Don't Miss!
- News Lok Sabha Election 2024: ಟಿಕೆಟ್ ಹಂಚಿಕೆಯ ಬಳಿಕ ಬಿಜೆಪಿಯ ಮುಂದೆ ಹೊಸ-ಹೊಸ ಸವಾಲುಗಳು
- Automobiles ಎಲೆಕ್ಟ್ರಿಕ್ ಲೋಕಕ್ಕೆ ಎಸ್ಯುವಿ ದೈತ್ಯನ ಎಂಟ್ರಿ: ಇನ್ನು ಉಳಿದ ಕಾರುಗಳನ್ನು ದೇವರೇ ಕಾಪಾಡಬೇಕು!
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Finance ಬೆಂಗಳೂರು-ತುಮಕೂರು ನಮ್ಮ ಮೆಟ್ರೋ ಯೋಜನೆ: ಬರಲಿವೆ 19 ಎತ್ತರದ ನಿಲ್ದಾಣಗಳು
- Technology iPhone: ಆಪಲ್ ಅಂತಿಮವಾಗಿ ಐಫೋನ್ 12 ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿಯೇ ಬಿಟ್ಟಿತು! ಏನದು?
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಆಚಾರ್ಯ' ನಿರ್ದೇಶಕ-ನಿರ್ಮಾಪಕರ ಮುಂದೆ ಕಠಿಣ ಬೇಡಿಕೆಯಿಟ್ಟ ಚಿರಂಜೀವಿ
ಕೊರೊನಾ ಲಾಕ್ಡೌನ್ನಿಂದ ಸ್ಥಗಿತಗೊಂಡಿದ್ದ ಚಿತ್ರಗಳಿಗೆ ಮರು ಚಾಲನೆ ಸಿಕ್ಕಿದೆ. ತೆಲುಗು ಇಂಡಸ್ಟ್ರಿಯ ದೊಡ್ಡ ದೊಡ್ಡ ಪ್ರಾಜೆಕ್ಟ್ಗಳು ಚಿತ್ರೀಕರಣ ಪುನಾರರಂಭಿಸಿದೆ. ರಾಜಮೌಳಿಯ 'ಆರ್ ಆರ್ ಆರ್', ಪವನ್ ಕಲ್ಯಾಣ್ ನಟನೆಯ 'ವಕೀಲ್ ಸಾಬ್' ಹಾಗೂ ಚಿರಂಜೀವಿ ನಟನೆಯ 'ಆಚಾರ್ಯ' ಸಿನಿಮಾ ಶೂಟಿಂಗ್ಗೆ ತಯಾರಾಗಿದೆ.
ಪವನ್ ಕಲ್ಯಾಣ್ ಅಭಿನಯದ 'ವಕೀಲ್ ಸಾಬ್' ಚಿತ್ರೀಕರಣ ಅಕ್ಟೋಬರ್ನಿಂದ ಆರಂಭವಾಗಲಿದೆ. ಆದ್ರೆ, ಪವನ್ ಕಲ್ಯಾಣ್ ನವೆಂಬರ್ನಲ್ಲಿ ಶೂಟಿಂಗ್ನಲ್ಲಿ ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ. ಮತ್ತೊಂದೆಡೆ ಚಿರಂಜೀವಿ ಸಹ 'ಆಚಾರ್ಯ' ಶೂಟಿಂಗ್ ನವೆಂಬರ್ನಲ್ಲಿ ಆರಂಭಿಸಲು ತೀರ್ಮಾನಿಸಿದ್ದಾರೆ.
ಮೆಗಾಸ್ಟಾರ್ ಚಿರಂಜೀವಿ 'ಆಚಾರ್ಯ' ಸಿನಿಮಾದಲ್ಲಿ ಕನ್ನಡದ ನಟಿ?
ಆದರೆ, ಮೆಗಾಸ್ಟಾರ್ ಚಿರಂಜೀವಿ 'ಆಚಾರ್ಯ' ನಿರ್ದೇಶಕ-ನಿರ್ಮಾಪಕರ ಮುಂದೆ ಕಠಿಣವಾದ ಬೇಡಿಕೆಯಿಟ್ಟಿದ್ದಾರೆ. 'ಅಚಾರ್ಯ' ಚಿತ್ರೀಕರಣವನ್ನು ಒಂದೇ ಹಂತದಲ್ಲಿ ಮುಗಿಸುವಂತೆ ಕೇಳುತ್ತಿದ್ದಾರಂತೆ.
'ಆಚಾರ್ಯ' ಸಿನಿಮಾ ಕೆಲಸ ಬಹಳ ಇದೆ. ಒಂದೇ ಹಂತದಲ್ಲಿ ಚಿತ್ರೀಕರಣ ಮಾಡಿದ್ರೆ ಮಾತ್ರ ನವೆಂಬರ್ನಲ್ಲಿ ಆರಂಭಿಸಿ ಮಾರ್ಚ್ವೊತ್ತಿಗೆ ಕೆಲಸ ಮುಗಿಸಿ ಬೇಸಿಗೆ ರಜೆಗೆ ತೆರೆಮೇಲೆ ಬರಬಹುದು ಎಂದು ಚಿರಂಜೀವಿ ಹೇಳುತ್ತಿದ್ದಾರಂತೆ. ಇದು ನಿರ್ಮಾಪಕ ಹಾಗೂ ನಿರ್ದೇಶಕರಿಗೆ ಸವಾಲಾಗಿದೆ.
Recommended Video
ಈ ಬಗ್ಗೆ ಇನ್ನು ಅಂತಿಮ ನಿರ್ಧಾರಕ್ಕೆ ನಿರ್ದೇಶಕ ಕೊರಟಲಾ ಶಿವ ಬಂದಿಲ್ಲ. ಇನ್ನುಳಿದಂತೆ ಆಚಾರ್ಯ ಚಿತ್ರದಲ್ಲಿ ಚಿರಂಜೀವಿ ಜೊತೆ ಕಾಜಲ್ ಅಗರ್ವಾಲ್ ನಾಯಕಿಯಾಗಿ ನಟಿಸುತ್ತಿದ್ದಾರೆ. ರಾಮ್ ಚರಣ್ ತೇಜ ಸಹ ಅತಿಥಿ ಪಾತ್ರ ಮಾಡಲಿದ್ದಾರೆ.