Don't Miss!
- Lifestyle ಲಿವರ್ ಸಮಸ್ಯೆಯಿದೆ ಎಂದು ಸೂಚಿಸುವ ಲಕ್ಷಣಗಳಿವು, ಕುಟುಂಬಸ್ಥರು ಲಿವರ್ ದಾನ ಮಾಡಿದರೆ ವ್ಯಕ್ತಿಯ ಪ್ರಾಣ ಉಳಿಸಬಹುದು
- News ಲೋಕಸಭಾ ಚುನಾವಣೆ 2024: ಈ ಆರು ಜಿಲ್ಲೆಗಳಲ್ಲಿ ಬಹುತೇಕ ಶೂನ್ಯ ಮತದಾನ; ಕಾರಣವೇನು?
- Sports LSG vs CSK IPL 2024: ಮತ್ತೊಮ್ಮೆ ಧೋನಿ, ಜಡೇಜಾ ಅಬ್ಬರ; ಲಕ್ನೋ ತಂಡಕ್ಕೆ ಸವಾಲಿನ ಗುರಿ ನೀಡಿದ ಸಿಎಸ್ಕೆ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇವರು ನನ್ನ ತಾಯಿ ಅಲ್ಲ, ಮಹಾನ್ ಕೆಲಸ ಮಾಡುತ್ತಿರುವ ಈ ತಾಯಿಗೆ ಧನ್ಯವಾದ: ನಟ ಚಿರಂಜೀವಿ
ಕೊರೊನಾ ವೈರಸ್ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಿಲ್ಲರ್ ವೈರಸ್ ನಿಂದ ಕಾಪಾಡಿಕೊಳ್ಳಲು ಮಾಸ್ಕ್, ಸ್ಯಾನಿಟೈಸರ್ ಗಳ ಬಳಕೆ ಹೆಚ್ಚಾಗುತ್ತಿದೆ. ಹಾಗಾಗಿ ಈಗ ಮಾಸ್ಕ್ ಗಳ ಕೊರತೆಯೊಂಟಾಗಿದೆ. ಈ ಸಮಯದಲ್ಲಿ ಅನೇಕರು ಮನೆಯಲ್ಲಿಯೇ ಮಾಸ್ಕ್ ತಯಾರಿಸಿ ಮಾರಾಟ ಮಾಡುತ್ತಿದ್ದಾರೆ.
ತೆಲುಗು ನಟ ಚಿರಂಜೀವಿ ಅವರ ತಾಯಿ ಅಂಜನಾ ದೇವಿ ಸಹ ಮಾಸ್ಕ್ ತಯಾರಿಕೆಯಲ್ಲಿ ಬ್ಯುಸಿಯಾಗಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಜೊತೆಗೆ ಫೋಟೋ ಕೂಡ ವೈರಲ್ ಆಗಿದೆ. ಚಿರಂಜೀವಿ ಅವರ ತಾಯಿ ಸ್ನೇಹಿತರ ಜೊತೆ ಸೇರಿ ದಿನಕ್ಕೆ 700 ಮಾಸ್ಕ್ ಗಳನ್ನು ತಯಾರಿಸುತ್ತಿದ್ದಾರೆ. ಎಂದು ಕೆಲವು ಸುದ್ದಿ ಪತ್ರಿಕೆಗಳಲ್ಲಿ ಮತ್ತು ಟಿವಿ ಚಾನಲ್ ಗಳಲ್ಲಿ ಪ್ರಕಟವಾಗಿದೆ.
ಇದನ್ನು ನೋಡಿದ ನಟ ಚಿರಂಜೀವಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಇವರು ನನ್ನ ತಾಯಿ ಅಲ್ಲ. ಆದರೆ ಮಹಾನ್ ಕೆಲಸ ಮಾಡುತ್ತಿರುವ ಈ ತಾಯಿಗೆ ಧನ್ಯವಾದ ಎಂದು ಹೇಳಿದ್ದಾರೆ. ಮಹಿಳೆ ಮನೆಯಲ್ಲಿಯೇ ಕುಳಿತು ಮಾಸ್ಕ್ ತಯಾರಿಸುತ್ತಿರುವ ಫೋಟೋ ನೋಡಿ ಅನೇಕರು ಚಿರಂಜೀವಿ ತಾಯಿ ಅಂಜನಾ ದೇವಿ ಎಂದೇ ಭಾವಿಸಿದ್ದರು.
It is reported in press & some media channels that my mother is doing this humanitarian work. I humbly seek to clarify that it is not my mother but whichever mother is engaged in this great act of compassion I heartily thank her for such kindness.కమ్మనైన మనసున్న ప్రతి తల్లి అమ్మే pic.twitter.com/svN4RduRUg
— Chiranjeevi Konidela (@KChiruTweets) April 11, 2020
ಈ ಬಗ್ಗೆ ಚಿರಂಜೀವಿ ಟ್ವೀಟ್ ಮಾಡಿದ್ದಾರೆ. " ನನ್ನ ತಾಯಿ ಈ ಮಾನವೀಯ ಕಾರ್ಯವನ್ನು ಮಾಡುತ್ತಿದ್ದಾರೆ ಎಂದು ಕೆಲವು ಪತ್ರಿಕೆಗಳು ಮತ್ತು ಚಾನಲ್ ಗಳಲ್ಲಿ ವರದಿಯಾಗುತ್ತಿದೆ. ಇದು ನನ್ನ ತಾಯಿ ಅಲ್ಲ. ಆದೆ ಯಾವತಾಯಿಯಾದರು ಈ ಮಹಾನ್ ಕೆಲಸಕ್ಕೆ ಹೃದಯಪೂರ್ವಕ ಧನ್ಯವಾದ ತಿಳಿಸುತ್ತೇನೆ."ಎಂದು ಟ್ವೀಟ್ ಮಾಡಿದ್ದಾರೆ.
ಆಂಧ್ರಪ್ರದೇಶದಲ್ಲಿಯೂ ಕೊರೊನಾ ಅಟ್ಟಹಾಸ ಮರೆಯುತ್ತಿದ್ದು, ಸೋಂಕಿತರ ಸಂಖ್ಯೆ ಜಾಸ್ತಿ ಆಗುತ್ತಿದೆ. ಇನ್ನು ಟಾಲಿವುಡ್ ನ ಸಾಕಷ್ಟು ಮಂದಿ ಕೊರೊನಾ ವಿರುದ್ಧ ಹೋರಾಟಕ್ಕೆ ಕೋಟಿ ಕೋಟಿ ದೇಣಿಗೆ ನೀಡಿದ್ದಾರೆ. ನಟ ಚಿರಂಜೀವಿ ಮತ್ತು ಪುತ್ರ ರಾಮ್ ಚರಣ್ ಇಬ್ಬರು ಆಂಧ್ರ ಸಿಎಂ ಪರಿಹಾರ ನಿಧಿಗೆ ಹಣ ನೀಡಿದ್ದಾರೆ.