Don't Miss!
- News Hubballi: ರಾಜ್ಯ ಸರ್ಕಾರದ ವಿರುದ್ಧ ಭಾರೀ ಪ್ರತಿಭಟನೆ: ನೇಹಾ ನಿವಾಸಕ್ಕೆ ಶ್ರೀಗಳು, ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ: ಪೊಲೀಸ್ ಅಭಯ
- Technology ನಿಮ್ಮ ಬಳಿ ರೆಡ್ಮಿಯ ಈ ಫೋನ್ ಇದ್ರೆ, ಇಲ್ಲಿದೆ ನಿಮಗೆ ಗುಡ್ನ್ಯೂಸ್!
- Automobiles Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Sports LSG vs CSK IPL 2024: ಐಪಿಎಲ್ನಲ್ಲಿ ಇತಿಹಾಸ ಸೃಷ್ಟಿಸಿದ ಎಂಎಸ್ ಧೋನಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪ್ರಭಾಸ್ಗಾಗಿ ತೆಲುಗು ಕಲಿಯುತ್ತಿರುವ ಬಾಲಿವುಡ್ ನಟಿ ಕೃತಿ ಸನೂನ್
ಇತ್ತೀಚಿಗಷ್ಟೆ ಬಾಲಿವುಡ್ ಖ್ಯಾತ ನಟಿ ಅಲಿಯಾ ಭಟ್ ತೆಲುಗು ಕಲಿಯುತ್ತಿರುವ ಬಗ್ಗೆ ಕೇಳಿದ್ರಿ. ಆರ್ಆರ್ಆರ್ ಸಿನಿಮಾದಲ್ಲಿ ನಟಿಸುತ್ತಿರುವ ಅಲಿಯಾ ಈ ಚಿತ್ರಕ್ಕಾಗಿ ಅನೇಕ ತಿಂಗಳಿಂದ ತೆಲುಗು ಕಲಿತಿದ್ದಾರೆ. ಇದೀಗ ಮತ್ತೋರ್ವ ಬಾಲಿವುಡ್ ನಟಿ ತೆಲುಗು ಕಲಿಯುತ್ತಿದ್ದಾರೆ.
ಪ್ರಭಾಸ್ಗೆ ನಾಯಕಿಯಾಗಿ ನಟಿಸುತ್ತಿರುವ ಬಾಲಿವುಡ್ ಸುಂದರಿ ಕೃತಿ ಸನೂನ್ ಇದೀಗ ತೆಲುಗು ಕಲಿಯುತ್ತಿದ್ದಾರಂತೆ. ಅಂದ ಹಾಗೆ ಕೃತಿ ಪ್ರಭಾಸ್ ನಟನೆಯ ಆದಿಪುರುಷ್ ಸಿನಿಮಾದಲ್ಲಿ ಸೀತೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ವಿಶೇಷ ಪಾತ್ರದಲ್ಲಿ ನಟಿಸುತ್ತಿರುವ ಕೃತಿ ತನ್ನ ಪಾತ್ರಕ್ಕಾಗಿ ಸಖತ್ ತಯಾರಿ ನಡೆಸುತ್ತಿದ್ದಾರೆ.
ಸುಶಾಂತ್ ಸಾವಿನ ಕುರಿತು ಮೌನವಹಿಸಿದ್ದು ಏಕೆ ಎಂದು ಬಹಿರಂಗ ಪಡಿಸಿದ ಕೃತಿ ಸನೂನ್
ಕೃತಿಗೆ ತೆಲುಗು ಸಿನಿಮಾರಂಗ ಹೊಸದೇನು ಅಲ್ಲ. ಕೃತಿ ಬಣ್ಣದ ಲೋಕದ ಪಯಣ ಪ್ರಾರಂಭ ಮಾಡಿದ್ದೆ ತೆಲುಗು ಸಿನಿಮಾದಿಂದ. ಬಳಿಕ ಬಾಲಿವುಡ್ ಕಡೆ ಹೊರಟ ಕೃತಿ ಮತ್ತೆ ತಿರುಗಿ ನೋಡಿಲ್ಲ. ಉತ್ತರ ಭಾರತದ ಮೂಲದವರಾದ ಕೃತಿಗೆ ತೆಲುಗು ಬರಲ್ಲ. ಇದೀಗ ಅನೇಕ ವರ್ಷಗಳ ಬಳಿಕ ಮತ್ತೆ ಟಾಲಿವುಡ್ನಲ್ಲಿ ಕಾಣಿಸಿಕೊಳ್ಳುತ್ತಿರುವ ಕೃತಿ ತೆಲುಗು ಕಲಿತು ಬರಲು ಸಿದ್ಧರಾಗಿದ್ದಾರೆ.
ಆದಿಪುರುಷ್ಗಾಗಿ ತೆಲುಗು ಕಲಿಯುತ್ತಿರುವ ಕೃತಿ, ಭಾಷಾತಜ್ಞರನ್ನು ನೇಮಿಸಿಕೊಂಡಿದ್ದಾರಂತೆ. ಭಾಷಾತಜ್ಞರ ಸಹಾಯದೊಂದಿಗೆ ಚಿತ್ರೀಕರಣದಲ್ಲಿ ಕೃತಿ ತೆಲುಗು ಮಾತನಾಡಲು ಪ್ರಯತ್ನಿಸುತ್ತಿದ್ದಾರಂತೆ. ಅಂದಹಾಗೆ ಆದಿಪುರುಷ್ ತೆಲುಗು ಜೊತೆಗೆ ಹಿಂದಿಯಲ್ಲೂ ಏಕಕಾಲಕ್ಕೆ ಚಿತ್ರೀಕರಣ ನಡೆಯುತ್ತಿದೆ.
ಇನ್ನು ಕೇವಲ ಕೃತಿ ಮಾತ್ರವಲ್ಲದೆ ನಿರ್ದೇಶಕ ಓಂ ರಾವತ್ ಕೂಡ ತೆಲುಗು ಭಾಷಾತಜ್ಞರನ್ನು ನೇಮಿಸಿಕೊಂಡಿದ್ದಾರಂತೆ. ಸದ್ಯ ಮುಂಬೈನಲ್ಲಿ ಚಿತ್ರೀಕರಣ ನಡೆಯುತ್ತಿದ್ದು, ಬಹುತೇಕ ಚಿತ್ರೀಕರಣ ಗ್ರೀನ್ ಮ್ಯಾಟ್ನಲ್ಲೇ ಮಾಡಲು ಸಿನಿಮಾತಂಡ ಪ್ಲಾನ್ ಮಾಡಿದೆ.
Recommended Video
ಚಿತ್ರದಲ್ಲಿ ಪ್ರಭಾಸ್ ರಾಮನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸೀತೆಯಾಗಿ ಕೃತಿ ನಟಿಸಿದ್ದಾರೆ. ರಾವಣ ಪಾತ್ರದಲ್ಲಿ ಬಾಲಿವುಡ್ ಖ್ಯಾತ ನಟ ಸೈಫ್ ಅಲಿ ಖಾನ್ ಬಣ್ಣ ಹಚ್ಚುತ್ತಿದ್ದಾರೆ. ಚಿತ್ರೀಕರಣದ ಬಗ್ಗೆ ಮಾತನಾಡಿರುವ ಕೃತಿ, ಪ್ರಭಾಸ್ ಅವರ ಜೊತೆ ಶೂಟಿಂಗ್ ಎಂಜಾಯ್ ಮಾಡುತ್ತಿರುವುದಾಗಿ ಹೇಳಿದ್ದಾರೆ. ಅಲ್ಲದೆ, ಪ್ರಭಾಸ್ ಹೃದಯವಂತ ನಟ ಎಂದಿದ್ದಾರೆ.