Don't Miss!
- Lifestyle ಕಂಡ ಕಂಡಲ್ಲಿ ಏಕೆ ಉಗುಳಬಾರದು ಗೊತ್ತಾ? ಈ ವಿಡಿಯೋ ನೋಡಿ..!
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- News ಮಂಡ್ಯದ ‘ಹಲವು ಸುಮಲತಾ’ ತಂತ್ರ ಬೆಂಗಳೂರು ಗ್ರಾಮಾಂತದಲ್ಲೂ ಬಂತಾ? ಮತ್ತೊಬ್ಬ ಡಾ ಸಿಎನ್ ಮಂಜುನಾಥ್ ಕಣಕ್ಕೆ!
- Sports IPL 2024: ರಾಜಸ್ಥಾನ್ ರಾಯಲ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ರೋಚಕ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಾಜಿ ಪ್ರಧಾನಿ ಪಿವಿ ನರಸಿಂಹರಾವ್ ಬಯೋಪಿಕ್ ಘೋಷಣೆ
ಭಾರತದ ಮಾಜಿ ಪ್ರಧಾನಮಂತ್ರಿ ಪಿವಿ ನರಸಿಂಹರಾವ್ ಅವರ 100ನೇ ಜನುಮದಿನದ ಪ್ರಯುಕ್ತ ಅವರ ಬಯೋಪಿಕ್ ಸಿನಿಮಾ ಘೋಷಣೆಯಾಗಿದೆ.
'ಎರ್ರ ಮಲ್ಲೆಲು' ಹಾಗೂ 'ಯುವರತ್ನ ಕದಿಲಿಂದಿ' ಅಂತಹ ಸಿನಿಮಾಗಳನ್ನು ನಿರ್ದೇಶಿಸಿದ್ದ ಧವಳ ಸತ್ಯಂ ಪಿವಿ ನರಸಿಂಹರಾವ್ ಜೀವನ ಆಧರಿಸಿ ಸಿನಿಮಾ ಮಾಡಲು ಮುಂದಾಗಿದ್ದಾರೆ.
ಆಧುನಿಕ ಭಾರತ ನಿರ್ಮಾತೃ ಪಿ.ವಿ.ನರಸಿಂಹ ರಾವ್ಗೆ 100
ತಡಿವಾಕ ರಮೇಶ್ ನಾಯ್ಡು ಈ ಚಿತ್ರಕ್ಕೆ ಬಂಡವಾಳ ಹಾಕಲಿದ್ದು, ಏಕಕಾಲದಲ್ಲಿ ತೆಲುಗು ಮತ್ತು ಹಿಂದಿಯಲ್ಲಿ ಈ ಸಿನಿಮಾ ತಯಾರಾಗಲಿದೆ. ತದನಂತರ ಉಳಿದ ಭಾಷೆಗಳಿಗೆ ಡಬ್ ಮಾಡಲಾಗುವುದು ಎಂದು ತಿಳಿದು ಬಂದಿದೆ.
ಪಿವಿ ನರಸಿಂಹರಾವ್ ಪಾತ್ರದಲ್ಲಿ ಯಾರು ನಟಿಸಲಿದ್ದಾರೆ ಎನ್ನುವುದು ಕುತೂಹಲ ಮೂಡಿಸಿದೆ. ಸದ್ಯದ ವರದಿ ಪ್ರಕಾರ, ಹಿಂದಿ ಚಿತ್ರರಂಗದ ಖ್ಯಾತ ಕಲಾವಿದರೊಬ್ಬರು ಸಂಪರ್ಕದಲ್ಲಿದ್ದಾರೆ ಎನ್ನಲಾಗಿದೆ. ಆ ಕಲಾವಿದ ರಾಷ್ಟ್ರಮಟ್ಟದಲ್ಲಿ ಉತ್ತಮ ಅಭಿನಯದ ಮೂಲಕ ಗಮನ ಸೆಳೆದಿದ್ದಾರೆ ಎಂದು ಸಿನಿಮಾ ಎಕ್ಸ್ಪ್ರೆಸ್ ವರದಿಯಲ್ಲಿ ಉಲ್ಲೇಖವಾಗಿದೆ.
ಸದ್ಯ ಪ್ರಿ-ಪ್ರೊಡಕ್ಷನ್ ಹಂತದ ಕೆಲಸ ನಡೆಯುತ್ತಿದ್ದು, ಸ್ಕ್ರಿಪ್ಟ್, ಕಲಾವಿದರ ಆಯ್ಕೆ ಮಾಡಲಾಗುತ್ತಿದೆ. ಸದ್ಯದಲ್ಲೇ ಚಿತ್ರದ ಫೋಟೋಶೂಟ್ ಸಹ ಮಾಡುವ ತಯಾರಿ ಸಾಗಿದೆ.
ಭಾರತದ ಹಲವು ಭಾಷೆಗಳಲ್ಲಿ ಬಿಡುಗಡೆ ಮಾಡಲು ತೀರ್ಮಾನಿಸಿದ್ದು, 2022ರ ಜೂನ್ 28 ರಂದು ಈ ಸಿನಿಮಾ ತೆರೆಗೆ ತರಲು ಯೋಜಿಸಲಾಗಿದೆ. ಇದಕ್ಕೂ ಮುಂಚೆ ಮನಮೋಹನ್ ಸಿಂಗ್ ಹಾಗೂ ಪಿಎಂ ನರೇಂದ್ರ ಮೋದಿ ಅವರ ಕುರಿತು ಸಿನಿಮಾಗಳು ಬಂದಿದ್ದವು.
ಪಿವಿ ನರಸಿಂಹರಾವ್ ಕುರಿತು
Recommended Video
ಪಾಮುಲಪರ್ತಿ ವೆಂಕಟ ನರಸಿಂಹರಾವ್ ಭಾರತದ 9ನೇ ಪ್ರಧಾನಮಂತ್ರಿ ಆಗಿದ್ದರು. 1991 ರಿಂದ 1996ರವರೆಗೂ ಪೂರ್ಣಾವಧಿ ಅಧಿಕಾರ ನಡೆಸಿದ್ದರು. ಪಿ.ವಿ.ನರಸಿಂಹ ರಾವ್ ಅವರು ಜೂನ್ 28, 1921ರಲ್ಲಿ ಕರೀಂನಗರದ ವಂಗಾರ ಎಂಬ ಊರಲ್ಲಿ ಜನಿಸಿದರು. ಬಿಎಸ್ಸಿ, ಎಲ್ಎಲ್ಬಿ ಪದವಿ ಪಡೆದ ಪಿ.ವಿ.ನರಸಿಂಹ ರಾವ್ ಓರ್ವ ವಕೀಲನಾಗಿ ವೃತ್ತಿ ಮಾಡಿದ್ದರು. ನಂತರ ರಾಜಕೀಯ ಪ್ರವೇಶಿಸಿ ಸಚಿವರಾಗಿ ಮುಖ್ಯ ಖಾತೆಗಳನ್ನು ನಿರ್ವಹಿಸಿದರು.