Just In
Don't Miss!
- Automobiles
2021ರ ಸ್ವಿಫ್ಟ್ ಕಾರಿನ ಆಕ್ಸೆಸರಿಸ್ ಪ್ಯಾಕೇಜ್ ಬಿಡುಗಡೆ ಮಾಡಿದ ಮಾರುತಿ ಸುಜುಕಿ
- News
"ಕಾಂಗ್ರೆಸ್ ಈಗ ಒಡೆದ ಮನೆ; ಮೂರು ಗುಂಪುಗಳ ನಡುವೆ ನಿರಂತರ ಗುದ್ದಾಟ''
- Finance
30,000 ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳಲಿದೆ ಕ್ಯಾಪ್ಜೆಮಿನಿ
- Sports
ಶ್ರೀಲಂಕಾ ವಿರುದ್ಧದ ಸರಣಿಗೆ ವಿಂಡೀಸ್ ತಂಡ ಪ್ರಕಟ, ಗೇಲ್ ವಾಪಸ್
- Lifestyle
ಮಾರ್ಚ್ ತಿಂಗಳಲ್ಲಿ ವಿವಾಹವಾಗಲು ಇಲ್ಲಿದೆ ಶುಭದಿನಾಂಕಗಳು
- Education
RBI Grade B Admit Card 2021: ಪ್ರವೇಶ ಪತ್ರ ಡೌನ್ಲೋಡ್ ಮಾಡುವುದು ಹೇಗೆ ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಅಲ್ಲು ಅರ್ಜುನ್ ಗಾಗಿ ಮತ್ತೆ ತೆಲುಗಿಗೆ ಬಂದ ತಮಿಳು ಹಿಟ್ ನಿರ್ದೇಶಕ
ತಮಿಳಿನಲ್ಲಿ ವಾಸುದೇವ್ ಮೆನನ್ ಸಿನಿಮಾಗಳಿಗೆ ದೊಡ್ಡ ಅಭಿಮಾನಿ ವರ್ಗವೇ ಇದೆ. ನಿಜ ಜೀವನಕ್ಕೆ ಹೆಚ್ಚು ಹತ್ತಿರವಾದ ಕಮರ್ಶಿಯಲ್ ಮಾದರಿಯ ಸಿನಿಮಾಗಳಿಗೆ ಖ್ಯಾತರು ಗೌತಮ್ ವಾಸುದೇವ್ ಮೆನನ್.
ಈಗಾಗಲೇ ಹಲವಾರು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ಗೌತಮ್ ವಾಸುದೇವ್ ಮೆನನ್ ಅಲ್ಲು ಅರ್ಜುನ್ ಜೊತೆ ಸಿನಿಮಾ ಮಾಡುವ ಉಮೇದಿನಲ್ಲಿದ್ದಾರೆ.
ಚಿಯಾನ್ ವಿಕ್ರಂ ನಟನೆಯ 'ಧ್ರುವ ನಚ್ಚತ್ತಿರಮ್' ಸಿನಿಮಾವನ್ನು ನಿರ್ದೇಶನ ಮಾಡುತ್ತಿರುವ ಗೌತಮ್ ವಾಸುದೇವ್ ಮೆನನ್ ಆ ಸಿನಿಮಾದ ಬಳಿಕ ಅಲ್ಲು ಅರ್ಜುನ್ ಜೊತೆಗೆ ಸಿನಿಮಾ ಮಾಡಲಿದ್ದಾರೆ ಎನ್ನಲಾಗುತ್ತಿದೆ.
ಅಲ್ಲು ಅರ್ಜುನ್ ಪ್ರಸ್ತುತ 'ಪುಷ್ಪಾ' ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ ವಾಸುದೇವ್ ಮೆನನ್ ಅಲ್ಲು ಅರ್ಜುನ್ಗೆ ಕತೆ ಹೇಳಿದ್ದಾರೆ ಎನ್ನಲಾಗುತ್ತಿದ್ದು, ಕೆಲವೇ ದಿನಗಳಲ್ಲಿ ಅಧಿಕೃತವಾಗಿ ಸಿನಿಮಾ ಘೋಷಿಸುವ ಸಾಧ್ಯತೆ ಇದೆ. ಅಲ್ಲು ಅರ್ಜುನ್ ಹುಟ್ಟುಹಬ್ಬಕ್ಕೆ ಸಿನಿಮಾ ಸೆಟ್ಟೇರಲಿದೆ ಎಂಬ ಸುದ್ದಿಯೂ ಇದೆ.
ತಮಿಳುನಾಡಿನಲ್ಲಿ ಅಲ್ಲು ಅರ್ಜುನ್ಗೆ ಹಲವಾರು ಮಂದಿ ಅಭಿಮಾನಿಗಳಿದ್ದು, ಗೌತಮ್ ಮೆನನ್ ನಿರ್ದೇಶಿಸಲಿರುವ ಸಿನಿಮಾ ಒಟ್ಟಿಗೆ ತೆಲುಗು-ತಮಿಳು ಭಾಷೆಗಳಲ್ಲಿ ತಯಾರಾಗಲಿದೆ. ಗೌತಮ್ ಅವರ ಹಲವು ಸಿನಿಮಾಗಳು ಹೀಗೆ ಒಟ್ಟಿಗೆ ತೆಲುಗು-ತಮಿಳು ಭಾಷೆಗಳಲ್ಲಿ ನಿರ್ಮಾಣಗೊಂಡಿವೆ.
ವರ್ನಂ ಆಯರಂ, ಏ ಮಾಯ ಚೇಸಾವೆ, ಕಾಕ-ಕಾಖ, ಘರ್ಷಣ, ರೆಹನಾ ಹೈ ತೆರೆ ದಿಲ್ ಮೇ, ವೇಟ್ಟೆಯಾಡು-ವಿಲೆಯಾಡು, ವಿನ್ನೈತಾಂಡಿ ವರುವಾಯ ಇನ್ನೂ ಹಲವು ಹಿಟ್ ಸಿನಿಮಾಗಳನ್ನು ನೀಡಿದ್ದಾರೆ ಗೌತಮ್ ಮೆನನ್. ಅವರು ನಟನಾಗಿಯು ಇತ್ತೀಚೆಗೆ ಸಾಕಷ್ಟು ಯಶಸ್ಸು ಗಳಿಸಿದ್ದಾರೆ.