Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೊರೊನಾ ವೈರಸ್ಗೆ ನಟ ಚಿರಂಜೀವಿ ಕ್ಯಾರವಾನ್ ಚಾಲಕ ಬಲಿ
ತೆಲುಗು ಮೆಗಾಸ್ಟಾರ್ ಚಿರಂಜೀವಿ ಅವರ ಕ್ಯಾರವಾನ್ ಚಾಲಕ ಕೊರೊನಾ ವೈರಸ್ಗೆ ಬಲಿಯಾಗಿದ್ದಾರೆ ಎಂಬ ಸುದ್ದಿ ವರದಿಯಾಗಿದೆ. ಚಾಲಕನ ನಿಧನ ಸುದ್ದಿಯಿಂದ ತೀರಾ ಬೇಸರಗೊಂಡ ಚಿರಂಜೀವಿ ಆಚಾರ್ಯ ಸಿನಿಮಾ ಚಿತ್ರೀಕರಣ ನಿಲ್ಲಿಸಿದ್ದಾರೆ.
ಕೊರಟಲಾ ಶಿವ ನಿರ್ದೇಶನದಲ್ಲಿ ತಯಾರಾಗುತ್ತಿರುವ ಆಚಾರ್ಯ ಸಿನಿಮಾದ ಶೂಟಿಂಗ್ ಹೈದರಾಬಾದ್ನಲ್ಲಿ ನಡೆಯುತ್ತಿತ್ತು. ಚಿತ್ರೀಕರಣವನ್ನು ಇದ್ದಕ್ಕಿದ್ದಂತೆ ಸ್ಥಗಿತಗೊಳಿಸಲಾಯಿತು. ಶೂಟಿಂಗ್ ನಿಲ್ಲಿಸಿದ ಕಾರಣ ಹುಡುಕಿದಾಗ ಚಿರಂಜೀವಿ ಅವರ ಖಾಸಗಿ ಸಾವನ್ನಪ್ಪಿರುವುದು ತಿಳಿದು ಬಂದಿದೆ.
ಸಿನಿಮಾ ಕಾರ್ಮಿಕರಿಗೆ ಮೆಗಾಸ್ಟಾರ್ ಚಿರಂಜೀವಿಯಿಂದ ಉಚಿತ ಕೊರೊನಾ ಲಸಿಕೆ
ದೇಶದಲ್ಲಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು, ತೆಲುಗು ಸಿನಿ ಕಾರ್ಮಿಕರಿಗೆ ಉಚಿತವಾಗಿ ಲಸಿಕೆ ಹಾಕುವ ಅಭಿಯಾನಕ್ಕೆ ನಟ ಚಿರಂಜೀವಿ ಕೈ ಜೋಡಿಸಿದ್ದರು. ಅಪೋಲೋ ಸಂಸ್ಥೆಯ ಜೊತೆ ನಿಂತ ಚಿರು, ಸಿನಿಮಾ ಕಾರ್ಮಿಕರು, ಕಲಾವಿದರು, ಪತ್ರಕರ್ತರು 45 ವರ್ಷ ಮೇಲ್ಪಟ್ಟ ಎಲ್ಲರೂ ಕೋವಿಡ್ ಲಸಿಕೆ ತೆಗೆದುಕೊಳ್ಳಿ ಎಂದು ಮನವಿ ಮಾಡಿದ್ದರು. ಇದರ ಬೆನ್ನಲ್ಲೆ ತಮ್ಮ ಕ್ಯಾರವಾನ್ ಚಾಲಕ ಕೊನೆಯುಸಿರೆಳೆದಿರುವುದು ಬೇಸರ ಮೂಡಿಸಿದೆ.
ಆಚಾರ್ಯ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ಸೋನು ಸೂದ್ ಅವರಿಗೂ ಕೋವಿಡ್ ಸೋಂಕು ತಗುಲಿದೆ. ಪ್ರಸ್ತುತ, ಸೋನು ಸೂದ್ ಕ್ವಾರಂಟೈನ್ಗೆ ಒಳಗಾಗಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಪವನ್ ಕಲ್ಯಾಣ್ ಅವರಿಗೂ ಇತ್ತೀಚಿಗಷ್ಟೆ ಸೋಂಕು ದೃಢವಾಗಿತ್ತು. ಪವನ್ ಕಲ್ಯಾಣ್ ಅವರ ಆಪ್ತ ಸಿಬ್ಬಂದಿಗೆ ಸೋಂಕು ತಗುಲಿದ ನಂತರ ಕ್ವಾರಂಟೈನ್ ಆಗಿದ್ದರು. ಪರೀಕ್ಷಿಸಿದ ಬಳಿಕ ತಮಗೂ ಸೋಂಕು ತಗುಲಿರುವುದು ಪತ್ತೆಯಾಗಿತ್ತು.
ಆಚಾರ್ಯ ಸಿನಿಮಾದ ಚಿತ್ರೀಕರಣ ಇನ್ನು 10-15 ದಿನ ಮುಗಿಯಲಿದೆ. ಚಿತ್ರದ ಪ್ರಮುಖ ದೃಶ್ಯಗಳ ಚಿತ್ರೀಕರಣ ಮುಗಿದಿದೆ. ಹಾಗಾಗಿ, ಚಿತ್ರಕ್ಕಿಂತ ಸಿನಿಮಾದಲ್ಲಿ ಕೆಲಸ ಮಾಡಿದ ಸಿಬ್ಬಂದಿಗಳ ಆರೋಗ್ಯದ ಮೇಲೆ ರಾಮ್ ಚರಣ್ ಹೆಚ್ಚಿನ ಗಮನ ಕೊಟ್ಟಿದ್ದಾರೆ ಎನ್ನಲಾಗಿದೆ.
Recommended Video
ಸದ್ಯದ ವರದಿ ಪ್ರಕಾರ, ಆಚಾರ್ಯ ಸಿನಿಮಾ ಮೇ 13 ರಂದು ತೆರೆಗೆ ಬರಲಿದೆ. ಕಾಜಲ್ ಅಗರ್ ವಾಲ್ ನಾಯಕಿಯಾಗಿದ್ದು, ಪೂಜಾ ಹೆಗ್ಡೆ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ.