Don't Miss!
- Sports RCB vs KKR: ಗೇಮ್ ಚೇಂಜರ್ ಆಗಬಹುದು ಈ ಪ್ಲೇಯರ್ಸ್; ಈ ಆಟಗಾರರ ಮೇಲೆ ಕಣ್ಣು
- News Acid Attack: ಆಸ್ತಿ ವಿವಾದ: ಮಗನ ಮೇಲೆ 'ಆಸಿಡ್' ಎರಚಿದ ತಂದೆ
- Automobiles ಜೀವದ ಗೆಳೆಯನಿಗೆ ಸರ್ಪ್ರೈಸ್ ಆಗಿ 'ಬೈಕ್' ಉಡುಗೊರೆ ನೀಡಿದ ವಧು.. ಆತನ ಸಂತೋಷಕ್ಕೆ ಪಾರವೇ ಇರಲಿಲ್ಲ!
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Lifestyle ಮೈ ತೂಕ ಕಡಿಮೆಯಾಗಲು ಈ ಪುದೀನಾ ನೀರು ಸಹಕಾರಿಯೇ? ಇದರ ಇತರ ಪ್ರಯೋಜನಗಳೇನು?
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ವಕೀಲ್ ಸಾಬ್' ಸಿನಿಮಾ ವಿರುದ್ಧ ದೂರು ದಾಖಲು
'ವಕೀಲ್ ಸಾಬ್' ಸಿನಿಮಾದಲ್ಲಿ ನಟ ಪವನ್ ಕಲ್ಯಾಣ್ ನ್ಯಾಯಾಲಯದಲ್ಲಿ ಹೋರಾಡಿ ಹಲವರಿಗೆ ನ್ಯಾಯ ದೊರಕಿಸಿಕೊಡುತ್ತಾರೆ. ಆದರೆ ಈಗ ಆ 'ವಕೀಲ್ ಸಾಬ್' ಸಿನಿಮಾ ವಿರುದ್ಧವೇ ದೂರು ದಾಖಲಾಗಿದೆ.
ಹೌದು, 'ವಕೀಲ್ ಸಾಬ್' ಸಿನಿಮಾ ವಿರುದ್ಧ ಸುಧಾಕರ್ ಹೆಸರಿನ ಉದ್ಯಮಿಯೊಬ್ಬರು ಪಂಜಾಗುಟ್ಟಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
'ವಕೀಲ್ ಸಾಬ್' ಸಿನಿಮಾದ ದೃಶ್ಯವೊಂದರಲ್ಲಿ ಉದ್ಯಮಿ ಸುಧಾಕರ್ ಅವರ ಮೊಬೈಲ್ ಸಂಖ್ಯೆಯನ್ನು ಬಳಸಲಾಗಿದೆ. ಇದರಿಂದಾಗಿ ಸುಧಾಕರ್ ಬಹಳ ಸಂಕಷ್ಟಕ್ಕೆ ಈಡಾಗಿದ್ದಾರೆ. ಅವರ ಮೊಬೈಲ್ಗೆ ಬಿಡುವಿಲ್ಲದೆ ಕರೆಗಳು ಕರೆ ಬರುತ್ತಿದ್ದು, ಕರೆ ಮಾಡಿದವರು ಕೆಟ್ಟದಾಗಿ ಬೈಯುತ್ತಿದ್ದಾರಂತೆ. ಹೀಗಾಗಿ ಪಂಜಾಗುಟ್ಟ ಪೊಲೀಸ್ ಠಾಣೆಯಲ್ಲಿ ಸಿನಿಮಾ ವಿರುದ್ಧ ದೂರು ದಾಖಲಿಸಿದ್ದಾರೆ ಸುಧಾಕರ್.
ಖಾಸಗಿತನದ ಹಕ್ಕು ಉಲ್ಲಂಘನೆ ಅಡಿಯಲ್ಲಿ ಪ್ರಕರಣ ಸಹ ದಾಖಲಿಸಿಕೊಂಡಿರುವ ಪೊಲೀಸರು 'ವಕೀಲ್ ಸಾಬ್' ಸಿನಿಮಾ ನಿರ್ಮಾಪಕ ದಿಲ್ ರಾಜು, ಸಿರಿಶ್ ಹಾಗೂ ನಿರ್ದೇಶಕ ವೇಣು ಶ್ರೀರಾಮ್ಗೆ ನೊಟೀಸ್ ಕಳುಹಿಸಿದ್ದಾರೆ.
ಸಿನಿಮಾದಲ್ಲಿ ಖಳಪಾತ್ರಧಾರಿಯೊಬ್ಬ ನಾಯಕಿಯ ತೇಜೋವಧೆ ಮಾಡಲು ಆಕೆಯ ಮೊಬೈಲ್ ನಂಬರ್ ಅನ್ನು ವೇಶ್ಯೆಯ ನಂಬರ್ ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸುತ್ತಾನೆ. ಆ ನಂಬರ್ ಮೂಲದಲ್ಲಿ ಉದ್ಯಮಿ ಸುಧಾಕರ್ ಮೊಬೈಲ್ ನಂಬರ್ ಆಗಿದೆ.
ಪ್ರತಿದಿನ ಸಾವಿರಾರು ಮಂದಿ ಸುಧಾಕರ್ ಸಂಖ್ಯೆಗೆ ಕರೆ ಮಾಡಿ ಕೆಟ್ಟದಾಗಿ ಮಾತನಾಡುವುದು, ಬೈಯ್ಯುವುದು ಮಾಡುತ್ತಿದ್ದಾರಂತೆ. 'ನನ್ನ ಅನುಮತಿ ಇಲ್ಲದೆ ನನ್ನ ಮೊಬೈಲ್ ನಂಬರ್ ಅನ್ನು ಸಿನಿಮಾದಲ್ಲಿ ಬಳಸಿ ನನ್ನ ಖಾಸಗಿತನವನ್ನು ಹಾಳು ಮಾಡಿದ್ದಾರೆ' ಎಂದು ಸುಧಾಕರ್ ಆರೋಪಿಸಿದ್ದಾರೆ.
Recommended Video
ಏಪ್ರಿಲ್ 9 ರಂದು 'ವಕೀಲ್ ಸಾಬ್' ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿತ್ತು. ಸಿನಿಮಾವು ಚಿತ್ರಮಂದಿರದಲ್ಲಿ ಅದ್ಭುತ ಪ್ರದರ್ಶನ ನೀಡಿ ಬಳಿಕ ಈಗ ಅಮೆಜಾನ್ ಪ್ರೈಂನಲ್ಲಿ ಬಿಡುಗಡೆ ಆಗಿದೆ.