Don't Miss!
- News Gold Price: ಇಂದು ಮತ್ತಷ್ಟು ಹೆಚ್ಚಾದ ಬಂಗಾರದ ಬೆಲೆ: ಬೆಳ್ಳಿಯೂ ಬಲು ದುಬಾರಿ
- Technology AI Camera: ಎಐ ಕ್ಯಾಮೆರಾ ಆಯ್ಕೆ ಇರುವ ಅತ್ಯುತ್ತಮ ಸ್ಮಾರ್ಟ್ಫೋನ್ಗಳಿವು! ಬೆಲೆ ಎಷ್ಟು ?
- Sports IPL 2024: RCB vs KKR ಹೆಡ್-ಟು-ಹೆಡ್ ದಾಖಲೆ, ಪಿಚ್ ವರದಿ; ಚಿನ್ನಸ್ವಾಮಿಯಲ್ಲಿ ಗೆಲುವು ಯಾರಿಗೆ?
- Finance ವಿವಿಧ ರಾಜ್ಯಗಳ ನರೇಗಾ ಕಾರ್ಮಿಕರ ವೇತನ ದರ ಪರಿಷ್ಕರಣೆ, ವಿವರ
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಿರುಪತಿ ತಿಮ್ಮಪ್ಪನ ಮೇಲೆ ಆಣೆ ಮಾಡಿದ ರಾಮ್ ಗೋಪಾಲ್ ವರ್ಮಾ
ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಇದ್ದಲ್ಲಿ ವಿವಾದಗಳು ಇದ್ದೇ ಇರುತ್ತವೆ. ಅವರನ್ನು ಸುತ್ತಿಕೊಂಡಿರುವ ವಿವಾದಗಳೆಲ್ಲವನ್ನು ಅವರೇ ಸೃಷ್ಟಿಸಿಕೊಂಡಿದ್ದಾರೆ. ಖ್ಯಾತ ನಟ ಪವರ್ ಸ್ಟಾರ್ ಎಂದು ಹೆಸರಿಟ್ಟು ಸಿನಿಮಾವೊಂದನ್ನು ಘೊಷಿಸಿರುವ ಅವರು, ಈಗಾಗಲೇ ಚಿತ್ರೀಕರಣವನ್ನು ಸಹ ಪ್ರಾರಂಭಿಸಿದ್ದಾರೆ. ಈ ಸಿನಿಮಾ ಭಾರಿ ವಿವಾದವನ್ನು ಹುಟ್ಟುಹಾಕಿದೆ.
Recommended Video
ಪವನ್ ಕಲ್ಯಾಣ್ ಅವರನ್ನು ಹೋಲುವ ನಟರನ್ನು ಹಾಕಿಕೊಂಡು ಸಿನಿಮಾ ಪ್ರಾರಂಭಿಸಿರುವ ರಾಮ್ ಗೋಪಾಲ್ ವರ್ಮಾ ಅವರ ಈ ಹುಡುಗಾಟಕ್ಕೆ ಸಾಕಷ್ಟು ವಿರೋಧ ವ್ಯಕ್ತವಾಗಿದೆ.
ರಾಮ್ಗೋಪಾಲ್ ವರ್ಮಾ ಹುಚ್ಚಾಟ: ಪವನ್ ಕಲ್ಯಾಣ್ಗೆ ಅವಮಾನ
ಪವನ್ ಕಲ್ಯಾಣ್ ಹಾಗೂ ಮೆಗಾಸ್ಟಾರ್ ಚಿರಂಜೀವಿ ಅಭಿಮಾನಿಗಳು ರಾಮ್ ಗೋಪಾಲ್ ವರ್ಮಾ ಮೇಲೆ ಸಿಟ್ಟಾಗಿದ್ದು, ಸಿನಿಮಾವನ್ನು ನಿಲ್ಲಿಸಬೇಕು ಎಂಬ ಒತ್ತಾಯಗಳು ಕೇಳಿಬರುತ್ತಿವೆ.
ಅನವಶ್ಯಕ ವಿವಾದ ಸೃಷ್ಟಿಸುತ್ತಿದ್ದಾರೆ: ವರ್ಮಾ
ಇದಕ್ಕೆ ಟ್ವಿಟ್ಟರ್ನಲ್ಲಿ ಪ್ರತಿಕ್ರಿಯಿಸಿರುವ ರಾಮ್ ಗೋಪಾಲ್ ವರ್ಮಾ, 'ಪವರ್ ಸ್ಟಾರ್ ಸಿನಿಮಾದ ಬಗ್ಗೆ ಕೆಲವರು ಅನವಶ್ಯಕ ವಿವಾದ ಸೃಷ್ಟಿಸುತ್ತಿದ್ದಾರೆ. ಈ ಸಿನಿಮಾದ ಮೂಲಕ ಯಾರನ್ನು ಕೆಟ್ಟದಾಗಿ ಬಿಂಬಿಸುವುದಿಲ್ಲ' ಎಂದು ರಾಮ್ ಗೋಪಾಲ್ ವರ್ಮಾ ಹೇಳಿದ್ದಾರೆ.
ಬಾಲಾಜಿ ಮೇಲೆ ಆಣೆಮಾಡಿದ ವರ್ಮಾ
ಇಷ್ಟೆ ಅಲ್ಲ, 'ಸಿನಿಮಾದಲ್ಲಿ ಯಾರ ಬಗ್ಗೆಯೂ ಕೆಟ್ಟದಾಗಿ, ಅವಮಾನಕಾರಿವಾಗಿ ತೋರಿಸುವುದಿಲ್ಲ ಎಂದು ನಾನು ತಿರುಪತಿ ಬಾಲಾಜಿ ಮೇಲೆ ಪ್ರಮಾಣ ಮಾಡಿ ಹೇಳುತ್ತಿದ್ದೇನೆ' ಎಂದು ಟ್ವಿಟ್ಟರ್ನಲ್ಲಿ ಕೈ ಮುಗಿದಿದ್ದಾರೆ ರಾಮ್ ಗೋಪಾಲ್ ವರ್ಮಾ.
'ನಗ್ನಂ' ಧಮಾಕಾ: ಅರ್ಧ ಗಂಟೆಯಲ್ಲಿ 47 ಲಕ್ಷ ಗಳಿಸಿದ ರಾಮ್ಗೋಪಾಲ್ ವರ್ಮಾ
ಸಿನಿಮಾದಲ್ಲಿ ಯಾರು ನಟಿಸಲಿದ್ದಾರೆ
ಪವರ್ ಸ್ಟಾರ್ ಸಿನಿಮಾದಲ್ಲಿ ಪಿಕೆ, ಎಂಎಸ್, ಚಿತ್ರದಲ್ಲಿ ಪಿಕೆ, ಎಂಎಸ್, ಎನ್ಬಿ ಮತ್ತು ಟಿಎಸ್ ಒಬ್ಬ ರಶ್ಯನ್ ಮಹಿಳೆ, ಕೆಲವು ಎಮ್ಮೆಗಳು, ಕತ್ತೆಗಳು ಮತ್ತು ಆರ್ಜಿವಿ ನಟಿಸಲಿದ್ದಾರೆ ಎಂದು ವರ್ಮಾ ಹೇಳಿದ್ದರು.
ಆರ್ಜಿವಿ ಸಿನಿಮಾದಲ್ಲಿ 'ಪವನ್ ಕಲ್ಯಾಣ್' ಆಗಲು ಭಯಪಡುತ್ತಿದ್ದಾರಂತೆ ಈ ನಟ!
ಸಿನಿಪ್ರಿಯರಿಗೆ ಗೊತ್ತಿರುವ ಸಂಗತಿಯೇ
ಪಿಕೆ ಎಂದರೆ ಪವನ್ ಕಲ್ಯಾನ್, ಎಮ್ಎಸ್ ಎಂದರೆ ಮೆಗಾಸ್ಟಾರ್ ಸ್ಟಾರ್ ಚಿರಂಜೀವಿ, ಎನ್ಬಿ ಎಂದರೆ ಅವರ ಸಹೋದರ ನಾಗಬಾಬು, ಟಿಎಸ್ ಎಂದರೆ ನಿರ್ದೇಶಕ ತ್ರಿವಿಕ್ರಮ್ ಇದು ತೆಲುಗು ಸಿನಿಪ್ರೇಕ್ಷಕರಿಗೆ ಗೊತ್ತಿರುವ ಸಂಗತಿಯೇ.