Don't Miss!
- News karnataka Rain: ಕರ್ನಾಟಕದಲ್ಲಿ ಮುಂದಿನ ಮೂರು ದಿನ ದಾರಕಾರ ಮಳೆ: ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವರುಣನ ಅರ್ಭಟ!
- Finance ಜಗತ್ತಿಗೆ ಭಾರತವೇ ಬಾಸ್, ಅಂತಾರಾಷ್ಟ್ರೀಯ ಹಣಕಾಸು ನಿಧಿ ಹೇಳಿದ್ದು ಏನು?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ವಕೀಲ್ ಸಾಬ್' ಜೊತೆ ಬರ್ತಾರೆ ಬಾಲಿವುಡ್ ನಟಿ ಆಲಿಯಾ ಭಟ್
ತೆಲುಗು ಪವರ್ ಸ್ಟಾರ್ ಪವನ್ ಕಲ್ಯಾಣ್ ಅಭಿನಯದ 'ವಕೀಲ್ ಸಾಬ್' ಸಿನಿಮಾ ಏಪ್ರಿಲ್ 9 ರಂದು ತೆಲುಗಿನಲ್ಲಿ ಬಿಡುಗಡೆಯಾಗುತ್ತಿದೆ. ಹಿಂದಿಯ 'ಪಿಂಕ್' ಚಿತ್ರದ ರಿಮೇಕ್ ಆಗಿರುವ ಈ ಸಿನಿಮಾ ತೆಲುಗು ಭಾಷೆಯಲ್ಲಿ ಮಾತ್ರ ತೆರೆಗೆ ಬರ್ತಿದೆ.
'ವಕೀಲ್ ಸಾಬ್' ಸಿನಿಮಾದ ಜೊತೆ ಬಾಲಿವುಡ್ ನಟಿ ಆಲಿಯಾ ಭಟ್ ಸರ್ಪ್ರೈಸ್ ಕೊಡ್ತಿದ್ದಾರೆ. ಪವನ್ ಕಲ್ಯಾಣ್ ಸಿನಿಮಾ ಪ್ರದರ್ಶನದ ಚಿತ್ರಮಂದಿರಗಳಲ್ಲಿ ಆಲಿಯಾ ಭಟ್ ಅಭಿನಯದ 'ಗಂಗುಬಾಯಿ ಕಥಿಯಾವಾಡಿ' ತೆಲುಗು ಟೀಸರ್ ರಿಲೀಸ್ ಮಾಡಲಾಗುತ್ತಿದೆ.
'ಗಂಗೂಬಾಯಿ ಕಾಥಿಯಾವಾಡಿ' ಸಿನಿಮಾ ವಿವಾದ: ಅಲಿಯಾ ಮತ್ತು ಸಂಜಯ್ ಲೀಲಾ ಬನ್ಸಾಲಿಗೆ ಸಮನ್ಸ್
ಈ ಕುರಿತು ಸ್ವತಃ ಆಲಿಯಾ ಭಟ್ ಮಾಹಿತಿ ನೀಡಿದ್ದು, 'ಪವನ್ ಕಲ್ಯಾಣ್ ಅವರ ಚಿತ್ರದ ಜೊತೆ ನಮ್ಮ ಟೀಸರ್ ಹಂಚಿಕೊಳ್ಳುತ್ತಿರುವುದು ನಿಜಕ್ಕೂ ಖುಷಿ' ಇದೆ ಎಂದು ವಿಡಿಯೋದಲ್ಲಿ ಧನ್ಯವಾದ ತಿಳಿಸಿದ್ದಾರೆ.
ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದಲ್ಲಿ ತಯಾರಾಗುತ್ತಿರುವ 'ಗಂಗುಬಾಯಿ ಕಥಿಯಾವಾಡಿ' ಹಿಂದಿ ಟೀಸರ್ ಫೆಬ್ರವರಿ ತಿಂಗಳಲ್ಲಿ ಬಿಡುಗಡೆಯಾಗಿತ್ತು. ಈಗ ತೆಲುಗು ಭಾಷೆಯಲ್ಲಿ ಟೀಸರ್ ಬರ್ತಿದೆ.
'ವಕೀಲ್ ಸಾಬ್'ಗಾಗಿ 'ಯುವರತ್ನ'ವನ್ನು ಬಲಿ ಪಡೆದ ಹೊಂಬಾಳೆ!
ಗಂಗೂಬಾಯಿ ಕಾಥಿಯಾವಾಡಿ ಚಿತ್ರವು ಹುಸೈನ್ ಜೈದಿ ಎನ್ನುವವರು ಬರೆದ 'ಮಾಫಿಯಾ ಕ್ವೀನ್ ಆಫ್ ಮುಂಬೈ' ಪುಸ್ತಕವನ್ನು ಆಧರಿಸಿ ಮಾಡಲಾಗಿದೆ. ಗಂಗೂಬಾಯಿ ಪಾತ್ರದಲ್ಲಿ ಆಲಿಯಾ ಭಟ್ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ಅಜಯ್ ದೇವಗನ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಬಹುನಿರೀಕ್ಷೆಯ ಸಿನಿಮಾ ಜುಲೈ 30ಕ್ಕೆ ತೆರೆಗೆ ಬರುತ್ತಿದೆ.
ಮತ್ತೊಂದೆಡೆ ರಾಜಮೌಳಿ ನಿರ್ದೇಶನ ಆರ್ ಆರ್ ಆರ್ ಚಿತ್ರದಲ್ಲಿ ಆಲಿಯಾ ಭಟ್ ನಾಯಕಿಯಾಗಿ ನಟಿಸಿದ್ದಾರೆ. ಇದೇ ಮೊದಲ ಬಾರಿಗೆ ತೆಲುಗು ಚಿತ್ರದಲ್ಲಿ ಆಲಿಯಾ ಭಟ್ ಬಣ್ಣ ಹಚ್ಚಿದ್ದು, ಈ ಸಿನಿಮಾ ಪ್ಯಾನ್ ಇಂಡಿಯಾ ರಿಲೀಸ್ ಆಗುತ್ತಿದೆ. ಇದರ ಜೊತೆ ರಣ್ಬೀರ್ ಕಪೂರ್, ಅಮಿತಾಭ್ ಬಚ್ಚನ್, ನಾಗಾರ್ಜುನ ಜೊತೆ ನಟಿಸಿರುವ ಬ್ರಹ್ಮಾಸ್ತ್ರ ಸಿನಿಮಾನೂ ತೆರೆಗೆ ಬರಲು ಸಜ್ಜಾಗಿದೆ.