Don't Miss!
- Automobiles Elevate: ಶ್ರೀಸಾಮಾನ್ಯನ ಬಿಎಂಡಬ್ಲ್ಯೂ.. ಹೋಂಡಾ ಎಲಿವೇಟ್ ಖರೀದಿಸಬೇಕೇ? ಆನ್-ರೋಡ್ ಬೆಲೆ ಎಷ್ಟು, EMI ಏನು?
- Finance ಆಪ್ ಸ್ಟೋರ್ನಿಂದ ವಾಟ್ಸಾಪ್, ಥ್ರೆಡ್ ತೆಗೆದುಹಾಕಿದ ಆಪಲ್!
- Sports IPL 2024: ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದರೂ ಹಾರ್ದಿಕ್ ಪಾಂಡ್ಯಗೆ ಭಾರೀ ಮೊತ್ತದ ದಂಡ!
- Technology Google Maps: ಗೂಗಲ್ ಮ್ಯಾಪ್ಸ್ ನಲ್ಲಿ ಹೊಸ ಸೌಲಭ್ಯ! ಹತ್ತಿರದ EV ಚಾರ್ಜಿಂಗ್ ಸ್ಟೇಷನ್ ಸರ್ಚ್ ಬಲು ಸುಲಭ
- News BMRCL: ಚಲ್ಲಘಟ್ಟ ಮೆಟ್ರೋ ನಿಲ್ದಾಣದ ಬಳಿ ಪಾದಚಾರಿ ಸೇತುವೆ ನಿರ್ಮಾಣ-ಪ್ರಯೋಜನೆಗಳೇನು ಹಾಗೂ ವೆಚ್ಚ ಎಷ್ಟು?
- Lifestyle ಶಾಲೆಯನ್ನೇ ಬ್ಯೂಟಿ ಪಾರ್ಲರ್ ಮಾಡಿಕೊಂಡ ಪ್ರಿನ್ಸಿಪಾಲ್..! ಕೇಳಿದ ಶಿಕ್ಷಕಿ ಕೈ ಕಚ್ಚಿ ಹಲ್ಲೆ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಾಡಿಗೆ ಎಂಟ್ರಿ ಕೊಟ್ಟಿದ್ದ ನಟ ಅಲ್ಲು ಅರ್ಜುನ್ ವಿರುದ್ಧ ದೂರು ದಾಖಲು
ತೆಲಂಗಾಣದ ಅಡಿಲಾಬಾದ್ ಕಾಡಿಗೆ ಭೇಟಿ ನೀಡಿದ್ದ ನಟ ಅಲ್ಲು ಅರ್ಜುನ್ ವಿರುದ್ಧ ದೂರು ದಾಖಲಾಗಿದೆ. ಕೊರೊನಾ ವೈರಸ್ ಸಮಯದಲ್ಲಿಭೇಟಿ ನೀಡಿ ನಿಯಮ ಉಲ್ಲಂಘನೆ ಮಾಡಿದ್ದಾರೆ ಎನ್ನುವ ಕಾರಣಕ್ಕೆ ಅಲ್ಲು ವಿರುದ್ಧ ಅಡಿಲಾಬಾದ್ ನ ನೆರಾಡಿಕೊಂಡ ಪೊಲೀಸ್ ಸ್ಟೇಷನ್ ನಲ್ಲಿ ದೂರು ದಾಖಲಾಗಿದೆ.
ನಟ ಅಲ್ಲು ಅರ್ಜುನ್ ಇತ್ತೀಚಿಗೆ ತೆಲಂಗಾಣದ ಅಡಿಲಾಬಾದ್ ಕಾಡಿಗೆ ಭೇಟಿ ನೀಡಿದ್ದರು. ಅಲ್ಲು ಅರ್ಜುನ್ ಎಂಟ್ರಿ ಕೊಡುತ್ತಿದ್ದಂತೆ ಅಭಿಮಾನಿಗಳು ನೆಚ್ಚಿನ ನಟನನ್ನು ನೋಡಲು ಮುಗಿಬಿದ್ದಾರೆ. ಯಾವುದೇ ಸಾಮಾಜಿಕ ಅಂತರ, ಮಾಸ್ಕ್ ಧರಿಸಿದೆ ಅಭಿಮಾನಿಗಳು ಅಲ್ಲು ಅರ್ಜುನ್ ಮುತ್ತಿಕೊಂಡಿದ್ದಾರೆ. ಫೋಟೋ ಕ್ಲಿಕ್ಕಿಸಿಕೊಂಡು ಸಂತಸ ಪಟ್ಟಿದ್ದಾರೆ. ಈ ವಿಡಿಯೋ ಎಲ್ಲಾ ಕಡೆ ವೈರಲ್ ಆಗುತ್ತಿದೆ.
ಕಾಡಿಗೆ ಎಂಟ್ರಿ ಕೊಟ್ಟ ಅಲ್ಲು ಅರ್ಜುನ್ ನೋಡಲು ಮುಗಿಬಿದ್ದ ಅಭಿಮಾನಿಗಳು
ಅಲ್ಲು ಅರ್ಜುನ್ ಮುಂಬರುವ ಪುಷ್ಪ ಸಿನಿಮಾಗಾಗಿ ಸ್ಥಳ ನೋಡಲು ಕಾಡಿಗೆ ಭೇಟಿ ನೀಡಿದ್ದರು ಎಂದು ಹೇಳಲಾಗುತ್ತಿದೆ. ಸ್ನೇಹಿತರು ಮತ್ತು ಸಿನಿಮಾತಂಡದ ಜೊತೆ ಅಲ್ಲು ಅಡಿಲಾಬಾದ್ ಕಾಡಿಗೆ ಎಂಟ್ರಿ ಕೊಟ್ಟಿದ್ದರು. ಬಳಿಕ ಹರಿತ ವನಮ್ ಪಾರ್ಕ್ ಮತ್ತು ಕುಂತಲಾ ಜಲಪಾತಕ್ಕೆ ಭೇಟಿ ನೀಡಿದ್ದಾರೆ.
ಕೊರೊನಾ ಹಿನ್ನಲೆ ಈ ಸ್ಥಳಗಳನ್ನು ಸಾರ್ವಜನಿಕ ಪ್ರವೇಶಕ್ಕೆ ಮುಚ್ಚಲಾಗಿದೆ. ಯಾರಿಗೂ ಪ್ರವೇಶವಿಲ್ಲ ಆದರೆ ಆದರೆ ಅಲ್ಲು ಅರ್ಜುನ್ ಮತ್ತು ಸ್ನೇಹಿತರು ನಿಯಮ ಉಲ್ಲಂಘನೆ ಮಾಡಿ ಭೇಟಿ ನೀಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.
Recommended Video
ಅಲ್ಲು ಅರ್ಜುನ್ ಸದ್ಯ ಪುಷ್ಪ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಲಾರಿ ಡ್ರೈವರ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಅಲ್ಲು ಅರ್ಜುನ್ ಗೆ ನಾಯಕಿಯಾಗಿ ರಶ್ಮಿಕಾ ಮಂದಣ್ಣ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಎಲ್ಲಾ ತಯಾರಿಗಳನ್ನು ಮಾಡಿಕೊಂಡಿರುವ ಪುಷ್ಪ ತಂಡ ಸದ್ಯದಲ್ಲೇ ಚಿತ್ರೀಕರಣಕ್ಕೆ ಹೊರಡಲಿದೆ.