Don't Miss!
- Automobiles Honda: ಭಾರತದಲ್ಲಿ ಹೋಂಡಾ ಹೊಸ ಮೈಲಿಗಲ್ಲು: ಎಷ್ಟು ಮಂದಿಯ ಬಳಿ ಆಕ್ಟೀವಾ, ಶೈನ್ ಇದೆ ಹೇಳಿ?
- Lifestyle ವಿಶ್ವದಲ್ಲೇ ಅತೀ ಹೆಚ್ಚು ಬಾರಿ ಚುನಾವಣೆ ಸೋತ ವ್ಯಕ್ತಿ..! ಯಾರು ಈ ಸೋಲುವ ಸರದಾರ ಗೊತ್ತಾ?
- News India Unemployment: ದೇಶದಲ್ಲಿ ಯುವ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಳ: ಬೆಚ್ಚಿಬೀಳಿಸುವ ವರದಿ ಬಹಿರಂಗ!
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Technology iPhones: ಬೇಕಿತ್ತಾ ಇದೆಲ್ಲ? ನಕಲಿ ಐಫೋನ್ ಮೂಲಕ ಆಪಲ್ಗೆ ಪಂಗನಾಮ ಹಾಕಿದವನಿಗೆ ಜೈಲೂಟ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸ್ಟಾರ್ ನಿರ್ದೇಶಕನ ಜೊತೆ 154ನೇ ಚಿತ್ರ ಘೋಷಿಸಿದ ಮೆಗಾಸ್ಟಾರ್ ಚಿರಂಜೀವಿ
ತೆಲುಗು ಮೆಗಾಸ್ಟಾರ್ ಚಿರಂಜೀವಿ ಸದ್ಯ ಆಚಾರ್ಯ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ರಾಮ್ ಚರಣ್ ನಿರ್ಮಾಣ ಮಾಡುತ್ತಿರುವ ಆಚಾರ್ಯ ಚಿತ್ರಕ್ಕೆ ಕೊರಟಲಾ ಶಿವ ನಿರ್ದೇಶನ ಮಾಡುತ್ತಿದ್ದಾರೆ. ಈಗಾಗಲೇ ಟೀಸರ್ ರಿಲೀಸ್ ಆಗಿದ್ದು, ಭರ್ಜರಿ ಎಂಟರ್ಟೈನ್ಮೆಂಟ್ ನೀಡಲಿದೆ ಎಂಬ ಸುಳಿವು ಸಿಕ್ಕಿದೆ.
ಆಚಾರ್ಯ ಮುಗಿಯುತ್ತಿದ್ದಂತೆ ಮಲಯಾಳಂ ಹಿಟ್ ಚಿತ್ರ ಲೂಸಿಫರ್ ರೀಮೇಕ್ನಲ್ಲಿ ಮೆಗಾಸ್ಟಾರ್ ಕೈಗೆತ್ತಿಕೊಳ್ಳಲಿದ್ದಾರೆ. ಈ ಚಿತ್ರವನ್ನು ಸಾಹೋ ಖ್ಯಾತಿಯ ಸುಜಿತ್ ನಿರ್ದೇಶಿಸಲಿದ್ದಾರೆ ಎಂದು ಹೇಳಲಾಯಿತು. ಬಳಿಕ, ಸುಜಿತ್ ಜಾಗಕ್ಕೆ ಮೋಹನ್ ರಾಜಾ ಎಂಟ್ರಿಯಾದರು.
ಮತ್ತೊಮ್ಮೆ ಚಿರಂಜೀವಿ ಚಿತ್ರದಲ್ಲಿ ನಟಿಸುತ್ತಾರಾ ಕನ್ನಡ ನಟ ಸುದೀಪ್?
ಈಗ ಚಿರು ನಟಿಸಲಿರುವ 154ನೇ ಚಿತ್ರ ಘೋಷಣೆಯಾಗಿದೆ. ಉಪ್ಪೇನಾ ಸಿನಿಮಾದ ಪ್ರಿ-ರಿಲೀಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಚಿರಂಜೀವಿ ತಮ್ಮ 154ನೇ ಚಿತ್ರವನ್ನು ಮೈತ್ರಿ ಮೂವಿ ಮೇಕರ್ಸ್ ಸಂಸ್ಥೆ ಜೊತೆ ಮಾಡಲಿದ್ದೇನೆ ಎಂದು ಪ್ರಕಟಿಸಿದ್ದಾರೆ.
ಈ ಚಿತ್ರಕ್ಕೆ ಕೆಎಸ್ ರವೀಂದ್ರ (ಬಾಬಿ) ಆಕ್ಷನ್ ಕಟ್ ಹೇಳಲಿದ್ದಾರೆ ಎಂದು ಚಿರು ಹೇಳಿದರು. ಪವರ್, ಸರ್ದಾರ್ ಗಬ್ಬರ್ ಸಿಂಗ್, ಜೈ ಲವಕುಶ, ವೆಂಕಿ ಮಾಮ ಅಂತಹ ಹಿಟ್ ಚಿತ್ರಗಳನ್ನು ನೀಡಿರುವ ಬಾಬಿ ಜೊತೆ ಚಿರು ಮುಂದಿನ ಸಿನಿಮಾ ಕೈಗೆತ್ತಿಕೊಳ್ಳುತ್ತಿರುವುದು ಮೆಗಾ ಅಭಿಮಾನಿಗಳಲ್ಲಿ ಥ್ರಿಲ್ ಹೆಚ್ಚಿಸಿದೆ.
'ದೇಶದ ನಂಬರ್ 1 ನಟ': ಚಿರಂಜೀವಿ ಹೊಗಳಿದ್ದು ಯಾವ ನಟನನ್ನು?
ಆಚಾರ್ಯ ಚಿತ್ರದ ವಿಚಾರಕ್ಕೆ ವಾಪಸ್ ಬರುವುದಾದರೆ ಮೇ 13, 2021ಕ್ಕೆ ಸಿನಿಮಾ ರಿಲೀಸ್ ಆಗಲಿದೆ ಎಂದು ಹೇಳಲಾಗಿದೆ. ಕಾಜಲ್ ಅಗರ್ವಾಲ್ ನಾಯಕಿಯಾಗಿ ನಟಿಸಿದ್ದು, ರಾಮ್ ಚರಣ್ ತೇಜ ಸಹ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
Recommended Video