿಕೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ನಟಿಯನ್ನು ಬಂಧಿಸುವಂತೆ ಬಿಜೆಪಿ ಶಾಸಕ ರಾಜಾ ಸಿಂಗ್ ಒತ್ತಾಯಿಸಿದ್ದಾರೆ.

    ಆಗಿದ್ದಿಷ್ಟು, 'ವಿರಾಟ ಪರ್ವಂ' ಸಿನಿಮಾದ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಾಯಿ ಪಲ್ಲವಿ, ನಕ್ಸಲ್ ವಾದದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸುತ್ತಾ, ''ಪಾಕಿಸ್ತಾನದ ಸೈನಿಕರು, ನಮ್ಮ ದೇಶದ ಸೈನಿಕರನ್ನು ಶತ್ರುಗಳೆಂದು, ಭಯೋತ್ಪಾದಕರೆಂದು ಭಾವಿಸುತ್ತಾರೆ. ಏಕೆಂದರೆ ನಾವು ಈ ಕಡೆ ಇದ್ದೇವೆ, ನಮ್ಮ ಸೈನಿಕರು ಪಾಕಿಸ್ತಾನದ ಸೈನಿಕರನ್ನು ಭಯೋತ್ಪಾದಕರು, ವೈರಿಗಳು ಎಂದುಕೊಳ್ಳುತ್ತಾರೆ. ಹೀಗೆ ದೃಷ್ಟಿಕೋನಗಳು ಒಂದೊಂದು ಸಂದರ್ಭದಲ್ಲಿ ಒಂದೊಂದು ರೀತಿ ಬದಲಾಗಿಬಿಡುತ್ತವೆ'' ಎಂದಿದ್ದರು.

    ಅದೇ ಸಂದರ್ಶನದಲ್ಲಿ ಮಾತನಾಡುತ್ತಾ, ''ಕೆಲವು ದಿನಗಳ ಮುಂದೆ 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ ಬಂತು ಅದರಲ್ಲಿ ಕಾಶ್ಮೀರಿ ಪಂಡಿತರ ಮೇಲೆ ಹೇಗೆ ಹಿಂಸೆ ಮಾಡಲಾಯಿತು ಎಂದು ಅವರು ತೋರಿಸಿದ್ದಾರೆ. ಹಾಗೆ ಕಳೆದ ವರ್ಷವೇ ಇರಬೇಕು ಕೋವಿಡ್ ಸಮಯದಲ್ಲಿ ವ್ಯಕ್ತಿಯೊಬ್ಬ ಗಾಡಿಯಲ್ಲಿ ಹಸು ತೆಗೆದುಕೊಂಡು ಹೋಗುತ್ತಿದ್ದ. ಡ್ರೈವ್ ಮಾಡುತ್ತಿದ್ದ ವ್ಯಕ್ತಿ ಮುಸ್ಲಿಂ ಆಗಿದ್ದ ಎಂಬ ಕಾರಣಕ್ಕೆ ಅವನ ಮೇಲೆ ಹಲ್ಲೆ ಮಾಡಲಾಯಿತು. ಜೈ ಶ್ರೀರಾಮ್ ಘೋಷಣೆ ಕೂಗಲಾಯಿತು. ಇದನ್ನು ನೋಡಿದಾಗ ಆಗ ಕಾಶ್ಮೀರದಲ್ಲಿ ನಡೆದಿದ್ದಕ್ಕೂ ಈಗ ನಡೆದಿದ್ದಕ್ಕೂ ವ್ಯತ್ಯಾಸ ಕಾಣಿಸುತ್ತಿಲ್ಲ'' ಎಂದಿದ್ದರು. ಸಾಯಿ ಪಲ್ಲವಿಯ ಈ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

    ಬಂಧನಕ್ಕೆ ಒತ್ತಾಯಿಸಿರುವ ಶಾಸಕ ರಾಜಾ ಸಿಂಗ್

    ಬಂಧನಕ್ಕೆ ಒತ್ತಾಯಿಸಿರುವ ಶಾಸಕ ರಾಜಾ ಸಿಂಗ್

    ಸಾಯಿ ಪಲ್ಲವಿಯವರ ಈ ಹೇಳಿಕೆ ಈಗ ವಿವಾದಕ್ಕೆ ಕಾರಣವಾಗಿದ್ದು, ಸಾಯಿ ಪಲ್ಲವಿ ಹೇಳಿಕೆಯನ್ನು ಹಲವರು ಖಂಡಿಸಿದ್ದಾರೆ. ಹಾಗೂ ಹಲವರು ಸಾಯಿ ಪಲ್ಲವಿಗೆ ಬೆಂಬಲ ಸಹ ನೀಡಿದ್ದಾರೆ. ತಮ್ಮ ದ್ವೇಷ ಕಾರುವ ಹೇಳಿಕೆಗಳಿಂದಲೇ ಖ್ಯಾತರಾಗಿರುವ ಬಿಜೆಪಿ ಶಾಸಕ ರಾಜಾ ಸಿಂಗ್, ಈ ಬಗ್ಗೆ ವಿಡಿಯೋ ಒಂದನ್ನು ಪ್ರಕಟಿಸಿದ್ದು, ಸಾಯಿ ಪಲ್ಲವಿಯನ್ನು ಬಂಧಿಸಬೇಕು ಎಂದಿದ್ದಾರೆ.

    ''ಕಾಶ್ಮೀರಿ ಪಂಡಿತರ ನಿರಾಶ್ರಿತರ ಕ್ಯಾಂಪ್‌ಗೆ ಭೇಟಿ ನೀಡಲಿ''

    ''ಕಾಶ್ಮೀರಿ ಪಂಡಿತರ ನಿರಾಶ್ರಿತರ ಕ್ಯಾಂಪ್‌ಗೆ ಭೇಟಿ ನೀಡಲಿ''

    ''ಆಕೆ ಮೊದಲು ಕಾಶ್ಮೀರಿ ಪಂಡಿತರ ನಿರಾಶ್ರಿತರ ಕ್ಯಾಂಪ್‌ಗೆ ಭೇಟಿ ನೀಡಿ, ಅಲ್ಲಿನ ಪರಿಸ್ಥಿತಿ ತಿಳಿದುಕೊಳ್ಳಬೇಕು. ಅವರೊಟ್ಟಿಗೆ ಮಾತನಾಡಿ, ಹೇಗೆ ಅವರು ಮಕ್ಕಳನ್ನು ಕೊಂದರು, ಮಹಿಳೆಯರ ಮೇಲೆ ಅತ್ಯಾಚಾರ ಮಾಡಿದರು, ದನಗಳನ್ನು ಕಡಿದಂತೆ ಪಂಡಿತರನ್ನು ಕಡಿದರು ಎಂದು ತಿಳಿದುಕೊಳ್ಳಬೇಕು'' ಎಂದಿದ್ದಾರೆ ರಾಜಾ ಸಿಂಗ್.

    ''ಎಲ್ಲ ಪೊಲೀಸ್ ಠಾಣೆಯಲ್ಲಿ ಸಾಯಿ ಪಲ್ಲವಿ ವಿರುದ್ಧ ದೂರು ನೀಡಿ''

    ''ಎಲ್ಲ ಪೊಲೀಸ್ ಠಾಣೆಯಲ್ಲಿ ಸಾಯಿ ಪಲ್ಲವಿ ವಿರುದ್ಧ ದೂರು ನೀಡಿ''

    ಅಲ್ಲದೆ, ''ಸಾಯಿ ಪಲ್ಲವಿ ವಿರುದ್ಧ ದೂರು ನೀಡಬೇಕು, ಕೇವಲ ಒಂದು ಪೊಲೀಸ್ ಠಾಣೆಯಲ್ಲಿ ಅಲ್ಲ ರಾಜ್ಯದಾದ್ಯಂತ ಪೊಲೀಸ್ ಠಾಣೆಗಳಲ್ಲಿ ಸಾಯಿ ಪಲ್ಲವಿ ವಿರುದ್ಧ ದೂರು ದಾಖಲಾಗಬೇಕು. ಒಬ್ಬ ನಟ ಅಥವಾ ನಟಿಯ ಬಂಧನವಾದರೆ ಇತರ ಸೆಲೆಬ್ರಿಟಿಗಳಿಗೆ ಭಯ ಮೂಡುತ್ತದೆ. ಆಗ ಅವರು ನಮ್ಮ ಧರ್ಮವನ್ನನು ಹಿಯಾಳಿಸುವ ಕಾರ್ಯಕ್ಕೆ ಕೈ ಹಾಕುವುದಿಲ್ಲ'' ಎಂದಿದ್ದಾರೆ ರಾಜಾ ಸಿಂಗ್.

    ''ಇಸ್ಲಾಂ ವಿರುದ್ಧ ಮಾತನಾಡಲು ಈ ಸೆಲೆಬ್ರಿಟಿಗಳಿಗೆ ತಾಕತ್ ಇಲ್ಲ''

    ''ಇಸ್ಲಾಂ ವಿರುದ್ಧ ಮಾತನಾಡಲು ಈ ಸೆಲೆಬ್ರಿಟಿಗಳಿಗೆ ತಾಕತ್ ಇಲ್ಲ''

    ''ಕ್ರಿಶ್ಚಿಯಾನಿಟಿ ಅಥವಾ ಇಸ್ಲಾಂ ವಿರುದ್ಧ ಮಾತನಾಡಲು ಈ ಸೆಲೆಬ್ರಿಟಿಗಳಿಗೆ ತಾಕತ್ ಇಲ್ಲ. ಆದರೆ ಹಿಂದು ಧರ್ಮದ ಅವಹೇಳನ ಮಾಡುತ್ತಾರೆ. ಈಗಿನ ಹಿಂದುಗಳು ಶಿವಾಜಿಯಂತಾಗಿದ್ದಾರೆ. ಅವರು ಸುಮ್ಮನೆ ಇರರು'' ಎಂದಿದ್ದಾರೆ ರಾಜಾ ಸಿಂಗ್. ತೆಲಂಗಾಣದ ಗೋಶಮಹಲ್ ಕ್ಷೇತ್ರದ ಶಾಸಕರಾಗಿರುವ ರಾಜಾ ಸಿಂಗ್ ತಮ್ಮ ವಿವಾದಾತ್ಮಕ ಹೇಳಿಕೆಗಳಿಂದ ಕುಖ್ಯಾತರು. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಕೆಲವು ಪ್ರಕರಣಗಳು ಅವರ ಮೇಲಿವೆ.

    English summary
    BJP MLA Raja Singh demand for arrest of actress Sai Pallavi. He said FIR should register on Sai Pallavi in all police station of the state.
    Saturday, June 18, 2022, 16:55
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X