Don't Miss!
- News Everest Fish Curry Masala: ಎವರೆಸ್ಟ್ ಫಿಶ್ ಕರಿ ಮಸಾಲೆ ಬ್ಯಾನ್: ಕಾರಣ ಇಲ್ಲಿದೆ
- Lifestyle ನೀವು ಸಹ ಈ ಶರ್ಬತ್ನ ರುಚಿ ಸವಿದಿದ್ದೀರಾ..? ಮರೆಯಾಯ್ತು ಈ ಹಳೆಯ ನೆನಪು
- Automobiles ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- Sports LSG vs CSK IPL 2024: ಲಕ್ನೋ vs ಚೆನ್ನೈ ಮಹಾಕದನ; ಟಾಸ್ ವರದಿ, ಆಡುವ 11ರ ಬಳಗ
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆರ್ಆರ್ಆರ್ ನಿರ್ದೇಶಕ ರಾಜಮೌಳಿಗೆ ಬರುತ್ತಿವೆ ಬೆದರಿಕೆ ಸಂದೇಶಗಳು!
ದೇಶದ ಅತ್ಯುತ್ತಮ ನಿರ್ದೇಶಕರಲ್ಲಿ ಒಬ್ಬರಾದ ರಾಜಮೌಳಿ ಅವರಿಗೆ ಯಾಕೋ ದಿನಗಳು ಸರಿಯಿದ್ದಂತಿಲ್ಲ. ಅವರಿಗೆ ಹಾಗೂ ಆರ್ಆರ್ಆರ್ ಸಿನಿಮಾಕ್ಕೆ ಸಮಸ್ಯೆಯ ಮೇಲೆ ಸಮಸ್ಯೆಗಳು ಬಂದೊದಗುತ್ತಿವೆ.
Recommended Video
ಆರ್ಆರ್ಆರ್ ಸಿನಿಮಾ ಕೊರೊನಾ ಸಂಕಷ್ಟದ ಕಾರಣದಿಂದಾಗಿ ಚಿತ್ರೀಕರಣ ಸ್ಥಗಿತಗೊಂಡಿದೆ. ಪಡೆದುಕೊಂಡಿದ್ದ ಸ್ಟಾರ್ ನಟ-ನಟಿಯರ ಡೇಟ್ಸ್ಗಳು ಮುಗಿಯುತ್ತಾ ಬಂದಿದ್ದು ಆತಂಕ ಎದುರಾಗಿದೆ. ಇದರೆಲ್ಲರ ನಡುವೆ ರಾಜಮೌಳಿ ಅವರಿಗೆ ಬೆದರಿಕೆ ಸಂದೇಶಗಳು ಬಂದಿವೆಯಂತೆ. ಅದೂ ಅಭಿಮಾನಿಗಳಿಂದಲೇ!
'ಕದ್ದು ಸಿನಿಮಾ ಮಾಡುತ್ತಾರೆ': ಕನ್ನಡಿಗರನ್ನು ಮರೆತ ರಾಜಮೌಳಿ ವಿರುದ್ಧ ರಾಜೇಂದ್ರ ಸಿಂಗ್ ಬಾಬು ವಾಗ್ದಾಳಿ
ಹೌದು, ಆರ್ಆರ್ಆರ್ ಸಿನಿಮಾದ ನಾಯಕಿಯರಲ್ಲಿ ಒಬ್ಬರನ್ನು ಬದಲಾಯಿಸುವಂತೆ ಹೇಳಿ ರಾಜಮೌಳಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಬಂದಿದೆಯಂತೆ.
ಹಲವು ನಟಿಯರು ಸಿನಿಮಾದಲ್ಲಿದ್ದಾರೆ
ಆರ್ಆರ್ಆರ್ ಸಿನಿಮಾದಲ್ಲಿ ಬಾಲಿವುಡ್ ನಟಿ ಆಲಿಯಾ ಭಟ್, ಶ್ರಿಯಾ ಶಿರೀನ್, ವಿದೇಶಿ ನಟಿ ಒಲಿವಿಯಾ ಮತ್ತು ಅಲಿಸನ್ ಡೂಡಿ ನಟಿಸುತ್ತಿದ್ದಾರೆ. ಇವರಲ್ಲಿ ಒಬ್ಬ ನಟಿಯನ್ನು ಸಿನಿಮಾದಿಂದ ಕೈಬಿಡುವಂತೆ ರಾಜಮೌಳಿ ಮೇಲೆ ಒತ್ತಡ ಹೇರಲಾಗುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಸಂದೇಶಗಳು ಬರುತ್ತಿವೆಯಂತೆ.
ಸುಶಾಂತ್ ಸಾವಿನ ನಂತರ ಆಲಿಯಾ ಮೇಲೆ ಆಕ್ರೋಶ
ಸುಶಾಂತ್ ಸಿಂಗ್ ಆತ್ಮಹತ್ಯೆ ಬಳಿಕ ನೆಟ್ಟಿಜನರ ಸಿಟ್ಟು ಕರಣ್ ಜೋಹರ್ ಹಾಗೂ ಆಲಿಯಾ ಭಟ್ ಮೇಲೆ ತಿರುಗಿತ್ತು, ಸುಶಾಂತ್ ಬಗ್ಗೆ ಶೋ ಒಂದರಲ್ಲಿ ತುಚ್ಛವಾಗಿ ಆಲಿಯಾ ಮಾತನಾಡಿದ್ದರು. ಹಾಗಾಗಿ ಸುಶಾಂತ್ ಸಾವಿಗೆ ಆಲಿಯಾ ಸಹ ಕಾರಣ ಎಂಬ ಚರ್ಚೆ ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿದೆ.
'ಬಾಹುಬಲಿ' ಫೈಟ್ ದೃಶ್ಯಕ್ಕೆ ಮಾಸ್ಕ್ ಧರಿಸಿದ ಗ್ರಾಫಿಕ್ಸ್ ಕಲಾವಿದರು: ರಾಜಮೌಳಿ ಹೇಳಿದ್ದೇನು?
ಆಲಿಯಾರನ್ನು ಕೈಬಿಡಿರೆಂದು ಒತ್ತಾಯ
ಇದೇ ಚರ್ಚೆಯನ್ನು ಮೂಲವಾಗಿಟ್ಟುಕೊಂಡು, ಆರ್ಆರ್ಆರ್ ಸಿನಿಮಾದಿಂದ ಆಲಿಯಾ ಭಟ್ ಅನ್ನು ತೆಗೆದು ಹಾಕಿರೆಂದು ರಾಜಮೌಳಿಗೆ ಒತ್ತಡ ಹೇರಲಾಗುತ್ತಿದೆಯಂತೆ. ಅಷ್ಟೆ ಅಲ್ಲ ಕೆಲವರು ಬೆದರಿಕೆ ಸಂದೇಶಗಳನ್ನು ಸಹ ಸಾಮಾಜಿಕ ಜಾಲತಾಣದಲ್ಲಿ ಕಳುಹಿಸಿದ್ದಾರಂತೆ.
RRR ಸಿನಿಮಾ ಫ್ಲಾಪ್ ಆದರೆ ಯಾರು-ಯಾರು ಸಂಭ್ರಮಿಸುತ್ತಾರೆ?
ಭಾರಿ ಕುತೂಹಲ ಮೂಡಿಸಿರುವ ಸಿನಿಮಾ
ಭಾರಿ ಬಜೆಟ್ನ ಸಿನಿಮಾ ಆರ್ಆರ್ಆರ್ ಬಗ್ಗೆ ದೇಶದಾದ್ಯಂತ ಭಾರಿ ಕುತೂಹಲ ಏರ್ಪಟ್ಟಿದೆ. ಸಿನಿಮಾದಲ್ಲಿ ಇಬ್ಬರು ಸ್ಟಾರ್ಗಳಾದ ಜೂ.ಎನ್ಟಿಆರ್ ಮತ್ತು ರಾಮ್ಚರಣ್ ತೇಜ ನಟಿಸುತ್ತಿದ್ದಾರೆ. ಬಾಲಿವುಡ್ ನಟ ಅಜಯ್ ದೇವಗನ್ ಸಹ ಸಿನಿಮಾದಲ್ಲಿದ್ದಾರೆ. ಕೊರೊನಾ ಕಾರಣದಿಂದ ಸದ್ಯಕ್ಕೆ ಸಿನಿಮಾ ನಿಂತಿದೆ.
'RRR' ಸಿನಿಮಾದ ನಟಿ ಗರ್ಭಿಣಿ: ಮತ್ತೆ ನಾಯಕಿಯ ಹುಡುಕಾಟದಲ್ಲಿ ರಾಜಮೌಳಿ?