Don't Miss!
- News ಮೈತ್ರಿ ಹೆಸರಿನಲ್ಲಿ ಬೆನ್ನಿಗೆ ಚೂರಿ ಹಾಕಿದರು; ಎಚ್.ಡಿ. ಕುಮಾರಸ್ವಾಮಿ ಆಕ್ರೋಶ
- Automobiles KTM Duke 125 ಬೆಲೆಗೆ ಯಾವೆಲ್ಲಾ ಬೈಕ್ಗಳು ಸಿಗುತ್ತೆ ಗೊತ್ತಾ?: ಪಲ್ಸರ್ನಿಂದ ಹಿಡಿದು MT 15 ವರೆಗೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತೆಲಂಗಾಣ ಸಿಎಂಗೆ ಧನ್ಯವಾದ ಹೇಳಿದ ತೆಲುಗು ಚಿತ್ರರಂಗ: ಕಾರಣವೇನು?
ತೆಲಂಗಾಣ ರಾಜ್ಯದ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರಿಗೆ ಮೆಗಾಸ್ಟಾರ್ ಚಿರಂಜೀವಿ, ನಾಗಾರ್ಜುನ, ರಾಮ್ ಚರಣ್ ತೇಜ, ಸಾಯಿಧರ್ಮ ತೇಜ್ ಹಾಗೂ ಇನ್ನೂ ಹಲವರು ಧನ್ಯವಾದಗಳನ್ನು ತಿಳಿಸಿದ್ದಾರೆ.
ಕೊರೊನಾ ವೈರಸ್ಗೆ ತುತ್ತಾಗಿ ಭಾರಿ ನಷ್ಟ ಅನುಭವಿಸಿರುವ ತೆಲುಗು ಚಿತ್ರರಂಗದ ಪುನಶ್ಚೇತನಕ್ಕೆ ಅಗತ್ಯ ನೆರವನ್ನು ಸರ್ಕಾರ ನೀಡುತ್ತದೆ ಎಂದು ತೆಲಂಗಾಣ ಸಿಎಂ ಕೆಸಿಆರ್ ಭರವಸೆ ನೀಡಿದ್ದಾರೆ. ಹಾಗಾಗಿ ತೆಲುಗು ಸಿನಿಮಾ ಪ್ರಮುಖರು ಕೆಸಿಆರ್ಗೆ ಧನ್ಯವಾದ ಹೇಳಿದ್ದಾರೆ.
'ತೆಲುಗು ಚಿತ್ರರಂಗದ ಪುನಶ್ಚೇತನಕ್ಕೆ ಅಗತ್ಯ ನೆರವು, ಪರಿಹಾರ ಒದಗಿಸುವುದಾಗಿ ಭರವಸೆ ನೀಡಿದ್ದಕ್ಕೆ ಕೆಸಿಆರ್ಗೆ ಧನ್ಯವಾದಗಳು. ಚಿತ್ರರಂಗದ ಪುನಶ್ಚೇತನಕ್ಕೆ ಈ ನೆರವು ಬಹಳ ಸಹಕಾರಿ ಆಗುವ ನಿರೀಕ್ಷೆ ಇದೆ' ಎಂದಿದ್ದಾರೆ.
'ಸಿಎಂ ಕೆಸಿಆರ್ ಅವರಿಗೆ ಕೃತಜ್ಞತೆಗಳು ಮತ್ತು ಧನ್ಯವಾದಗಳು. ಅಗತ್ಯ ಸಂದರ್ಭದಲ್ಲಿ ತೆಲಂಗಾಣ ಸಿನಿಮಾ ಉದ್ಯಮಕ್ಕೆ ಬೇಕಾದ ನೆರವು, ಪರಿಹಾರ ಒದಗಿಸುತ್ತಿದ್ದೀರಿ' ಎಂದಿದ್ದಾರೆ ಅಕ್ಕಿನೇನಿ ನಾಗಾರ್ಜುನ.
Recommended Video
ರಾಮ್ ಚರಣ್ ತೇಜ ಸಹ ಟ್ವೀಟ್ ಮಾಡಿದ್ದು, 'ತೆಲಂಗಾಣ ಸರ್ಕಾರಕ್ಕೆ ನಾನು ಹೃದಯಪೂರ್ವಕ ಆಭಾರಿಯಾಗಿದ್ದೇನೆ. ತೆಲುಗು ಸಿನಿಮಾ ಉದ್ಯಮದ ಪುನಶ್ಚೇತನವನ್ನು ಜೊತೆ-ಜೊತೆಯಾಗಿ ಮಾಡೋಣ' ಎಂದಿದ್ದಾರೆ.