Don't Miss!
- Lifestyle ಮದ್ಯದ ಅಮಲಲ್ಲಿ ತೇಲಾಡುತ್ತಿದ್ದ ಶಿಕ್ಷಕನಿಗೆ ಮಕ್ಕಳಿಂದಲೇ ಚಪ್ಪಲಿ ಏಟು..!
- Finance 2.3 ಲಕ್ಷ ರೂಪಾಯಿಗೆ 9 ನಿಂಬೆಹಣ್ಣು ಹರಾಜು, ಏನಿದರ ವಿಶೇಷತೆ ತಿಳಿಯಿರಿ
- News ಡಿಕೆ ಸುರೇಶ್ ನಿದ್ದೆಗೆಡಿಸಿದ ಡಾಕ್ಟರ್; ಕಾಂಗ್ರೆಸ್ ಅಭ್ಯರ್ಥಿ ನೂರಕ್ಕೆ ನೂರು ಈ ಬಾರಿಯೂ ಗೆಲ್ತಾರೆ: ಭವಿಷ್ಯ ನುಡಿದ ಸಿದ್ದರಾಮ
- Sports RR vs DC: ಐಪಿಎಲ್ನಲ್ಲಿ ಇತಿಹಾಸ ನಿರ್ಮಿಸಲು ಸಜ್ಜಾದ ರಿಷಭ್ ಪಂತ್
- Technology ಮತ್ತೊಂದು ಅಗ್ಗದ 5G ಫೋನ್ ಲಾಂಚ್ ಮಾಡಲು ಸಜ್ಜಾದ ರಿಯಲ್ಮಿ!..ಫೀಚರ್ಸ್ ಏನು?
- Automobiles ಬುಕ್ ಮಾಡಿದ ರೈಲಿನ ಸೀಟಿನಲ್ಲಿ ಬೇರೆಯವರು ಕೂತಿದ್ರೆ ಏನ್ ಮಾಡಬೇಕು ಗೊತ್ತಾ? ಸಿಂಪಲ್ ಪರಿಹಾರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸ್ಟಾರ್ ನಿರ್ದೇಶಕನ ಜೊತೆ 154ನೇ ಚಿತ್ರ ಘೋಷಿಸಿದ ಮೆಗಾಸ್ಟಾರ್ ಚಿರಂಜೀವಿ
ತೆಲುಗು ಮೆಗಾಸ್ಟಾರ್ ಚಿರಂಜೀವಿ ಸದ್ಯ ಆಚಾರ್ಯ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ರಾಮ್ ಚರಣ್ ನಿರ್ಮಾಣ ಮಾಡುತ್ತಿರುವ ಆಚಾರ್ಯ ಚಿತ್ರಕ್ಕೆ ಕೊರಟಲಾ ಶಿವ ನಿರ್ದೇಶನ ಮಾಡುತ್ತಿದ್ದಾರೆ. ಈಗಾಗಲೇ ಟೀಸರ್ ರಿಲೀಸ್ ಆಗಿದ್ದು, ಭರ್ಜರಿ ಎಂಟರ್ಟೈನ್ಮೆಂಟ್ ನೀಡಲಿದೆ ಎಂಬ ಸುಳಿವು ಸಿಕ್ಕಿದೆ.
ಆಚಾರ್ಯ ಮುಗಿಯುತ್ತಿದ್ದಂತೆ ಮಲಯಾಳಂ ಹಿಟ್ ಚಿತ್ರ ಲೂಸಿಫರ್ ರೀಮೇಕ್ನಲ್ಲಿ ಮೆಗಾಸ್ಟಾರ್ ಕೈಗೆತ್ತಿಕೊಳ್ಳಲಿದ್ದಾರೆ. ಈ ಚಿತ್ರವನ್ನು ಸಾಹೋ ಖ್ಯಾತಿಯ ಸುಜಿತ್ ನಿರ್ದೇಶಿಸಲಿದ್ದಾರೆ ಎಂದು ಹೇಳಲಾಯಿತು. ಬಳಿಕ, ಸುಜಿತ್ ಜಾಗಕ್ಕೆ ಮೋಹನ್ ರಾಜಾ ಎಂಟ್ರಿಯಾದರು.
ಮತ್ತೊಮ್ಮೆ ಚಿರಂಜೀವಿ ಚಿತ್ರದಲ್ಲಿ ನಟಿಸುತ್ತಾರಾ ಕನ್ನಡ ನಟ ಸುದೀಪ್?
ಈಗ ಚಿರು ನಟಿಸಲಿರುವ 154ನೇ ಚಿತ್ರ ಘೋಷಣೆಯಾಗಿದೆ. ಉಪ್ಪೇನಾ ಸಿನಿಮಾದ ಪ್ರಿ-ರಿಲೀಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಚಿರಂಜೀವಿ ತಮ್ಮ 154ನೇ ಚಿತ್ರವನ್ನು ಮೈತ್ರಿ ಮೂವಿ ಮೇಕರ್ಸ್ ಸಂಸ್ಥೆ ಜೊತೆ ಮಾಡಲಿದ್ದೇನೆ ಎಂದು ಪ್ರಕಟಿಸಿದ್ದಾರೆ.
ಈ ಚಿತ್ರಕ್ಕೆ ಕೆಎಸ್ ರವೀಂದ್ರ (ಬಾಬಿ) ಆಕ್ಷನ್ ಕಟ್ ಹೇಳಲಿದ್ದಾರೆ ಎಂದು ಚಿರು ಹೇಳಿದರು. ಪವರ್, ಸರ್ದಾರ್ ಗಬ್ಬರ್ ಸಿಂಗ್, ಜೈ ಲವಕುಶ, ವೆಂಕಿ ಮಾಮ ಅಂತಹ ಹಿಟ್ ಚಿತ್ರಗಳನ್ನು ನೀಡಿರುವ ಬಾಬಿ ಜೊತೆ ಚಿರು ಮುಂದಿನ ಸಿನಿಮಾ ಕೈಗೆತ್ತಿಕೊಳ್ಳುತ್ತಿರುವುದು ಮೆಗಾ ಅಭಿಮಾನಿಗಳಲ್ಲಿ ಥ್ರಿಲ್ ಹೆಚ್ಚಿಸಿದೆ.
'ದೇಶದ ನಂಬರ್ 1 ನಟ': ಚಿರಂಜೀವಿ ಹೊಗಳಿದ್ದು ಯಾವ ನಟನನ್ನು?
ಆಚಾರ್ಯ ಚಿತ್ರದ ವಿಚಾರಕ್ಕೆ ವಾಪಸ್ ಬರುವುದಾದರೆ ಮೇ 13, 2021ಕ್ಕೆ ಸಿನಿಮಾ ರಿಲೀಸ್ ಆಗಲಿದೆ ಎಂದು ಹೇಳಲಾಗಿದೆ. ಕಾಜಲ್ ಅಗರ್ವಾಲ್ ನಾಯಕಿಯಾಗಿ ನಟಿಸಿದ್ದು, ರಾಮ್ ಚರಣ್ ತೇಜ ಸಹ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
Recommended Video