Don't Miss!
- Sports IPL 2024: ಆರ್ಸಿಬಿ vs ಕೆಕೆಆರ್ ಪಂದ್ಯಕ್ಕೂ ಮುನ್ನ ಗಂಭೀರ್ನತ್ತ ಐಸ್-ಕೋಲ್ಡ್ ಲುಕ್ ನೀಡಿದ ಕೊಹ್ಲಿ
- Automobiles ಓಲಾ ಎಸ್ 1 ಪ್ರೋ VS ಏಥರ್ 450X: ಮದಗಜಗಳ ಹಣಾಹಣಿಯಲ್ಲಿ ಯಾರು ಬೆಸ್ಟ್?
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- News Government Employees; ಸರ್ಕಾರಿ ನೌಕರರ ಜೀವ ವಿಮೆ ಪಾಲಿಸಿ ಅವಧಿ ಏರಿಕೆ
- Lifestyle ಬಾಯಿ ರುಚಿಗೆ ಗರಿ ಗರಿ ನಿಪ್ಪಟ್ಟು..! ಮನೆಯಲ್ಲೇ ಮಾಡಿ ಟೆಸ್ಟಿ ತಿಂಡಿ
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದಕ್ಷಿಣ ಭಾರತದ ಖ್ಯಾತ ಸಂಕಲನಕಾರ ಕೋಲ ಭಾಸ್ಕರ್ ನಿಧನ
ದಕ್ಷಿಣ ಚಿತ್ರರಂಗದ ಖ್ಯಾತ ತಂತ್ರಜ್ಞ, ಸಂಕಲನಕಾರ ಕೋಲ ಭಾಸ್ಕರ್ (55) ಬುಧವಾರ ಬೆಳಗ್ಗೆ ನಿಧನರಾಗಿದ್ದಾರೆ ಎಂಬ ಸುದ್ದಿ ವರದಿಯಾಗಿದೆ. ತೆಲುಗು ಮತ್ತು ತಮಿಳಿನ ಹಲವು ಚಿತ್ರಗಳಲ್ಲಿ ಸಂಕಲನಕಾರನಾಗಿ ಕಾರ್ಯನಿರ್ವಹಿಸಿದ್ದ ಭಾಸ್ಕರ್ ಹೈದರಾಬಾದ್ನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
ಹಲವು ಸಮಯದಿಂದ ಗಂಟಲು ಕ್ಯಾನ್ಸರ್ನಿಂದ ಬಳಲುತ್ತಿದ್ದ ಕೋಲ ಭಾಸ್ಕರ್ ಇಂದು ಬೆಳಗ್ಗೆ 8 ಗಂಟೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಹಿರಿಯ ರಂಗಕರ್ಮಿ, ನಟ ಎಚ್.ಜಿ ಸೋಮಶೇಖರ್ ರಾವ್ ನಿಧನ
ಕೋಲ ಭಾಸ್ಕರ್ ತಮ್ಮ ಪತ್ನಿ ಮತ್ತು ಮಗನನ್ನು ಬಿಟ್ಟು ಅಗಲಿದ್ದಾರೆ. ಖ್ಯಾತ ತಂತ್ರಜ್ಞನನ್ನು ಕಳೆದುಕೊಂಡ ಸಿನಿಉದ್ಯಮ ಸಂತಾಪ ಸೂಚಿಸಿದ್ದು, 2020ನೇ ವರ್ಷದಲ್ಲಿ ಮತ್ತೊಬ್ಬ ಕಲಾಬಂಧುವನ್ನು ಕಳೆದುಕೊಂಡು ದುಃಖ ವ್ಯಕ್ತಪಡಿಸಿದೆ.
ಪವರ್ ಸ್ಟಾರ್ ಪವನ್ ಕಲ್ಯಾಣ್ ನಟಿಸಿದ್ದ ಸೂಪರ್ ಹಿಟ್ ಚಿತ್ರ 'ಖುಷಿ' ಚಿತ್ರಕ್ಕೆ ಸಂಕಲನ ಮಾಡಿದ್ದು ಇದೇ ಭಾಸ್ಕರ್, 7ಜಿ ಬೃಂದಾವನ ಕಾಲೋನಿ, ಆಡವಾರಿ ಮಾಟಲಕೂ ಅರ್ಥಾಲೇ ವೇರೆಲೆ, ಕಂಡೇನ್ ಕಾದಲೈ ಸೇರಿದಂತೆ ಹಲವು ಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ.
ಅಂದ್ಹಾಗೆ, ಕೋಲ ಭಾಸ್ಕರ್ ಅವರ ಏಕೈಕ ಮಗ ಕೋಲ ಬಾಲಕೃಷ್ಣ ಸಹ ತೆಲುಗು ಇಂಡಸ್ಟ್ರಿಯಲ್ಲಿ ಹೀರೋ ಆಗಿ ಪರಿಚಯವಾಗಿದ್ದರು. '7 ಜಿ ಬೃಂದಾವನ ಕಾಲೋನಿ' ನಿರ್ದೇಶಕ ತಯಾರಿಸಿದ್ದ 'ನನ್ನ ವದುಲಿ ನುವ್ವು ಪೋಲೆವುಲೆ' ದ್ವಿಭಾಷ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದರು.