Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸೋನು ಸೂದ್ ಮಾನವೀಯತೆ ಕೆಲಸ ಗೌರವಿಸಿದ 'ಆಚಾರ್ಯ' ತಂಡ
ಕೊರೊನಾ ಲಾಕ್ಡೌನ್ ಅವಧಿಯಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಸಾವಿರಾರು ಜನರ ನೋವಿಗೆ ನಟ ಸೋನು ಸೂದ್ ಸ್ಪಂದಿಸಿದ್ದರು. ಊರಿಗೆ ಹೋಗಲು ದುಡ್ಡಿಲ್ಲದೇ ಒದ್ದಾಡುತ್ತಿದ್ದವರಿಗೆ ಬಸ್ ವ್ಯವಸ್ಥೆ, ಊಟದ ವ್ಯವಸ್ಥೆ, ಮಕ್ಕಳಿಗೆ ಲ್ಯಾಪ್ಟ್ಯಾಮ್, ಸ್ಮಾರ್ಟ್ಫೋನ್, ರೋಗಿಗಳ ಚಿಕಿತ್ಸೆಗೆ ಹಣ ಹೀಗೆ ಕಷ್ಟ ಎಂದು ಬಂದವರಿಗೆ ಸಹಾಯ ಮಾಡಿದ ರಿಯಲ್ ಹೀರೋ.
ಸೋನು ಸೂದ್ ಅವರ ಮಾನವೀಯತೆ ಕೆಲಸಕ್ಕೆ ಇಡೀ ದೇಶ ಸಲಾಂ ಹೊಡೆದಿದೆ. ಲಾಕ್ಡೌನ್ ಬಳಿಕ ಸೋನು ಸೂದ್ ನಟಿಸುತ್ತಿರುವ ಚಿತ್ರತಂಡಗಳ ಸಹ ಸೆಟ್ಗೆ ಸೋನು ಬಂದಾಗ ಗೌರವಿಸಿರುವ ಉದಾಹರಣೆಗಳು ವರದಿಯಾಗಿದ್ದವು.
ಸೋನು ಸೂದ್ಗೆ ಮತ್ತೊಂದು ಗೌರವ: ಪಂಜಾಬ್ ಚುನಾವಣಾ ರಾಯಭಾರಿಯಾಗಿ ಘೋಷಣೆ
ಇದೀಗ, ಮೆಗಾಸ್ಟಾರ್ ಚಿರಂಜೀವಿ ನಟನೆಯ ಆಚಾರ್ಯ ಸೆಟ್ಗೆ ಸೋನು ಸೂದ್ ಆಗಮಿಸಿದ್ದಾರೆ. ಈ ವೇಳೆ ಚಿತ್ರದ ನಿರ್ದೇಶಕ ಕೊರಟಲಾ ಶಿವ, ಹಿರಿಯ ನಟ ತನಿಕೆಲ್ಲ ಭರಣಿ ಸೇರಿದಂತೆ ಚಿತ್ರತಂಡ ಸೋನು ಸೂದ್ ಅವರನ್ನು ಸ್ವಾಗತಿಸಿ ಗೌರವಿಸಿದ್ದಾರೆ.
ಸೋನು ಸೂದ್ ಅವರ ಈ ಸಮಾಜ ಸೇವೆಗೆ ದೇಶದಲ್ಲಿ ಮಾತ್ರವಲ್ಲ ವಿಶ್ವದಾದ್ಯಂತ ಮೆಚ್ಚುಗೆ ವ್ಯಕ್ತವಾಗಿತ್ತು. ಬಾಲಿವುಡ್ ನಟನ ಮಾನವೀಯತೆ ಗುಣ ಗೌರವಿಸಿದ ವಿಶ್ವಸಂಸ್ಥೆ, ಅಭಿವೃದ್ದಿ ಕಾರ್ಯಕ್ರಮದ (ಯುಎನ್ಡಿಪಿ) ಪ್ರತಿಷ್ಠಿತ ಎಸ್ಡಿಜಿ (ವಿಶೇಷ ಮಾನವೀಯ ಕ್ರಿಯಾ) ಪ್ರಶಸ್ತಿ ನೀಡಿ ಶ್ಲಾಘಿಸಿತ್ತು.
ಸದ್ಯದಲ್ಲೇ ಪಂಜಾಬ್ ವಿಧಾನಸಭೆ ಚುನಾವಣೆ ನಡೆಯಲಿದ್ದು, ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಸೋನು ಸೂದ್ ಅನ್ನು ಪಂಜಾಬ್ ಚುನಾವಣಾ ರಾಯಭಾರಿಯನ್ನಾಗಿ ಚುನಾವಣಾ ಆಯೋಗವು ಘೋಷಿಸಿದೆ.
ಸೋನು ಸೂದ್ ಮಾನವೀಯತೆ ಕೆಲಸಕ್ಕೆ ಪ್ರತಿಷ್ಠಿತ ಪ್ರಶಸ್ತಿ ನೀಡಿದ ವಿಶ್ವಸಂಸ್ಥೆ
ಇನ್ನು ಆಚಾರ್ಯ ಚಿತ್ರತಂಡದ ಬಗ್ಗೆ ಹೇಳುವುದಾರೆ, ಮೆಗಾಸ್ಟಾರ್ ಚಿರಂಜೀವಿ ನಟಿಸುತ್ತಿರುವ ಸಿನಿಮಾ. ಕಾಜಲ್ ಅಗರ್ವಾಲ್ ನಾಯಕಿಯಾಗಿದ್ದು, ವಿಶೇಷ ಪಾತ್ರದಲ್ಲಿ ರಾಮ್ ಚರಣ್ ತೇಜ ಕಾಣಿಸಿಕೊಳ್ಳುತ್ತಿದ್ದಾರೆ.