Don't Miss!
- News Toilet Photo Viral: ಕಡಿಮೆ ಖರ್ಚಿನಲ್ಲಿ 'ಲೀಕೆಜ್ ಟ್ಯಾಂಕರ್'ನಿಂದ ಟಾಯ್ಲೆಟ್ ನಿರ್ಮಾಣ: ನೀವೂ ಟ್ರೈ ಮಾಡಿ
- Sports IPL 2024: ಹೈದರಾಬಾದ್-ಡೆಲ್ಲಿ ನಡುವೆ ಮೆಗಾ ಫೈಟ್; ಟಾಸ್, ಆಡುವ 11ರ ಬಳಗದ ವರದಿ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಟಾಲಿವುಡ್ ನಟ ಕೃಷ್ಣಂ ರಾಜು ನಿಧನ ಹಿನ್ನೆಲೆ: ಪ್ರಭಾಸ್ ಭೇಟಿ ಮಾಡಿದ ರಕ್ಷಣ ಸಚಿವ!
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇತ್ತೀಚೆಗೆ ನಿಧನರಾಗಿರೋ ಟಾಲಿವುಡ್ ಹಿರಿಯ ನಟ ಕೃಷ್ಣಂ ರಾಜು ಅವರ ಕುಟುಂಬವನ್ನು ಭೇಟಿ ಮಾಡಿದ್ದಾರೆ. ಹೈದರಾಬಾದ್ಗೆ ಬಂದಿಳಿದ ರಕ್ಷಣಾ ಸಚಿವ ಕೃಷ್ಣಂ ರಾಜು ಅವರ ಕುಟುಂಬ ಹಾಗೂ ಪ್ರಭಾಸ್ಗೆ ಸಂತ್ವಾನ ಹೇಳಿದ್ದಾರೆ.
ಈ ವಿಷಯವನ್ನು ಸ್ವತ: ರಾಜನಾಥ್ ಸಿಂಗ್ ಅವರೇ ತಮ್ಮ ಟ್ವಿಟರ್ ಖಾತೆ ಮೂಲಕ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ ಪ್ರಭಾಸ್ ಹಾಗೂ ಕೃಷ್ಣಂ ರಾಜು ಕುಟುಂಬವನ್ನು ಭೇಟಿ ಮಾಡಿ ಸಂತ್ವಾನ ಹೇಳಿದ ಫೋಟೊಗಳನ್ನು ಶೇರ್ ಕೂಡ ಮಾಡಿಕೊಂಡಿದ್ದಾರೆ.
" ನಾನು ಪ್ರಭಾಸ್ ಅವರನ್ನು ಹಾಗೂ ನಮ್ಮನ್ನು ಅಗಲಿದ ಕೃಷ್ಣಂ ರಾಜು ಅವರ ಕುಟುಂಬದ ಎಲ್ಲಾ ಸದಸ್ಯರನ್ನು ಇಂದು ಹೈದರಾಬಾದ್ನಲ್ಲಿ ಭೇಟಿ ಮಾಡಿದೆ. ಈ ವೇಳೆ ಮೃತರ ಕುಟುಂಬಕ್ಕೆ ನನ್ನ ಸಂತಾಪ ಸೂಚಿಸಿದ್ದೇನೆ. ಆ ದೇವರು ದು:ಖವನ್ನು ಭರಿಸುವ ಶಕ್ತಿ ನೀಡಲಿ." ಎಂದು ರಕ್ಷಣಾ ಸಚಿವಾ ರಾಜ್ನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ.
ಕೃಷ್ಣಂ ರಾಜು ಅವರ ಪತ್ನಿ ಶ್ಯಾಮಲಾದೇವಿ, ಅವರ ಹೆಣ್ಣು ಮಕ್ಕಳು ಮತ್ತು ಪ್ರಭಾಸ್ ಅವರಿಗೆ ರಕ್ಷಣಾ ಸಚಿವರು ತಮ್ಮ ಸಂತಾಪಗಳು ಸೂಚಿಸಿದ್ದಾರೆ. ಈ ವೇಳೆ ತೆಗೆದ ಫೋಟೊಗಳು ಹಾಗೂ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಈ ವೇಳೆ ಮಂತ್ರಿ ಕೃಷ್ಣಾರೆಡ್ಡಿ ಹಾಗೂ ಎಂಪಿ ಕೆ ಲಕ್ಷ್ಮಣ್ ಇಬ್ಬರೂ ರಾಜ್ನಾಥ್ ಸಿಂಗ್ಗೆ ಸಾಥ್ ನೀಡಿದ್ದರು.
ಅನಾರೋಗ್ಯದಿಂದ ಬಳಲುತ್ತಿದ್ದ ಕೃಷ್ಣಂ ರಾಜು ಸೆಪ್ಟೆಂಬರ್ 11ರಂದು ಕೊನೆಯುಸಿರೆಳೆದಿದ್ದರು. ಹೈದರಾಬಾದ್ನ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ಇವರ ನಿಧನ ಟಾಲಿವುಡ್ಗೆ ದೊಡ್ಡ ಶಾಕ್ ಆಗಿತ್ತು. ಟಾಲಿವುಡ್ ತಾರೆಯರಾದ ಚಿರಂಜೀವಿ, ಮಹೇಶ್ ಬಾಬು, ಜೂ.ಎನ್ಟಿಆರ್, ಅನುಷ್ಕಾ ಶೆಟ್ಟಿ, ಸಾಯಿ ಧರಂ ತೇಜ್, ವಿಜಯ್ ದೇವರಕೊಂಡ ಹಾಗೂ ಅಲ್ಲು ಅರ್ಜುನ್ ಸೇರಿದಂತೆ ಹಲವರು ಅಂತಿಮ ನಮನ ಸಲ್ಲಿಸಿದ್ದರು.