Don't Miss!
- News ಮನೆ ಬಾಗಿಲಿಗೆ ಹೋದರೂ ಸಿಗಲಿಲ್ಲ ಬಿಜೆಪಿ ಶಾಸಕರು, ಸಂಸದರು: ಉ.ಕನ್ನಡ ಬಿಜೆಪಿ ಅಭ್ಯರ್ಥಿ ಕಾಗೇರಿಗಿಲ್ಲ ಅಸಮಾಧಾನಿತರ ಬೆಂಬಲ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Automobiles ಯುಎಸ್ಎ, ಕೆನಡಾಗೂ ಕಾಲಿಟ್ಟ ಭಾರತೀಯ ಬೈಕ್: ಮುಂದುವರೆದ ವಿಶ್ವಗುರು ಭಾರತದ ನಾಗಾಲೋಟ
- Lifestyle ವಿಶ್ವದಲ್ಲೇ ಅತೀ ಹೆಚ್ಚು ಬಾರಿ ಚುನಾವಣೆ ಸೋತ ವ್ಯಕ್ತಿ..! ಯಾರು ಈ ಸೋಲುವ ಸರದಾರ ಗೊತ್ತಾ?
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೆಜಿಎಫ್ ಮುಗಿಸಿ ಹೈದರಾಬಾದ್ಗೆ ಬಂದಿಳಿದ ಪ್ರಶಾಂತ್ ನೀಲ್
ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಹೈದರಾಬಾದ್ಗೆ ತೆರಳಿದ್ದಾರೆ. ಮುತ್ತಿನ ನಗರಿ ಹೈದರಾಬಾದ್ ಏರ್ಪೋರ್ಟ್ನಲ್ಲಿ ಪ್ರಶಾಂತ್ ಕಾಣಿಸಿಕೊಂಡಿದ್ದು, ಫೋಟೋಗಳು ವೈರಲ್ ಆಗಿದೆ.
ಕೆಜಿಎಫ್ ಚಿತ್ರೀಕರಣ ಬಹುತೇಕ ಮುಗಿಸಿರುವ ಪ್ರಶಾಂತ್ ನೀಲ್ ಈಗ ಸಲಾರ್ ಚಿತ್ರದ ಕೆಲಸ ಆರಂಭಿಸಲು ಸಜ್ಜಾಗಿದ್ದಾರೆ. ಸಲಾರ್ ಚಿತ್ರದ ಲೋಕೇಶನ್ ಹುಡುಕಲು ಪ್ರಶಾಂತ್ ನೆರೆರಾಜ್ಯಕ್ಕೆ ತೆರಳಿದ್ದಾರೆ ಎಂದು ಹೇಳಲಾಗುತ್ತಿದೆ.
'ಸಲಾರ್' ಚಿತ್ರದಲ್ಲಿ ಇಬ್ಬರು ನಾಯಕಿಯರು, ಒಬ್ಬರು ಬಾಲಿವುಡ್, ಇನ್ನೊಬ್ಬರು?
ಪ್ರಭಾಸ್ ನಾಯಕನಾಗಿ ನಟಿಸಲಿರುವ ಸಲಾರ್ ಚಿತ್ರ ಜನವರಿ ತಿಂಗಳಲ್ಲಿ ಆರಂಭವಾಗಲಿದೆ ಎಂದು ಈ ಮೊದಲೇ ತಿಳಿಸಿದ್ದರು. ಅದರಂತೆ ಚಿತ್ರದ ಕೆಲಸ ಸಹ ಪ್ರಾರಂಭವಾಗಿದೆ ಎನ್ನಲಾಗಿದೆ. ಹೈದರಾಬಾದ್ನಲ್ಲಿ ಮಾಧ್ಯಮಗಳು ವರದಿ ಮಾಡಿರುವಂತೆ ಜನವರಿ 22 ರಿಂದ ಸಲಾರ್ ಸಿನಿಮಾ ಅಧಿಕೃತವಾಗಿ ಶುರುವಾಗಲಿದೆ. ಚಿತ್ರದ ಮುಹೂರ್ತವನ್ನು ಮಾಡುವ ಮೂಲಕ ಸಿನಿಮಾ ಆರಂಭಿಸಲಿದ್ದಾರೆ.
ಇನ್ನುಳಿದಂತೆ ಕೆಜಿಎಫ್ ನಿರ್ಮಾಪಕ ಹೊಂಬಾಳೆ ಫಿಲಂಸ್ನ ವಿಜಯ್ ಕಿರಗಂದೂರ್ ಸಲಾರ್ ಚಿತ್ರ ನಿರ್ಮಿಸುತ್ತಿದ್ದಾರೆ. ಕೆಜಿಎಫ್ ಸಂಗೀತ ನಿರ್ದೇಶಕ ರವಿ ಬಸ್ರೂರ್, ಛಾಯಾಗ್ರಾಹಕ ಭುವನ್ ಗೌಡ ಈ ಚಿತ್ರಕ್ಕೂ ಕೆಲಸ ಮಾಡಲಿದ್ದಾರೆ.
ಪ್ರಭಾಸ್ ಮತ್ತು ಪ್ರಶಾಂತ್ ನೀಲ್ 'ಸಲಾರ್' ಸಿನಿಮಾಗೆ ವಿಲನ್ ಆಗ್ತಾರಾ ಈ ಸ್ಟಾರ್ ನಟ?
ನಾಯಕಿಯ ಆಯ್ಕೆ ಅಂತಿಮವಾಗಿಲ್ಲ. ಸದ್ಯದ ವರದಿ ಪ್ರಕಾರ ಸಲಾರ್ ಚಿತ್ರದಲ್ಲಿ ಇಬ್ಬರು ನಾಯಕಿಯರು ಇರಲಿದ್ದಾರೆ. ಬಾಲಿವುಡ್ ನಟಿ ದಿಶಾ ಪಟಾನಿ ಹೆಸರು ಚರ್ಚೆಯಲ್ಲಿದೆ. ಜಾನ್ ಅಬ್ರಾಹ ಖಳನಾಯಕನ ಪಾತ್ರದಲ್ಲಿ ನಟಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಮತ್ತೊಂದೆಡೆ ಪ್ರಭಾಸ್ ಸಹ ಬ್ಯಾಕ್ ಟು ಬ್ಯಾಕ್ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ರಾಧೇ ಶ್ಯಾಮ್ ಕೊನೆಯ ಹಂತದಲ್ಲಿದ್ದಾರೆ. ನಾಗ್ ಅಶ್ವಿನ್ ಜೊತೆಗಿನ ಪ್ರಾಜೆಕ್ಟ್ ಆರಂಭಿಸಬೇಕಿದೆ. ಆದಿಪುರುಷ್ ಆರಂಭಿಸಬೇಕಿದೆ. ಈ ನಡುವೆ ಸಲಾರ್ ಚಿತ್ರವೂ ಪ್ರಾರಂಭಿಸಬೇಕಿದೆ.