ಕಾಡಿಗೆ ಎಂಟ್ರಿ ಕೊಟ್ಟಿದ್ದ ನಟ ಅಲ್ಲು ಅರ್ಜುನ್ ವಿರುದ್ಧ ದೂರು ದಾಖಲು

ತೆಲಂಗಾಣದ ಅಡಿಲಾಬಾದ್ ಕಾಡಿಗೆ ಭೇಟಿ ನೀಡಿದ್ದ ನಟ ಅಲ್ಲು ಅರ್ಜುನ್ ವಿರುದ್ಧ ದೂರು ದಾಖಲಾಗಿದೆ. ಕೊರೊನಾ ವೈರಸ್ ಸಮಯದಲ್ಲಿಭೇಟಿ ನೀಡಿ ನಿಯಮ ಉಲ್ಲಂಘನೆ ಮಾಡಿದ್ದಾರೆ ಎನ್ನುವ ಕಾರಣಕ್ಕೆ ಅಲ್ಲು ವಿರುದ್ಧ ಅಡಿಲಾಬಾದ್ ನ ನೆರಾಡಿಕೊಂಡ ಪೊಲೀಸ್ ಸ್ಟೇಷನ್ ನಲ್ಲಿ ದೂರು ದಾಖಲಾಗಿದೆ.

ನಟ ಅಲ್ಲು ಅರ್ಜುನ್ ಇತ್ತೀಚಿಗೆ ತೆಲಂಗಾಣದ ಅಡಿಲಾಬಾದ್ ಕಾಡಿಗೆ ಭೇಟಿ ನೀಡಿದ್ದರು. ಅಲ್ಲು ಅರ್ಜುನ್ ಎಂಟ್ರಿ ಕೊಡುತ್ತಿದ್ದಂತೆ ಅಭಿಮಾನಿಗಳು ನೆಚ್ಚಿನ ನಟನನ್ನು ನೋಡಲು ಮುಗಿಬಿದ್ದಾರೆ. ಯಾವುದೇ ಸಾಮಾಜಿಕ ಅಂತರ, ಮಾಸ್ಕ್ ಧರಿಸಿದೆ ಅಭಿಮಾನಿಗಳು ಅಲ್ಲು ಅರ್ಜುನ್ ಮುತ್ತಿಕೊಂಡಿದ್ದಾರೆ. ಫೋಟೋ ಕ್ಲಿಕ್ಕಿಸಿಕೊಂಡು ಸಂತಸ ಪಟ್ಟಿದ್ದಾರೆ. ಈ ವಿಡಿಯೋ ಎಲ್ಲಾ ಕಡೆ ವೈರಲ್ ಆಗುತ್ತಿದೆ.

ಅಲ್ಲು ಅರ್ಜುನ್ ಮುಂಬರುವ ಪುಷ್ಪ ಸಿನಿಮಾಗಾಗಿ ಸ್ಥಳ ನೋಡಲು ಕಾಡಿಗೆ ಭೇಟಿ ನೀಡಿದ್ದರು ಎಂದು ಹೇಳಲಾಗುತ್ತಿದೆ. ಸ್ನೇಹಿತರು ಮತ್ತು ಸಿನಿಮಾತಂಡದ ಜೊತೆ ಅಲ್ಲು ಅಡಿಲಾಬಾದ್ ಕಾಡಿಗೆ ಎಂಟ್ರಿ ಕೊಟ್ಟಿದ್ದರು. ಬಳಿಕ ಹರಿತ ವನಮ್ ಪಾರ್ಕ್ ಮತ್ತು ಕುಂತಲಾ ಜಲಪಾತಕ್ಕೆ ಭೇಟಿ ನೀಡಿದ್ದಾರೆ.

Complaint Against Allu Arjun In Police Station For Scouting Some Of The Locations For His Pushpa Movie

ಕೊರೊನಾ ಹಿನ್ನಲೆ ಈ ಸ್ಥಳಗಳನ್ನು ಸಾರ್ವಜನಿಕ ಪ್ರವೇಶಕ್ಕೆ ಮುಚ್ಚಲಾಗಿದೆ. ಯಾರಿಗೂ ಪ್ರವೇಶವಿಲ್ಲ ಆದರೆ ಆದರೆ ಅಲ್ಲು ಅರ್ಜುನ್ ಮತ್ತು ಸ್ನೇಹಿತರು ನಿಯಮ ಉಲ್ಲಂಘನೆ ಮಾಡಿ ಭೇಟಿ ನೀಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

ಅಲ್ಲು ಅರ್ಜುನ್ ಸದ್ಯ ಪುಷ್ಪ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಲಾರಿ ಡ್ರೈವರ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಅಲ್ಲು ಅರ್ಜುನ್ ಗೆ ನಾಯಕಿಯಾಗಿ ರಶ್ಮಿಕಾ ಮಂದಣ್ಣ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಎಲ್ಲಾ ತಯಾರಿಗಳನ್ನು ಮಾಡಿಕೊಂಡಿರುವ ಪುಷ್ಪ ತಂಡ ಸದ್ಯದಲ್ಲೇ ಚಿತ್ರೀಕರಣಕ್ಕೆ ಹೊರಡಲಿದೆ.

Recommended Video

ನನ್ನ ನಂಬಿ ಸರ್ಕಾರ ದೊಡ್ಡ ಜವಾಬ್ದಾರಿ ಕೊಟ್ಟಿದೆ | Shruthi Krishna | Filmibeat Kannada

More from Filmibeat

English summary
Complaint Against Allu Arjun In Police Station For Scouting Some Of The Locations For His Pushpa Movie.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X