Don't Miss!
- Sports Riyan Parag: 'ಗಾಯದಿಂದ ಮೂರು ದಿನ ಒದ್ದಾಡಿ ಹೋಗಿದ್ದೆ': ರಿಯಾನ್ ಪರಾಗ್
- News RCB vs KKR: ಕ್ರಿಕೆಟ್ ಪ್ರೇಮಿಗಳೇ... ಪ್ರಯಾಣಿಕರೇ ರಸ್ತೆಗಿಳಿಯುವ ಮುನ್ನ ಒಮ್ಮೆ ಗಮನಿಸಿ
- Finance ಇನ್ಮುಂದೆ ದುಬಾರಿಯಾಗಲಿದೆ ಎಸ್ಬಿಐ ಡೆಬಿಟ್, ಕ್ರೆಡಿಟ್ ಕಾರ್ಡ್ ನಿರ್ವಹಣಾ ಶುಲ್ಕ
- Automobiles Jonty Rhodes: ರಾಯಲ್ ಎನ್ಫೀಲ್ಡ್ ಬೈಕ್ಗಳಿಗೆ ಮನಸೋತ ದ.ಆಫ್ರಿಕಾ ಕ್ರಿಕೆಟರ್!
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Technology ಬಿಎಸ್ಎನ್ಎಲ್ ಗ್ರಾಹಕರಿಗೆ ಸಿಹಿಸುದ್ದಿ!..ಬಜೆಟ್ ದರದಲ್ಲಿ ಹೊಸ ಪ್ಲ್ಯಾನ್ ಲಾಂಚ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಾರಿಸು ಬಳಿಕ 200 ಕೋಟಿ ಕ್ಲಬ್ ಸೇರಿದ 'ವಾಲ್ತೇರು ವೀರಯ್ಯ'!
ಸಂಕ್ರಾಂತಿ ಬಂತೆಂದರೆ ಸಾಕು ತೆಲುಗು ಹಾಗೂ ತಮಿಳು ಚಿತ್ರರಂಗಗಳ ದೊಡ್ಡ ದೊಡ್ಡ ಸ್ಟಾರ್ ನಟರ ಚಿತ್ರಗಳು ಬಿಡುಗಡೆಯಾಗಿ ಬಾಕ್ಸ್ ಆಫೀಸ್ನಲ್ಲಿ ಜಿದ್ದಾಜಿದ್ದಿ ನಡೆಸಲು ಸಜ್ಜಾಗಿಬಿಡುತ್ತವೆ. ಈ ದಿನಗಳಂದು ಸಾಲು ಸಾಲು ರಜೆಗಳು ಇರುವುದರಿಂದ ಚಿತ್ರಗಳು ದೊಡ್ಡ ಕಲೆಕ್ಷನ್ ಮಾಡಲಿವೆ. ಹೀಗಾಗಿಯೇ ಸಂಕ್ರಾಂತಿ ಪ್ರಯುಕ್ತ ತೆಲುಗು ಹಾಗೂ ತಮಿಳು ಮಂದಿ ಸ್ಟಾರ್ ನಟರ ಚಿತ್ರಗಳನ್ನು ಬಿಡುಗಡೆ ಮಾಡಿ ದೊಡ್ಡ ಕಲೆಕ್ಷನ್ ಮಾಡಿಕೊಳ್ಳುತ್ತಾರೆ.
ಇದೇ ರೀತಿ ಈ ವರ್ಷದ ಸಂಕ್ರಾಂತಿ ಪ್ರಯುಕ್ತವೂ ಸಹ ತೆಲುಗು ಹಾಗೂ ತಮಿಳಿನ ಸ್ಟಾರ್ ನಟರ ಚಿತ್ರಗಳು ಬಿಡುಗಡೆಗೊಂಡವು. ತಮಿಳಿನಲ್ಲಿ ವಿಜಯ್ ನಟನೆಯ ವಾರಿಸು ಹಾಗೂ ಅಜಿತ್ ಕುಮಾರ್ ನಟನೆಯ ತುನಿವು ಚಿತ್ರಗಳು ತೆರೆಗೆ ಬಂದವು. ಅತ್ತ ತೆಲುಗಿನಲ್ಲಿ ನಂದಮೂರಿ ಬಾಲಕೃಷ್ಣ ನಟನೆಯ ವೀರಸಿಂಹ ರೆಡ್ಡಿ ಹಾಗೂ ಚಿರಂಜೀವಿ ನಟನೆಯ ವಾಲ್ತೇರು ವೀರಯ್ಯ ಚಿತ್ರಗಳು ಬಿಡುಗಡೆಗೊಂಡವು.
ಈ ಮೂಲಕ ವಾರಿಸು vs ತುನಿವು ಚಿತ್ರಗಳ ನಡುವೆ ತಮಿಳುನಾಡು ಬಾಕ್ಸ್ ಆಫೀಸ್ ಪೈಪೋಟಿ ಉಂಟಾದರೆ, ತೆಲುಗಿನಲ್ಲಿ ವೀರಸಿಂಹ ರೆಡ್ಡಿ ಹಾಗೂ ವಾಲ್ತೇರು ವೀರಯ್ಯ ಚಿತ್ರಗಳಲ್ಲಿ ಯಾವ ಚಿತ್ರ ಹೆಚ್ಚು ಗಳಿಕೆ ಮಾಡಿ ಗೆಲ್ಲಬಹುದು ಎಂಬ ಕುತೂಹಲ ಮೂಡಿತ್ತು. ಅತ್ತ ತಮಿಳಿನಲ್ಲಿ ವಿಜಯ್ ನಟನೆಯ ವಾರಿಸು ಚಿತ್ರ ಬಿಡುಗಡೆಯಾದ 12 ದಿನಗಳಲ್ಲಿ 250 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡಿ ಗೆಲುವು ಸಾಧಿಸಿದ್ದರೆ, ತೆಲುಗಿನಲ್ಲಿ ಚಿರಂಜೀವಿ ನಟನೆಯ ವಾಲ್ತೇರು ವೀರಯ್ಯ ಬಿಡುಗಡೆಯಾದ 10 ದಿನಗಳಲ್ಲಿ 200 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡಿ ಸಂಕ್ರಾಂತಿ ವಿನ್ನರ್ ಎನಿಸಿಕೊಂಡಿದೆ.
ಈ ಕಲೆಕ್ಷನ್ ವರದಿಯನ್ನು ಚಿತ್ರದ ನಿರ್ಮಾಣ ಸಂಸ್ಥೆ ಮೈತ್ರಿ ಮೂವಿ ಮೇಕರ್ಸ್ ಸಾಮಾಜಿಕ ಜಾಲತಾಣದಲ್ಲಿನ ತನ್ನ ಅಧಿಕೃತ ಖಾತೆಗಳಲ್ಲಿ ಹಂಚಿಕೊಂಡಿದೆ. ಈ ಮೂಲಕ ಕಳೆದ ಚಿತ್ರ ಆಚಾರ್ಯದಲ್ಲಿ ಹೀನಾಯವಾಗಿ ಸೋತಿದ್ದ ಚಿರಂಜೀವಿ ಕಮ್ಬ್ಯಾಕ್ ಮಾಡಿದ್ದಾರೆ.