Don't Miss!
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- News ಐತಿಹಾಸಿಕ ಪ್ರಸಿದ್ಧ ವದ್ದಿಕೆರೆ ಸಿದ್ದಪ್ಪನ ಬಗ್ಗೆ ನಿಮಗೆಷ್ಟು ಗೊತ್ತು?-ಇಲ್ಲಿದೆ ಸಂಪೂರ್ಣ ವಿವರ
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತೆಲಂಗಾಣ ಸಿಎಂಗೆ ಧನ್ಯವಾದ ಹೇಳಿದ ತೆಲುಗು ಚಿತ್ರರಂಗ: ಕಾರಣವೇನು?
ತೆಲಂಗಾಣ ರಾಜ್ಯದ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರಿಗೆ ಮೆಗಾಸ್ಟಾರ್ ಚಿರಂಜೀವಿ, ನಾಗಾರ್ಜುನ, ರಾಮ್ ಚರಣ್ ತೇಜ, ಸಾಯಿಧರ್ಮ ತೇಜ್ ಹಾಗೂ ಇನ್ನೂ ಹಲವರು ಧನ್ಯವಾದಗಳನ್ನು ತಿಳಿಸಿದ್ದಾರೆ.
ಕೊರೊನಾ ವೈರಸ್ಗೆ ತುತ್ತಾಗಿ ಭಾರಿ ನಷ್ಟ ಅನುಭವಿಸಿರುವ ತೆಲುಗು ಚಿತ್ರರಂಗದ ಪುನಶ್ಚೇತನಕ್ಕೆ ಅಗತ್ಯ ನೆರವನ್ನು ಸರ್ಕಾರ ನೀಡುತ್ತದೆ ಎಂದು ತೆಲಂಗಾಣ ಸಿಎಂ ಕೆಸಿಆರ್ ಭರವಸೆ ನೀಡಿದ್ದಾರೆ. ಹಾಗಾಗಿ ತೆಲುಗು ಸಿನಿಮಾ ಪ್ರಮುಖರು ಕೆಸಿಆರ್ಗೆ ಧನ್ಯವಾದ ಹೇಳಿದ್ದಾರೆ.
'ತೆಲುಗು ಚಿತ್ರರಂಗದ ಪುನಶ್ಚೇತನಕ್ಕೆ ಅಗತ್ಯ ನೆರವು, ಪರಿಹಾರ ಒದಗಿಸುವುದಾಗಿ ಭರವಸೆ ನೀಡಿದ್ದಕ್ಕೆ ಕೆಸಿಆರ್ಗೆ ಧನ್ಯವಾದಗಳು. ಚಿತ್ರರಂಗದ ಪುನಶ್ಚೇತನಕ್ಕೆ ಈ ನೆರವು ಬಹಳ ಸಹಕಾರಿ ಆಗುವ ನಿರೀಕ್ಷೆ ಇದೆ' ಎಂದಿದ್ದಾರೆ.
'ಸಿಎಂ ಕೆಸಿಆರ್ ಅವರಿಗೆ ಕೃತಜ್ಞತೆಗಳು ಮತ್ತು ಧನ್ಯವಾದಗಳು. ಅಗತ್ಯ ಸಂದರ್ಭದಲ್ಲಿ ತೆಲಂಗಾಣ ಸಿನಿಮಾ ಉದ್ಯಮಕ್ಕೆ ಬೇಕಾದ ನೆರವು, ಪರಿಹಾರ ಒದಗಿಸುತ್ತಿದ್ದೀರಿ' ಎಂದಿದ್ದಾರೆ ಅಕ್ಕಿನೇನಿ ನಾಗಾರ್ಜುನ.
Recommended Video
ರಾಮ್ ಚರಣ್ ತೇಜ ಸಹ ಟ್ವೀಟ್ ಮಾಡಿದ್ದು, 'ತೆಲಂಗಾಣ ಸರ್ಕಾರಕ್ಕೆ ನಾನು ಹೃದಯಪೂರ್ವಕ ಆಭಾರಿಯಾಗಿದ್ದೇನೆ. ತೆಲುಗು ಸಿನಿಮಾ ಉದ್ಯಮದ ಪುನಶ್ಚೇತನವನ್ನು ಜೊತೆ-ಜೊತೆಯಾಗಿ ಮಾಡೋಣ' ಎಂದಿದ್ದಾರೆ.