Don't Miss!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- News ಲೋಕಸಭಾ ಚುನಾವಣೆ 2024: ಮತದಾನಕ್ಕೆ ಸಕಲ ಮಂಡ್ಯ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಜೆರ್ಸಿ' ಸಿನಿಮಾ ನಟನ ವಿರುದ್ಧ ವಂಚನೆ ಪ್ರಕರಣ ದಾಖಲು
ತೆಲುಗಿನ 'ಜೆರ್ಸಿ' ಸಿನಿಮಾದ ನಟನ ವಿರುದ್ಧ ಪ್ರಕರಣ ದಾಖಲಾಗಿದೆ. ನಟ ವಿಶ್ವನಾಥ ದುದ್ದಂಪುಡಿ ಮೇಲೆ ಹೈದರಾಬಾದ್ ಪೊಲೀಸರು ವಂಚನೆ ಪ್ರಕರಣ ದಾಖಲಿಸಿದ್ದಾರೆ.
ನಾನಿ, ಶ್ರದ್ಧಾ ಕಪೂರ್ ನಟಿಸಿದ್ದ ಹಿಟ್ ಸಿನಿಮಾ 'ಜೆರ್ಸಿ' ನಲ್ಲಿ ನಟಿಸಿದ್ದ ವಿಶ್ವನಾಥ ದುದ್ದಂಪುಡಿ ಜನರಿಂದ ಹಣ ಪಡೆದು ವಂಚನೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ವಿಶ್ವನಾಥ ವಿರುದ್ಧ ಹಲವಾರು ಮಂದಿ ಪೊಲೀಸರಿಗೆ ದೂರು ನೀಡಿದ್ದಾರೆ.
ನಟ ವಿಶ್ವನಾಥ ದುದ್ದುಂಪುಡಿ ಹಲವಾರು ಮಂದಿಯಿಂದ ಹಣ ಪಡೆದು ಅವರಿಗೆ ಎಲೆಕ್ಟ್ರಾನಿಕ್ ವಸ್ತುಗಳನ್ನು ನೀಡುವುದಾಗಿ ಹೇಳಿದ್ದ ಆದರೆ ಹಣ ಪಡೆದ ನಂತರ ಎಲೆಕ್ಟ್ರಾನಿಕ್ ವಸ್ತುಗಳನ್ನು ನೀಡಲಿಲ್ಲ. ಕಾದು-ಕಾದು ಸುಸ್ತಾದ ಜನರು ಬಂಜಾರ ಹಿಲ್ಸ್ ಪೊಲೀಸ್ ಠಾಣೆಯಲ್ಲಿ ವಿಶ್ವನಾಥ್ ವಿರುದ್ಧ ದೂರು ನೀಡಿದ್ದಾರೆ. ನಟ ವಿಶ್ವನಾಥ್ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಆತನನ್ನು ಬಂಧಿಸಲಾಗಿಲ್ಲ.
ನಟ ವಿಶ್ವನಾಥ್ 2015 ರಲ್ಲಿ ಕೇರಿಂತೆ ಸಿನಿಮಾ ಮೂಲಕ ಟಾಲಿವುಡ್ ಪ್ರವೇಶಿಸಿದರು. 2016 ರಲ್ಲಿ ಮೋಹನ್ಲಾಲ್ ಜೊತೆಗೆ ಮನಮಂತಾ ಸಿನಿಮಾದಲ್ಲಿ ನಟಿಸಿದ್ದಾರೆ. ಆ ನಂತರ ಕ್ರೇಜಿ ಕ್ರೇಜಿ ಫೀಲಿಂಗ್ಸ್, ತೊಲು ಬೊಮ್ಮಲಾಟ, ಒ ಪಿಟ್ಟ ಕತಾ, ಜೆರ್ಸಿ ಸಿನಿಮಾಗಳಲ್ಲಿ ನಟಿಸಿದರು.
Recommended Video
ವಿಶ್ವನಾಥ ಪ್ರಸ್ತುತ ಬಾಯ್ಫ್ರೆಂಡ್ ಟು ಹೈರ್ ಹಾಗೂ ಕಾದಲ್ ಸಿನಿಮಾಗಳಲ್ಲಿ ನಟಿಸಲಿದ್ದಾರೆ. ವಿಶ್ವನಾಥ ಗೆ ಹಲವಾರು ಅಭಿಮಾನಿಗಳು ಸಹ ಇದ್ದಾರೆ. ಆದರೆ ಈ ವಂಚನೆ ಪ್ರಕರಣ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.