Don't Miss!
- Sports IPL 2024: ಮುಂಬೈ ಇಂಡಿಯನ್ಸ್ಗೆ ಆಘಾತದ ಮೇಲೆ ಆಘಾತ; ಸ್ಟಾರ್ ಬೌಲರ್ ಔಟ್
- News DV Sadananda Gowda: ಕಾಂಗ್ರೆಸ್ ನತ್ತ ಡಿ ವಿ ಸದಾನಂದಗೌಡ? ನಾಲ್ಕು ಕ್ಷೇತ್ರಗಳ ಆಫರ್ ಕೊಟ್ಟ ಕೈ ನಾಯಕರು?
- Lifestyle ಫ್ಲ್ಯಾಟ್ನಲ್ಲಿ ವಾಸಿಸಲು ಹೋಗುವಾಗ ಸಮೃದ್ಧಿ, ಆರೋಗ್ಯಕ್ಕಾಗಿ ವಾಸ್ತು ಹೀಗಿದೆಯೇ ಎಂದು ನೋಡಬೇಕು
- Technology ಮಾರುಕಟ್ಟೆಗೆ ಎಂಟ್ರಿ ಕೊಟ್ಟ ಇನ್ಫಿನಿಕ್ಸ್ ನೋಟ್ 40 ಪ್ರೊ ಪ್ಲಸ್ 5G ಫೋನ್: ಫೀಚರ್ಸ್ ಹೇಗಿದೆ?
- Automobiles ಡಿ ಬಾಸ್ ಪತ್ನಿ ಖರೀದಿಸಿದ್ದು ಸಾಮಾನ್ಯ ಕಾರಲ್ಲ: ಬಂಗಲೆಯಂತಹ ಇಂಟೀರಿಯರ್!
- Finance ಭಾರತದಲ್ಲಿ ಚಿನ್ನದ ಬೆಲೆ ಇಳಿಕೆ, ನಿಮ್ಮ ನಗರದಲ್ಲಿ 24 ಕ್ಯಾರೆಟ್ ಚಿನ್ನದ ದರ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಥಿಯೇಟರ್ನಲ್ಲಿ 100% ಅವಕಾಶ ನೀಡುವಂತೆ ಆಂಧ್ರ-ತೆಲಂಗಾಣ ಸಿಎಂಗೆ ಮನವಿ
ತಮಿಳುನಾಡಿನಲ್ಲಿ ಥಿಯೇಟರ್ಗೆ ಶೇಕಡಾ 100ರಷ್ಟು ಅನುಮತಿ ನೀಡಿದ ಹಿನ್ನೆಲೆ ತೆಲುಗು ನಿರ್ಮಾಪಕರು ಸಹ '100 ರಷ್ಟು ಆಸನ ಭರ್ತಿಯೊಂದಿಗೆ ಪ್ರದರ್ಶನ ಮಾಡಲು ಅವಕಾಶ ಕೊಡಿ ಎಂದು' ಎರಡು ರಾಜ್ಯಗಳ ಸಿಎಂಗೆ ಮನವಿ ಮಾಡಿದ್ದಾರೆ.
ತೆಲುಗು ಚಲನಚಿತ್ರ ನಿರ್ಮಾಪಕ ಸಂಘದ ವತಿಯಿಂದ ಆಂಧ್ರ ಪ್ರದೇಶ ಮತ್ತು ತೆಲಂಗಾಣ ಮುಖ್ಯಮಂತ್ರಿಗಳಿಗೆ ಪತ್ರದ ಮೂಲಕ ಚಿತ್ರಮಂದಿರದಲ್ಲಿ 100 ಪರ್ಸೆಂಟ್ ಅವಕಾಶ ಕೊಡುವಂತೆ ಮನವಿ ಮಾಡಲಾಗಿದೆ.
ಚಿತ್ರಮಂದಿರಗಳಲ್ಲಿ ಶೇ. 100 ಆಸನ ಭರ್ತಿಗೆ ಸರ್ಕಾರದ ಅನುಮತಿ
ಇತ್ತೀಚಿಗಷ್ಟೆ ತಮಿಳುನಾಡು ಸರ್ಕಾರ ತಮಿಳುನಾಡಿನಲ್ಲಿ ಶೇಕಡಾ 100ರಷ್ಟು ಆಸನಕ್ಕೆ ಅವಕಾಶ ನೀಡಿ ಪ್ರದರ್ಶನ ಮಾಡಬಹುದು ಎಂದು ಆದೇಶಿಸಿತ್ತು. ಈ ಆದೇಶವನ್ನು ಮುಂದಿಟ್ಟುಕೊಂಡು ತೆಲುಗು ನಿರ್ಮಾಪಕರು ಆಂಧ್ರ ಮತ್ತು ತೆಲಂಗಾಣ ಸರ್ಕಾರಗಳ ಬಳಿ ಅನುಮತಿಗಾಗಿ ಒತ್ತಾಯಿಸಿದ್ದಾರೆ.
ತಮಿಳುನಾಡಿನಲ್ಲಿ ಶೇಕಡಾ 100 ರಷ್ಟು ಅವಕಾಶ ಕೊಟ್ಟಿರುವ ಆದೇಶವನ್ನು ಚಿತ್ರರಂಗ ಸ್ವಾಗತಿಸಿದೆ. ಚಿತ್ರೋಧ್ಯಮದ ದೃಷ್ಟಿಯಿಂದ ಇದು ಒಳ್ಳೆಯ ನಿರ್ಧಾರ ಎಂದು ಸಮರ್ಥಿಸಿಕೊಳ್ಳಲಾಗಿದೆ. ಮತ್ತೊಂದೆಡೆ ಥಿಯೇಟರ್ಗಳಿಗೆ 100 ಪರ್ಸೆಂಟ್ ಅವಕಾಶ ಕೊಟ್ಟಿದ್ದಕ್ಕೆ ವಿರೋಧ ಸಹ ವ್ಯಕ್ತವಾಗಿದೆ.
ತಮಿಳುನಾಡಿನಲ್ಲಿ ಚಿತ್ರಮಂದಿರಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲು ಸಮ್ಮತಿ ಸಿಕ್ಕ ಬಳಿಕ, ಕರ್ನಾಟಕದಲ್ಲೂ ನಿರ್ಮಾಪಕರು 100 ಪರ್ಸೆಂಟ್ ಅವಕಾಶಕ್ಕಾಗಿ ಮನವಿ ಮಾಡಲು ನಿರ್ಧರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಥಿಯೇಟರ್ನಲ್ಲಿ 100ರಷ್ಟು ಅನುಮತಿ: ವಿರೋಧಿಸಿದ ತಮಿಳು ನಟ ಅರವಿಂದ್ ಸ್ವಾಮಿ
ಜನವರಿ 13ನೇ ತಾರೀಖು ವಿಜಯ್ ನಟನೆಯ ಮಾಸ್ಟರ್ ಸಿನಿಮಾ ತೆರೆಕಾಣುತ್ತಿದೆ. ತಮಿಳುನಾಡಿನಲ್ಲಿ ಚಿತ್ರಮಂದಿರದಲ್ಲಿ 100 ಪರ್ಸೆಂಟ್ ಪ್ರದರ್ಶನಕ್ಕೆ ಅವಕಾಶ ಕೊಡಿ ಎಂದು ಸಿಎಂ ಬಳಿ ವಿಜಯ್ ಮನವಿ ಮಾಡಿದ್ದರು. ಈ ಭೇಟಿ ಬಳಿಕ ಸರ್ಕಾರ ಆದೇಶ ಮಾಡಿತ್ತು. ಈಗ ಆಂಧ್ರ ಹಾಗೂ ತೆಲಂಗಾಣ ಸರ್ಕಾರ ಇದಕ್ಕೆ ಒಪ್ಪಿಗೆ ಸೂಚಿಸಿದ್ದಲ್ಲಿ ಮಾಸ್ಟರ್ ಚಿತ್ರಕ್ಕೆ ಸಹಕಾರಿಯಾಗಲಿದೆ.