Don't Miss!
- Lifestyle ನರಿ ಮತ್ತು ಕೋಳಿಗೂ ಮೂರ್ಖರ ದಿನಕ್ಕೂ ಇದೆ ನಂಟು..! ಏನದು.?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Automobiles ಶಿಯೋಮಿಯ ಈ ಎಲೆಕ್ಟ್ರಿಕ್ ಕಾರು ಸ್ಮಾರ್ಟ್ಫೋನ್ಗಳಂತೆ ಅಗ್ಗದ ಬೆಲೆ: ರೇಂಜ್ ಕೇಳಿದ್ರೆ ತಲೆ ತಿರುಗುತ್ತೆ!
- Technology ಈ Amoled ಡಿಸ್ಪ್ಲೇ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!..ಈ ಆಫರ್ಗೆ ನೀವು ಫಿದಾ ಆಗ್ತೀರಾ!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದಿಲ್ ರಾಜು ಮಾತಿನ ಕಾರಣದಿಂದ ವಿಜಯ್ ಸಿನಿಮಾಕ್ಕೆ ಚಿತ್ರಮಂದಿರ ಸಮಸ್ಯೆ!
ಡಿಸೆಂಬರ್ ತಿಂಗಳು ದಕ್ಷಿಣ ಭಾರತ ಚಿತ್ರರಂಗದಲ್ಲಿ ತುಂಬಾ ಲಾಭದಾಯಕವಾಗೇನೂ ಇರಲಿಲ್ಲ. ಯಾವ ದೊಡ್ಡ ಸ್ಟಾರ್ ನಟರ ಸಿನಿಮಾಗಳು ಈ ತಿಂಗಳು ಬಿಡುಗಡೆ ಆಗಲಿಲ್ಲ. ಆದರೆ ಡಿಸೆಂಬರ್ ರೀತಿ ಡ್ರೈ ಆಗಿರುವುದಿಲ್ಲ ಜನವರಿ. ದೊಡ್ಡ ಮಟ್ಟದ ಸಿನಿಮಾ ಫೈಟ್ಗೆ ಜನವರಿ ಸಾಕ್ಷಿಯಾಗಲಿದೆ.
ದಕ್ಷಿಣ ಭಾರತ ಚಿತ್ರರಂಗದ ಸಾಲು-ಸಾಲು ಸಿನಿಮಾಗಳು ಜನವರಿ ತಿಂಗಳಲ್ಲಿ ಬಿಡುಗಡೆಗೆ ಕಾದು ಕೂತಿವೆ. ಅದರಲ್ಲೂ ಸಂಕ್ರಾಂತಿ ಹಬ್ಬಕ್ಕೆ ದೊಡ್ಡ ಸ್ಟಾರ್ ನಟರ ಸಿನಿಮಾಗಳು ತೆರೆಗೆ ಬರಲಿವೆ. ಸಂಕ್ರಾಂತಿ ಹಬ್ಬಕ್ಕೆ ಸಿನಿಮಾಗಳ ಮಧ್ಯೆ ಫೈಟ್ ನಡೆಯಲಿದ್ದು, ಚಿತ್ರಮಂದಿರಗಳಿಗಾಗಿ ಈಗಿನಿಂದಲೇ ಫೈಟ್ ಪ್ರಾರಂಭವಾಗಿದೆ.
Veerayya Vs Veerasimha: ಒಂದೇ ಸಂಸ್ಥೆಯ 2 ಚಿತ್ರಗಳ ಮಧ್ಯೆ ಫೈಟ್: ಏನಿದು ಸಂಕ್ರಾಂತಿ ಲೆಕ್ಕಾಚಾರ?
ಸಂಕ್ರಾಂತಿ ಹಬ್ಬಕ್ಕೆ ಮೆಗಾಸ್ಟಾರ್ ಚಿರಂಜೀವಿ, ಬಾಲಕೃಷ್ಣ ಅವರ ಸಿನಿಮಾಗಳು ಬಿಡುಗಡೆ ಆಗಲಿದ್ದು, ತೆಲುಗು ರಾಜ್ಯಗಳಲ್ಲಿ ಚಿತ್ರಮಂದಿರಗಳಿಗಾಗಿ ಕಿತ್ತಾಟ ಪ್ರಾರಂಭವಾಗಿದ್ದು, ಈ ನಡುವೆ ಡಬ್ಬಿಂಗ್ ಸಿನಿಮಾಗಳಿಗೆ ಸಂಕ್ರಾಂತಿ ಸಮಯದಲ್ಲಿ ಚಿತ್ರಮಂದಿರಗಳನ್ನು ಕೊಡುವುದಿಲ್ಲ ಎಂದು ಕೆಲವು ನಿರ್ಮಾಪಕರು, ಚಿತ್ರಮಂದಿರದವರು ಹೇಳಿದ್ದಾರೆ. ಆದ ಕಾರಣ ಈಗ ತಮಿಳಿನ ವಿಜಯ್ ನಟನೆಯ 'ವಾರಿಸು' ಸಿನಿಮಾಕ್ಕೆ ಚಿತ್ರಮಂದಿರ ಸಿಗುವುದು ಸಮಸ್ಯೆಯಾಗಿದೆ. ಅಂದಹಾಗೆ ಈ ಸಿನಿಮಾ ನಿರ್ಮಾಣವಾಗುತ್ತಿರುವುದು ತೆಲುಗು ಬ್ಯಾನರ್ನಲ್ಲಿ!
'ವಾರಿಸು' ಸಿನಿಮಾಕ್ಕೆ ಚಿತ್ರಮಂದಿರ ಸಮಸ್ಯೆ
'ವಾರಿಸು' ಸಿನಿಮಾವನ್ನು ತೆಲುಗಿನ ಜನಪ್ರಿಯ ನಿರ್ಮಾಪಕ ದಿಲ್ ರಾಜು ನಿರ್ಮಾಣ ಮಾಡುತ್ತಿದ್ದು, ತೆಲುಗಿನಲ್ಲಿ 'ವಾರಸುಡು' ಹೆಸರಲ್ಲಿ ಸಿನಿಮಾ ಬಿಡುಗಡೆ ಆಗಲಿದೆ. ಆದರೆ ಸಂಕ್ರಾಂತಿ ಹಬ್ಬದ ಸಮಯದಲ್ಲಿ ತೆಲುಗು ಸಿನಿಮಾಗಳಿಗೆ ಮೊದಲ ಆದ್ಯತೆ ನೀಡಬೇಕು ಎಂದು ಕೆಲವು ನಿರ್ಮಾಪಕರು, ಸಿನಿಮಾ ವಿತರಕರು ಒತ್ತಾಯಿಸಿದ್ದು, ಹಬ್ಬದ ಸಮಯದಲ್ಲಿ ಡಬ್ಬಿಂಗ್ ಸಿನಿಮಾಗಳಿಗೆ ಚಿತ್ರಮಂದಿರಗಳನ್ನು ನೀಡಬಾರದು ಎಂದಿದ್ದಾರೆ.
ಕೆಲ ನಿರ್ಮಾಪಕರು, ವಿತರಕರು 'ವಾರಿಸು' ವಿರುದ್ಧ ಖ್ಯಾತೆ ತೆಗೆಯಲು ಕಾರಣವೂ ಇದೆ. ಕೆಲ ತಿಂಗಳ ಹಿಂದೆ ನಿರ್ಮಾಪಕರ ಸಂಘದ ಒತ್ತಾಯದಿಂದ ತೆಲುಗು ಸಿನಿಮಾಗಳ ಚಿತ್ರೀಕರಣ ಬಂದ್ ಮಾಡಿದ್ದಾಗ ನಿರ್ಮಾಪಕ ದಿಲ್ ರಾಜು ತಮ್ಮ ನಿರ್ಮಾಣದ 'ವಾರಿಸು' ಸಿನಿಮಾದ ಚಿತ್ರೀಕರಣ ಬಂದ್ ಮಾಡಿರಲಿಲ್ಲ. ಕಾರಣ ಕೇಳದಾಗ ಅದು ತೆಲುಗು ಸಿನಿಮಾ ಅಲ್ಲ ತಮಿಳು ಸಿನಿಮಾ ಎಂದಿದ್ದರು. ಹಾಗಾಗಿ ಈಗ ಕೆಲ ನಿರ್ಮಾಪಕರು 'ವಾರಿಸು' ಅನ್ನು ತಮಿಳು ಸಿನಿಮಾ ಆಗಿಯೇ ನೋಡುತ್ತಿದ್ದು, ನಾವು ಮೊದಲ ಆದ್ಯತೆಯನ್ನು ತೆಲುಗು ಸಿನಿಮಾ ನೀಡುತ್ತೇವೆ ಎಂದಿದ್ದಾರೆ.
ಡಬ್ಬಿಂಗ್ ಸಿನಿಮಾಗಳನ್ನು ವಿರೋಧಿಸಿದ್ದ ದಿಲ್ ರಾಜು
ಅದು ಮಾತ್ರವೇ ಅಲ್ಲದೆ 2019 ರಲ್ಲಿ ರಜನೀಕಾಂತ್ರ 'ಪೇಟಾ' ಸಿನಿಮಾ ಸಂಕ್ರಾಂತಿ ಸಮಯದಲ್ಲಿ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆ ಆದಾಗ ಇದೇ ದಿಲ್ ರಾಜು ವಿರೋಧಿಸಿದ್ದರು. ಡಬ್ಬಿಂಗ್ ಸಿನಿಮಾ ಬದಲಿಗೆ ತೆಲುಗು ಸಿನಿಮಾಗಳಿಗೆ ಆದ್ಯತೆ ನೀಡಿ ಎಂದಿದ್ದರು. ಅದೇ ಹೇಳಿಕೆಯನ್ನು ಆಧಾರವಾಗಿಟ್ಟುಕೊಂಡು ದಿಲ್ ರಾಜುಗೆ ಪಾಠ ಕಲಿಸಲು ಕೆಲವು ನಿರ್ಮಾಪಕರು ಮುಂದಾಗಿದ್ದು, 'ವಾರಿಸು' ಸಿನಿಮಾದ ಡಬ್ಬಿಂಗ್ ಆವೃತ್ತಿಗೆ ಹೆಚ್ಚು ಚಿತ್ರಮಂದಿರಗಳು ಸಿಗದಂತೆ ತಡೆಯುವ ಯತ್ನ ಮಾಡುತ್ತಿದ್ದಾರೆ.
ಚಿತ್ರಮಂದಿರಗಳನ್ನು ಬ್ಲಾಕ್ ಮಾಡುತ್ತಿರುವ ದಿಲ್ ರಾಜು
ಆದರೆ ದಿಲ್ ರಾಜು ಸಹ ಬಹಳ ಚಾಣಾಕ್ಷ ವಿತರಕ ಮತ್ತು ನಿರ್ಮಾಪಕ. ತಮ್ಮ ಸಿನಿಮಾಕ್ಕಾಗಿ ಈಗಿನಿಂದಲೇ ಚಿತ್ರಮಂದಿರಗಳನ್ನು ಬುಕ್ ಮಾಡಿಕೊಳ್ಳುತ್ತಿದ್ದಾರೆ. ಎಲ್ಲ ಪ್ರಮುಖ ನಗರಗಳ ಪ್ರಮುಖ ಚಿತ್ರಮಂದಿರಗಳನ್ನು ತಮ್ಮ ಸಿನಿಮಾಕ್ಕಾಗಿ ಬುಕ್ ಮಾಡಿಕೊಂಡು, ಬೇರೆ ತೆಲುಗು ಸಿನಿಮಾಗಳಿಗೆ ಮುಖ್ಯ ಚಿತ್ರಮಂದಿರಗಳು ಸಿಗದಂತೆ ತಡೆಯುತ್ತಿದ್ದಾರೆ. ಸಂಕ್ರಾಂತಿ ಹಬ್ಬದಂದು ತೆಲುಗಿನ ಸ್ಟಾರ್ ನಟ ಚಿರಂಜೀವಿ ನಟನೆಯ 'ವಾಲ್ತೇರು ವೀರಯ್ಯ' ಹಾಗೂ ನಂದಮೂರಿ ಬಾಲಕೃಷ್ಣ ನಟನೆಯ 'ವೀರ ಸಿಂಹ ರೆಡ್ಡಿ' ಸಿನಿಮಾಗಳು ಬಿಡುಗಡೆ ಆಗಲಿವೆ.