Don't Miss!
- News ಈ ವರ್ಷ ಜಗತ್ತಿನಲ್ಲಿ ಒಳ್ಳೆಯದಕ್ಕಿಂತ ಕೆಟ್ಟದ್ದೇ ಕೇಳೋದು ಬಹಳ ಐತಿ; ಮಳೆ,ಬೆಳೆಯ ಕುರಿತು ಬಸವೇಶ್ವರ ಕಾರ್ಣಿಕ ಹೇಳಿದ್ದೇನು?
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಾಯಿ ಪಲ್ಲವಿಯನ್ನು ಬಂಧಿಸಿ: ಬಿಜೆಪಿ ಶಾಸಕ ರಾಜಾ ಸಿಂಗ್ ಒತ್ತಾಯ
ನಟಿ ಸಾಯಿ ಪಲ್ಲವಿ ತಾವು ನೀಡಿದ ಹೇಳಿಕೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ನಟಿಯನ್ನು ಬಂಧಿಸುವಂತೆ ಬಿಜೆಪಿ ಶಾಸಕ ರಾಜಾ ಸಿಂಗ್ ಒತ್ತಾಯಿಸಿದ್ದಾರೆ.
ಆಗಿದ್ದಿಷ್ಟು, 'ವಿರಾಟ ಪರ್ವಂ' ಸಿನಿಮಾದ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಾಯಿ ಪಲ್ಲವಿ, ನಕ್ಸಲ್ ವಾದದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸುತ್ತಾ, ''ಪಾಕಿಸ್ತಾನದ ಸೈನಿಕರು, ನಮ್ಮ ದೇಶದ ಸೈನಿಕರನ್ನು ಶತ್ರುಗಳೆಂದು, ಭಯೋತ್ಪಾದಕರೆಂದು ಭಾವಿಸುತ್ತಾರೆ. ಏಕೆಂದರೆ ನಾವು ಈ ಕಡೆ ಇದ್ದೇವೆ, ನಮ್ಮ ಸೈನಿಕರು ಪಾಕಿಸ್ತಾನದ ಸೈನಿಕರನ್ನು ಭಯೋತ್ಪಾದಕರು, ವೈರಿಗಳು ಎಂದುಕೊಳ್ಳುತ್ತಾರೆ. ಹೀಗೆ ದೃಷ್ಟಿಕೋನಗಳು ಒಂದೊಂದು ಸಂದರ್ಭದಲ್ಲಿ ಒಂದೊಂದು ರೀತಿ ಬದಲಾಗಿಬಿಡುತ್ತವೆ'' ಎಂದಿದ್ದರು.
ಅದೇ ಸಂದರ್ಶನದಲ್ಲಿ ಮಾತನಾಡುತ್ತಾ, ''ಕೆಲವು ದಿನಗಳ ಮುಂದೆ 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ ಬಂತು ಅದರಲ್ಲಿ ಕಾಶ್ಮೀರಿ ಪಂಡಿತರ ಮೇಲೆ ಹೇಗೆ ಹಿಂಸೆ ಮಾಡಲಾಯಿತು ಎಂದು ಅವರು ತೋರಿಸಿದ್ದಾರೆ. ಹಾಗೆ ಕಳೆದ ವರ್ಷವೇ ಇರಬೇಕು ಕೋವಿಡ್ ಸಮಯದಲ್ಲಿ ವ್ಯಕ್ತಿಯೊಬ್ಬ ಗಾಡಿಯಲ್ಲಿ ಹಸು ತೆಗೆದುಕೊಂಡು ಹೋಗುತ್ತಿದ್ದ. ಡ್ರೈವ್ ಮಾಡುತ್ತಿದ್ದ ವ್ಯಕ್ತಿ ಮುಸ್ಲಿಂ ಆಗಿದ್ದ ಎಂಬ ಕಾರಣಕ್ಕೆ ಅವನ ಮೇಲೆ ಹಲ್ಲೆ ಮಾಡಲಾಯಿತು. ಜೈ ಶ್ರೀರಾಮ್ ಘೋಷಣೆ ಕೂಗಲಾಯಿತು. ಇದನ್ನು ನೋಡಿದಾಗ ಆಗ ಕಾಶ್ಮೀರದಲ್ಲಿ ನಡೆದಿದ್ದಕ್ಕೂ ಈಗ ನಡೆದಿದ್ದಕ್ಕೂ ವ್ಯತ್ಯಾಸ ಕಾಣಿಸುತ್ತಿಲ್ಲ'' ಎಂದಿದ್ದರು. ಸಾಯಿ ಪಲ್ಲವಿಯ ಈ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಬಂಧನಕ್ಕೆ ಒತ್ತಾಯಿಸಿರುವ ಶಾಸಕ ರಾಜಾ ಸಿಂಗ್
ಸಾಯಿ ಪಲ್ಲವಿಯವರ ಈ ಹೇಳಿಕೆ ಈಗ ವಿವಾದಕ್ಕೆ ಕಾರಣವಾಗಿದ್ದು, ಸಾಯಿ ಪಲ್ಲವಿ ಹೇಳಿಕೆಯನ್ನು ಹಲವರು ಖಂಡಿಸಿದ್ದಾರೆ. ಹಾಗೂ ಹಲವರು ಸಾಯಿ ಪಲ್ಲವಿಗೆ ಬೆಂಬಲ ಸಹ ನೀಡಿದ್ದಾರೆ. ತಮ್ಮ ದ್ವೇಷ ಕಾರುವ ಹೇಳಿಕೆಗಳಿಂದಲೇ ಖ್ಯಾತರಾಗಿರುವ ಬಿಜೆಪಿ ಶಾಸಕ ರಾಜಾ ಸಿಂಗ್, ಈ ಬಗ್ಗೆ ವಿಡಿಯೋ ಒಂದನ್ನು ಪ್ರಕಟಿಸಿದ್ದು, ಸಾಯಿ ಪಲ್ಲವಿಯನ್ನು ಬಂಧಿಸಬೇಕು ಎಂದಿದ್ದಾರೆ.
''ಕಾಶ್ಮೀರಿ ಪಂಡಿತರ ನಿರಾಶ್ರಿತರ ಕ್ಯಾಂಪ್ಗೆ ಭೇಟಿ ನೀಡಲಿ''
''ಆಕೆ ಮೊದಲು ಕಾಶ್ಮೀರಿ ಪಂಡಿತರ ನಿರಾಶ್ರಿತರ ಕ್ಯಾಂಪ್ಗೆ ಭೇಟಿ ನೀಡಿ, ಅಲ್ಲಿನ ಪರಿಸ್ಥಿತಿ ತಿಳಿದುಕೊಳ್ಳಬೇಕು. ಅವರೊಟ್ಟಿಗೆ ಮಾತನಾಡಿ, ಹೇಗೆ ಅವರು ಮಕ್ಕಳನ್ನು ಕೊಂದರು, ಮಹಿಳೆಯರ ಮೇಲೆ ಅತ್ಯಾಚಾರ ಮಾಡಿದರು, ದನಗಳನ್ನು ಕಡಿದಂತೆ ಪಂಡಿತರನ್ನು ಕಡಿದರು ಎಂದು ತಿಳಿದುಕೊಳ್ಳಬೇಕು'' ಎಂದಿದ್ದಾರೆ ರಾಜಾ ಸಿಂಗ್.
''ಎಲ್ಲ ಪೊಲೀಸ್ ಠಾಣೆಯಲ್ಲಿ ಸಾಯಿ ಪಲ್ಲವಿ ವಿರುದ್ಧ ದೂರು ನೀಡಿ''
ಅಲ್ಲದೆ, ''ಸಾಯಿ ಪಲ್ಲವಿ ವಿರುದ್ಧ ದೂರು ನೀಡಬೇಕು, ಕೇವಲ ಒಂದು ಪೊಲೀಸ್ ಠಾಣೆಯಲ್ಲಿ ಅಲ್ಲ ರಾಜ್ಯದಾದ್ಯಂತ ಪೊಲೀಸ್ ಠಾಣೆಗಳಲ್ಲಿ ಸಾಯಿ ಪಲ್ಲವಿ ವಿರುದ್ಧ ದೂರು ದಾಖಲಾಗಬೇಕು. ಒಬ್ಬ ನಟ ಅಥವಾ ನಟಿಯ ಬಂಧನವಾದರೆ ಇತರ ಸೆಲೆಬ್ರಿಟಿಗಳಿಗೆ ಭಯ ಮೂಡುತ್ತದೆ. ಆಗ ಅವರು ನಮ್ಮ ಧರ್ಮವನ್ನನು ಹಿಯಾಳಿಸುವ ಕಾರ್ಯಕ್ಕೆ ಕೈ ಹಾಕುವುದಿಲ್ಲ'' ಎಂದಿದ್ದಾರೆ ರಾಜಾ ಸಿಂಗ್.
''ಇಸ್ಲಾಂ ವಿರುದ್ಧ ಮಾತನಾಡಲು ಈ ಸೆಲೆಬ್ರಿಟಿಗಳಿಗೆ ತಾಕತ್ ಇಲ್ಲ''
''ಕ್ರಿಶ್ಚಿಯಾನಿಟಿ ಅಥವಾ ಇಸ್ಲಾಂ ವಿರುದ್ಧ ಮಾತನಾಡಲು ಈ ಸೆಲೆಬ್ರಿಟಿಗಳಿಗೆ ತಾಕತ್ ಇಲ್ಲ. ಆದರೆ ಹಿಂದು ಧರ್ಮದ ಅವಹೇಳನ ಮಾಡುತ್ತಾರೆ. ಈಗಿನ ಹಿಂದುಗಳು ಶಿವಾಜಿಯಂತಾಗಿದ್ದಾರೆ. ಅವರು ಸುಮ್ಮನೆ ಇರರು'' ಎಂದಿದ್ದಾರೆ ರಾಜಾ ಸಿಂಗ್. ತೆಲಂಗಾಣದ ಗೋಶಮಹಲ್ ಕ್ಷೇತ್ರದ ಶಾಸಕರಾಗಿರುವ ರಾಜಾ ಸಿಂಗ್ ತಮ್ಮ ವಿವಾದಾತ್ಮಕ ಹೇಳಿಕೆಗಳಿಂದ ಕುಖ್ಯಾತರು. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಕೆಲವು ಪ್ರಕರಣಗಳು ಅವರ ಮೇಲಿವೆ.