Don't Miss!
- News Hubballi: ರಾಜ್ಯ ಸರ್ಕಾರದ ವಿರುದ್ಧ ಭಾರೀ ಪ್ರತಿಭಟನೆ: ನೇಹಾ ನಿವಾಸಕ್ಕೆ ಶ್ರೀಗಳು, ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ: ಪೊಲೀಸ್ ಅಭಯ
- Technology ನಿಮ್ಮ ಬಳಿ ರೆಡ್ಮಿಯ ಈ ಫೋನ್ ಇದ್ರೆ, ಇಲ್ಲಿದೆ ನಿಮಗೆ ಗುಡ್ನ್ಯೂಸ್!
- Automobiles Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Sports LSG vs CSK IPL 2024: ಐಪಿಎಲ್ನಲ್ಲಿ ಇತಿಹಾಸ ಸೃಷ್ಟಿಸಿದ ಎಂಎಸ್ ಧೋನಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಜೀನಾಮೆ ನೀಡಿ 'ಮಾ' ಸಂಘದಿಂದ ಹೊರಬಂದ ಚಿರಂಜೀವಿ
'ಮಾ' (ಮೂವಿ ಆರ್ಟಿಸ್ಟ್ ಅಸೋಸಿಯೇಷನ್)ನ ಶಿಸ್ತು ಸಮಿತಿ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರಗೆ ನಡೆದಿದ್ದಾರೆ ನಟ ಚಿರಂಜೀವಿ.
ತೆಲುಗು ಸಿನಿಮಾ ನಟರ ಕಲ್ಯಾಣಕ್ಕಾಗಿ 'ಮಾ' ಸಂಘವನ್ನು ಸ್ಥಾಪಿಸಲಾಗಿತ್ತು. ನಟ ಕೃಷ್ಣಂ ರಾಜು ಸಮಿತಿಯ ಅಧ್ಯಕ್ಷರಾಗಿದ್ದರು. ನಟ ಚಿರಂಜೀವಿ ಅವರು ಶಿಸ್ತು ಸಮಿತಿಯ ಸದಸ್ಯರಾಗಿದ್ದರು. ಆದರೆ ಸಂಘದ ಕೆಲವರ ಧೋರಣೆ ಇಷ್ಟವಾಗದೆ ಚಿರಂಜೀವಿ ಅವರು ರಾಜೀನಾಮೆ ನೀಡಿ ಹೊರಬಂದಿದ್ದಾರೆ.
ಪವನ್ ಕಲ್ಯಾಣ್ ಜೊತೆಗಿನ ಸುಂದರ ಚಿತ್ರ ಹಂಚಿಕೊಂಡು ಶುಭ ಹಾರೈಸಿದ ಚಿರಂಜೀವಿ
ಸಂಘದಲ್ಲಿನ ಕೆಲವರು ವೃತ್ತಿಪರವಲ್ಲದ ವರ್ತನೆಗಳನ್ನು ತೋರುತ್ತಿದ್ದಾರೆ ಎಂದು ಆರೋಪಿಸಿ ಚಿರಂಜೀವಿ ಅವರು ರಾಜೀನಾಮೆ ನೀಡಿದ್ದಾರೆ ಎಂದು ತೆಲುಗಿನ ಪತ್ರಿಕೆಗಳು ವರದಿ ಮಾಡಿವೆ. 'ಮಾ' ಒಳಗೆ ಸಾಕಷ್ಟು ಸಮಸ್ಯೆಗಳು ಇರುವುದಾಗಿಯೂ ಚಿರಂಜೀವಿ ಅವರು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಈ ಹಿಂದೆ 'ಮಾ' ಗೆ ಸಂಬಂಧಿಸಿದಂತೆ ಹಲವು ವಿವಾದಗಳು ಆಗಿದ್ದವು. ನಟ ರಾಜಶೇಖರ್ ಅವರು 'ಮಾ'ದ ಕಾರ್ಯಕ್ರಮ ನಡೆಯಬೇಕಾದರೆ ವೇದಿಕೆ ಏರಿ ಸಂಘದ ಮುಖ್ಯಸ್ಥರ ಬಗ್ಗೆ ಹಲವು ಆರೋಪಗಳನ್ನು ಮಾಡಿದ್ದರು. ರಾಜಶೇಖರ್ ಮಾತ್ರವೇ ಅಲ್ಲದೆ ಇನ್ನೂ ಕೆಲವರು ಸಂಘದ ವಿರುದ್ಧ ಆರೋಪಗಳನ್ನು ಮಾಡಿದ್ದರು.
2019 ರಲ್ಲಿ ಮಾ ಗೆ ನಡೆದ ಚುನಾವಣೆಯಲ್ಲಿಯೂ ಸಾಕಷ್ಟು ಗೊಂದಲ, ಗದ್ದಲಗಳು ಆಗಿ ವಿವಾದ ಸೃಷ್ಟಿಯಾಗಿತ್ತು.