Don't Miss!
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Automobiles ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- Lifestyle ಹನುಮಂತನ ಪವಾಡ: ಈ ದೇವಾಲಯದಲ್ಲಿ ಹನುಮಾನ್ ಮೂರ್ತಿ ವರ್ಷದಿಂದ ವರ್ಷಕ್ಕೆ ಎತ್ತರ ಬೆಳೆಯುತ್ತಿದೆ!
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿ; ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ: ಸಿದ್ದರಾಮಯ್ಯ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಆಚಾರ್ಯ' ಕೊನೆಯ ಹಂತದ ಶೂಟಿಂಗ್ ಪ್ರಾರಂಭ
ಕೊರೊನಾ ವೈರಸ್ ಲಾಕ್ಡೌನ್ನಿಂದ ಬ್ರೇಕ್ ತೆಗೆದುಕೊಂಡಿದ್ದ ಆಚಾರ್ಯ ಮತ್ತೆ ಕೆಲಸ ಶುರು ಮಾಡಿದೆ. ಬಹಳ ದಿನಗಳ ನಂತರ ಶೂಟಿಂಗ್ಗೆ ಮರುಚಾಲನೆ ನೀಡಿದ್ದು, ಇಂದಿನಿಂದ ಕೊನೆಯ ಹಂತದ ಕೆಲಸ ಪ್ರಾರಂಭವಾಗಿದೆ.
ಮೆಗಾ ಪವರ್ ಸ್ಟಾರ್ ರಾಮ್ ಚರಣ್ ತೇಜ ಅವರ ಹೊಸ ಪೋಸ್ಟರ್ವೊಂದನ್ನು ಅನಾವರಣ ಮಾಡುವ ಮೂಲಕ ಕೊನೆಯ ಹಂತದ ಚಿತ್ರೀಕರಣ ಶುರುವಾಗಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
ಸುಮಾರು 90 ರಷ್ಟು ಚಿತ್ರೀಕರಣ ಲಾಕ್ಡೌನ್ಗೆ ಮುಂಚಿತವಾಗಿಯೇ ಮುಗಿದಿತ್ತು. ಇದೀಗ, ಬಾಕಿ ಉಳಿದಿರುವ ಶೂಟಿಂಗ್ ಆರಂಭಿಸಿದ್ದು, ಶೀಘ್ರದಲ್ಲಿ ಕುಂಬಳಕಾಯಿ ಹೊಡೆಯುವ ನಿರೀಕ್ಷೆಯಲ್ಲಿದೆ ಚಿತ್ರತಂಡ.
ಮುಂಬೈನಲ್ಲಿ ಭವ್ಯ ಬಂಗ್ಲೆ ಖರೀದಿಸಿದ ಚಿರಂಜೀವಿ ಪುತ್ರ ರಾಮ್ ಚರಣ್
ಆಚಾರ್ಯ ಔಟ್ ಅಂಡ್ ಔಟ್ ಆಕ್ಷನ್ ಎಂಟರ್ಟೈನ್ಮೆಂಟ್. ಮೆಗಾಸ್ಟಾರ್ ಚಿರಂಜೀವಿ ನಾಯಕರಾಗಿದ್ದು, ರಾಮ್ ಚರಣ್ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ. ಕಾಜಲ್ ಅಗರ್ವಾಲ್, ಪೂಜಾ ಹೆಗ್ಡೆ, ಸೋನು ಸೂದ್ ಸೇರಿದಂತೆ ಹಲವರು ನಟಿಸಿದ್ದಾರೆ.
ಸ್ವತಃ ರಾಮ್ ಚರಣ್ ಈ ಚಿತ್ರ ನಿರ್ಮಾಣ ಮಾಡಿದ್ದು, ಕೊರಟಾಲ ಶಿವ ನಿರ್ದೇಶನ ಮಾಡ್ತಿದ್ದಾರೆ. ಇನ್ನು ಮಣಿ ಶರ್ಮಾ ಸಂಗೀತ ಒದಗಿಸಿದ್ದಾರೆ.
Recommended Video
ಈ ಹಿಂದೆ ಪ್ರಕಟಿಸಿದಂತೆ ಮೇ ತಿಂಗಳಲ್ಲಿ ಸಿನಿಮಾ ರಿಲೀಸ್ ಆಗಬೇಕಿತ್ತು. ಕೊರೊನಾ ಕಾರಣದಿಂದ ಅದು ಸಾಧ್ಯವಾಗಿರಲಿಲ್ಲ. ಈಗ ದಸರಾ ಹಬ್ಬಕ್ಕೆ ಪ್ರೇಕ್ಷಕರೆದುರು ಬರಲು ಚಿಂತಿಸಲಾಗಿದೆ ಎಂಬ ವಿಚಾರ ಹೊರಬಿದ್ದಿದೆ. ಆದರೆ, ಅಧಿಕೃತವಾಗಿಲ್ಲ.