Don't Miss!
- Automobiles Honda: ಭಾರತದಲ್ಲಿ ಹೋಂಡಾ ಹೊಸ ಮೈಲಿಗಲ್ಲು: ಎಷ್ಟು ಮಂದಿಯ ಬಳಿ ಆಕ್ಟೀವಾ, ಶೈನ್ ಇದೆ ಹೇಳಿ?
- Lifestyle ವಿಶ್ವದಲ್ಲೇ ಅತೀ ಹೆಚ್ಚು ಬಾರಿ ಚುನಾವಣೆ ಸೋತ ವ್ಯಕ್ತಿ..! ಯಾರು ಈ ಸೋಲುವ ಸರದಾರ ಗೊತ್ತಾ?
- News India Unemployment: ದೇಶದಲ್ಲಿ ಯುವ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಳ: ಬೆಚ್ಚಿಬೀಳಿಸುವ ವರದಿ ಬಹಿರಂಗ!
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Technology iPhones: ಬೇಕಿತ್ತಾ ಇದೆಲ್ಲ? ನಕಲಿ ಐಫೋನ್ ಮೂಲಕ ಆಪಲ್ಗೆ ಪಂಗನಾಮ ಹಾಕಿದವನಿಗೆ ಜೈಲೂಟ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇವರು ನನ್ನ ತಾಯಿ ಅಲ್ಲ, ಮಹಾನ್ ಕೆಲಸ ಮಾಡುತ್ತಿರುವ ಈ ತಾಯಿಗೆ ಧನ್ಯವಾದ: ನಟ ಚಿರಂಜೀವಿ
ಕೊರೊನಾ ವೈರಸ್ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಿಲ್ಲರ್ ವೈರಸ್ ನಿಂದ ಕಾಪಾಡಿಕೊಳ್ಳಲು ಮಾಸ್ಕ್, ಸ್ಯಾನಿಟೈಸರ್ ಗಳ ಬಳಕೆ ಹೆಚ್ಚಾಗುತ್ತಿದೆ. ಹಾಗಾಗಿ ಈಗ ಮಾಸ್ಕ್ ಗಳ ಕೊರತೆಯೊಂಟಾಗಿದೆ. ಈ ಸಮಯದಲ್ಲಿ ಅನೇಕರು ಮನೆಯಲ್ಲಿಯೇ ಮಾಸ್ಕ್ ತಯಾರಿಸಿ ಮಾರಾಟ ಮಾಡುತ್ತಿದ್ದಾರೆ.
ತೆಲುಗು ನಟ ಚಿರಂಜೀವಿ ಅವರ ತಾಯಿ ಅಂಜನಾ ದೇವಿ ಸಹ ಮಾಸ್ಕ್ ತಯಾರಿಕೆಯಲ್ಲಿ ಬ್ಯುಸಿಯಾಗಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಜೊತೆಗೆ ಫೋಟೋ ಕೂಡ ವೈರಲ್ ಆಗಿದೆ. ಚಿರಂಜೀವಿ ಅವರ ತಾಯಿ ಸ್ನೇಹಿತರ ಜೊತೆ ಸೇರಿ ದಿನಕ್ಕೆ 700 ಮಾಸ್ಕ್ ಗಳನ್ನು ತಯಾರಿಸುತ್ತಿದ್ದಾರೆ. ಎಂದು ಕೆಲವು ಸುದ್ದಿ ಪತ್ರಿಕೆಗಳಲ್ಲಿ ಮತ್ತು ಟಿವಿ ಚಾನಲ್ ಗಳಲ್ಲಿ ಪ್ರಕಟವಾಗಿದೆ.
ಇದನ್ನು ನೋಡಿದ ನಟ ಚಿರಂಜೀವಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಇವರು ನನ್ನ ತಾಯಿ ಅಲ್ಲ. ಆದರೆ ಮಹಾನ್ ಕೆಲಸ ಮಾಡುತ್ತಿರುವ ಈ ತಾಯಿಗೆ ಧನ್ಯವಾದ ಎಂದು ಹೇಳಿದ್ದಾರೆ. ಮಹಿಳೆ ಮನೆಯಲ್ಲಿಯೇ ಕುಳಿತು ಮಾಸ್ಕ್ ತಯಾರಿಸುತ್ತಿರುವ ಫೋಟೋ ನೋಡಿ ಅನೇಕರು ಚಿರಂಜೀವಿ ತಾಯಿ ಅಂಜನಾ ದೇವಿ ಎಂದೇ ಭಾವಿಸಿದ್ದರು.
It is reported in press & some media channels that my mother is doing this humanitarian work. I humbly seek to clarify that it is not my mother but whichever mother is engaged in this great act of compassion I heartily thank her for such kindness.కమ్మనైన మనసున్న ప్రతి తల్లి అమ్మే pic.twitter.com/svN4RduRUg
— Chiranjeevi Konidela (@KChiruTweets) April 11, 2020
ಈ ಬಗ್ಗೆ ಚಿರಂಜೀವಿ ಟ್ವೀಟ್ ಮಾಡಿದ್ದಾರೆ. " ನನ್ನ ತಾಯಿ ಈ ಮಾನವೀಯ ಕಾರ್ಯವನ್ನು ಮಾಡುತ್ತಿದ್ದಾರೆ ಎಂದು ಕೆಲವು ಪತ್ರಿಕೆಗಳು ಮತ್ತು ಚಾನಲ್ ಗಳಲ್ಲಿ ವರದಿಯಾಗುತ್ತಿದೆ. ಇದು ನನ್ನ ತಾಯಿ ಅಲ್ಲ. ಆದೆ ಯಾವತಾಯಿಯಾದರು ಈ ಮಹಾನ್ ಕೆಲಸಕ್ಕೆ ಹೃದಯಪೂರ್ವಕ ಧನ್ಯವಾದ ತಿಳಿಸುತ್ತೇನೆ."ಎಂದು ಟ್ವೀಟ್ ಮಾಡಿದ್ದಾರೆ.
ಆಂಧ್ರಪ್ರದೇಶದಲ್ಲಿಯೂ ಕೊರೊನಾ ಅಟ್ಟಹಾಸ ಮರೆಯುತ್ತಿದ್ದು, ಸೋಂಕಿತರ ಸಂಖ್ಯೆ ಜಾಸ್ತಿ ಆಗುತ್ತಿದೆ. ಇನ್ನು ಟಾಲಿವುಡ್ ನ ಸಾಕಷ್ಟು ಮಂದಿ ಕೊರೊನಾ ವಿರುದ್ಧ ಹೋರಾಟಕ್ಕೆ ಕೋಟಿ ಕೋಟಿ ದೇಣಿಗೆ ನೀಡಿದ್ದಾರೆ. ನಟ ಚಿರಂಜೀವಿ ಮತ್ತು ಪುತ್ರ ರಾಮ್ ಚರಣ್ ಇಬ್ಬರು ಆಂಧ್ರ ಸಿಎಂ ಪರಿಹಾರ ನಿಧಿಗೆ ಹಣ ನೀಡಿದ್ದಾರೆ.