Don't Miss!
- Automobiles HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- News Bengaluru Rain: ಮುದ್ದಿನ ನಾಯಿಮರಿಗೆ ಮೊದಲ ಮಳೆ ತೋರಿಸಿ ಖುಷಿ ಪಟ್ಟ ವ್ಯಕ್ತಿ; ವಿಡಿಯೋ ವೈರಲ್
- Lifestyle ಮಕ್ಕಳಲ್ಲಿ ಮಲೇರಿಯಾ: ಹೇಗೆ ಬರುತ್ತದೆ, ಇದರ ಲಕ್ಷಣಗಳೇನು? ತಡೆಗಟ್ಟುವುದು ಹೇಗೆ?
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪವನ್ ನಟನೆಯ 'ವಕೀಲ್ ಸಾಬ್' ವಿರುದ್ಧ ಚುನಾವಣಾ ಆಯೋಗಕ್ಕೆ ದೂರು
ಪವನ್ ಕಲ್ಯಾಣ್ ನಟನೆಯ 'ವಕೀಲ್ ಸಾಬ್' ಸಿನಿಮಾದ ಏಪ್ರಿಲ್ 09 ರಂದು ಬಿಡುಗಡೆ ಆಗಿ ಅದ್ಧೂರಿ ಪ್ರದರ್ಶನ ಕಾಣುತ್ತಿದೆ.
ಪವನ್ ಕಲ್ಯಾಣ್ ನಟರಾಗಿರುವ ಜೊತೆಗೆ ಸಕ್ರಿಯ ರಾಜಕಾರಣಿಯೂ ಆಗಿರುವ ಕಾರಣ 'ವಕೀಲ್ ಸಾಬ್' ಸಿನಿಮಾಕ್ಕೆ ರಾಜಕೀಯ ರೀತಿಯ ಸಮಸ್ಯೆಗಳು ಸಹ ಎದುರಾಗುತ್ತಿವೆ.
ಆಂಧ್ರ ಸರ್ಕಾರದ ಆದೇಶ ಆಧರಿಸಿ 'ವಕೀಲ್ ಸಾಬ್' ಸಿನಿಮಾದ ವಿಶೇಷ ಪ್ರದರ್ಶನಗಳನ್ನು ರದ್ದು ಮಾಡಲಾಗಿದೆ. ಇದರ ಹಿಂದೆ ರಾಜಕೀಯ ಹುನ್ನಾರ ಇದೆ ಎಂದು ಪವನ್ ಕಲ್ಯಾಣ್ ಅಭಿಮಾನಿಗಳು ಈಗಾಗಲೇ ಆರೋಪಿಸಿದ್ದಾರೆ. ಈ ನಡುವೆ ಸಿನಿಮಾದ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ.
ತಿರುಪತಿ ಲೋಕಸಭಾ ಕ್ಷೇತ್ರದ ಮತದಾನ ಈಗಷ್ಟೆ ಮುಗಿದಿದೆ. ಚುನಾವಣಾ ಫಲಿತಾಂಶ ನಾಳೆ (ಏಪ್ರಿಲ್ 10) ಕ್ಕೆ ಪ್ರಕಟವಾಗಲಿದೆ. ಚುನಾವಣೆಯಲ್ಲಿ ಪವನ್ ಕಲ್ಯಾಣ್ರ ಸಾರಥ್ಯದ 'ಜನಸೇನಾ' ಪಕ್ಷದ ಅಭ್ಯರ್ಥಿ ಸಹ ಇದ್ದಾರೆ. ಚುನಾವಣೆ ಮುಗಿಯುವ ಮುನ್ನವೇ ವಕೀಲ್ ಸಾಬ್ ಸಿನಿಮಾ ಬಿಡುಗಡೆ ಮಾಡಿರುವುದು ಚುನಾವಣಾ ನೀತಿ ಉಲ್ಲಂಘನೆ ಎಂದು ಆರೋಪಿಸಿ ನಲ್ಲೂರು ಜಿಲ್ಲೆ ವೆಂಕಟಗಿರಿಯ ನರೇಂದ್ರ ಎಂಬುವರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
ಆದರೆ ನರೇಂದ್ರ ನೀಡಿರುವ ದೂರನ್ನು ತಳ್ಳಿ ಹಾಕಿದೆ ಚುನಾವಣಾ ಆಯೊಗ. ತಿರುಪತಿ ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ ಜನಸೇನಾ, ಬಿಜೆಪಿ ಸಹಯೋಗದೊಂದಿಗೆ ಅಭ್ಯರ್ಥಿ ಕಣಕ್ಕೆ ಇಳಿದಿದ್ದಾರೆ. ತಿರುಪತಿಯಲ್ಲಿ ಪವನ್ ಕಲ್ಯಾಣ್ ಪ್ರಚಾರ ಸಹ ಮಾಡಿದ್ದರು.